ಬೆಂಗಳೂರು: ಹಿರಿಯ ವಕೀಲ (Lawyer) ಸಿ.ವಿ ನಾಗೇಶ್ ಅವರ ಪುತ್ರ ಅರುಣ್ ನಾಗೇಶ್ (41) ಹೃದಯಾಘಾತದಿಂದ (Heart Attack) ಸೋಮವಾರ ಮೃತಪಟ್ಟಿದ್ದಾರೆ.
ಕುಟುಂಬದ ಜೊತೆಗೆ ಊಟಿಗೆ (Ooty) ತೆರಳಿದ್ದ ಅವರು, ಹೋಟೆಲ್ ಒಂದರಲ್ಲಿ ಇಂದು ಬೆಳಗ್ಗೆ ಲೋ ಬಿಪಿಯಾಗಿ ಕುಸಿದು ಬಿದ್ದಿದ್ದಾರೆ. ಕೂಡಲೇ ಅವರನ್ನು ಆಸ್ಪತ್ರೆಗೆ ಸಾಗಿಸುವ ಪ್ರಯತ್ನ ಮಾಡಲಾಯಿತು. ಆದರೆ ಮಾರ್ಗ ಮಧ್ಯೆಯೇ ಅವರು ಸಾವನ್ನಪ್ಪಿದ್ದಾರೆ. ಇದನ್ನೂ ಓದಿ: ಬಸ್ ನಿಲ್ಲಿಸದ್ದಕ್ಕೆ ಕಲ್ಲು ಎಸೆದು ಶಕ್ತಿ ಪ್ರದರ್ಶಿಸಿದ ಮಹಿಳೆ – 5 ಸಾವಿರ ದಂಡ ಕಟ್ಟಿ ಅದೇ ಬಸ್ನಲ್ಲಿ ಪ್ರಯಾಣ
ಮೃತ ದೇಹವನ್ನು ಬೆಂಗಳೂರಿಗೆ ತರಲಾಗುತ್ತಿದ್ದು, ಮಂಗಳವಾರ ಮಧ್ಯಾಹ್ನ ಅಂತಿಮ ಸಂಸ್ಕಾರ ನೆರವೇರಲಿದೆ. ಇದನ್ನೂ ಓದಿ: ರಸ್ತೆಯ ಮೇಲಲ್ಲ, ಕೋರ್ಟ್ನಲ್ಲಿ ಹೋರಾಟ ಮುಂದುವರೆಯಲಿದೆ – ಸಿಂಗ್ಗೆ ಕುಸ್ತಿಪಟುಗಳ ಎಚ್ಚರಿಕೆ