ಚಿಕ್ಕೋಡಿ: ಬೆಳಗಾವಿ ಜಿಲ್ಲೆಯ ರಾಯಭಾಗ ತಾಲೂಕಿನ ಹಾರೂಗೇರಿ ಬಳಿ ಮಾಜಿ ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ ಕಾರು ಅಪಘಾತವಾಗಿದೆ.
ಅಡ್ಡ ಬಂದ ಬೈಕ್ಗೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಹೋಗಿ ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿಯಾಗಿದೆ. ಕಾರಿನಲ್ಲಿ ಚಲಿಸುತ್ತಿದ್ದ ಲಕ್ಷ್ಮಣ ಸವದಿ ಸೇರಿದಂತೆ ನಾಲ್ವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಇದನ್ನೂ ಓದಿ: 50 ಸಾವಿರ ಕುಟುಂಬಗಳಿಗೆ ತಲಾ 5 ಸಾವಿರ ಚೆಕ್ ವಿತರಣೆ: ಕೆಜಿಎಫ್ ಬಾಬು
ಕಾರು ಪಲ್ಟಿಯಾಗುತ್ತಿದ್ದಂತೆ ಸ್ಥಳೀಯರು ಸ್ಥಳಕ್ಕೆ ಬಂದು ಸಹಾಯಕ್ಕೆ ದಾವಿಸಿದರು. ಕಾರಿನಲ್ಲಿದ್ದವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಅಪಾಯದಿಂದ ಪಾರಾಗಿದ್ದಾರೆ.
ಬಿದ್ದ ಕಾರಿನಿಂದ ಲಕ್ಷ್ಮಣ ಸವದಿ, ಕಾರು ಚಾಲಕ ಹಾಗೂ ಗನ್ ಮ್ಯಾನ್ ಅವರನ್ನು ಹೊರಕ್ಕೆ ಕರೆತರಲಾಯಿತು. ಹಾರೂಗೇರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಘಟನೆ ನಡೆದಿದೆ. ಇದನ್ನೂ ಓದಿ: ಮೋದಿ ಕಾರ್ಯಕ್ರಮಕ್ಕೆ ಬಲವಂತವಾಗಿ ಜನರಿಗೆ ಆಹ್ವಾನ – ಯು.ಟಿ.ಖಾದರ್ ಆರೋಪ