ಚಿಕ್ಕೋಡಿ: ರಾಜಕಾರಣದಲ್ಲಿ ಅಧಿಕಾರ ಶ್ವಾಶ್ವತವಲ್ಲ. ಅವಕಾಶ ಸಿಕ್ಕಾಗ ಸದ್ಬಳಕೆ ಮಾಡಿಕೊಳ್ಳಬೇಕು ಎಂದು ಮಾಜಿ ಡಿಸಿಎಂ ಲಕ್ಷ್ಮಣ್ ಸವದಿ ಅಭಿಪ್ರಾಯಪಟ್ಟಿದ್ದಾರೆ.
ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಾಜಿ ಸಚಿವ ಶ್ರೀಮಂತ ಪಾಟೀಲ್ ಬಿಜೆಪಿ ಸೇರುವಾಗ ಹಣದ ಅಮೀಷ ಒಡ್ಡಿದ್ದರು ಎಂಬ ಹೇಳಿಕೆಗೆ ಪ್ರತಿಕ್ರಿಯಿಸಿ, ಶ್ರೀಮಂತ ಪಾಟೀಲ್ರ ಹೇಳಿಕೆಗಳನ್ನು ಮಾಧ್ಯಮಗಳಲ್ಲಿ ನೋಡಿದ್ದೇನೆ. ಈ ಬಗ್ಗೆ ಅವರನ್ನು ಭೇಟಿ ಮಾಡಿಲ್ಲ. ಯಾರು ಹಣ ಕೊಡಲು ಹೋಗಿದ್ದರು, ಯಾರು ಅಮೀಷ ಒಡ್ಡಿದ್ದರು ಎಂಬುದನ್ನು ಪರೀಶಿಲನೆ ಮಾಡಬೇಕು ಎಂದರು. ಇದನ್ನೂ ಓದಿ: ಹೆಣ್ಣು ಬಳೆ ತೊಟ್ಟಿದ್ದಾಳೆ ಅಂದರೆ ಅಬಲೆ ಅಂತಾನಾ? – ತನ್ವೀರ್ ಸೇಠ್ ವಿರುದ್ಧ ಪ್ರತಾಪ್ ಸಿಂಹ ಕಿಡಿ
ರಾಜಕಾರಣದಲ್ಲಿ ಅಧಿಕಾರ ಶಾಶ್ವತವಲ್ಲ. ಅವಕಾಶ ಸಿಕ್ಕಾಗ ಸದ್ಬಳಕೆ ಮಾಡಿಕೊಳ್ಳಬೇಕು. ಶ್ರೀಮಂತ ಪಾಟೀಲ್ ವೈಮನಸ್ಸಿನಿಂದ ಹಾಗೆ ಹೇಳುತ್ತಿದ್ದಾರೆ ಅಷ್ಟೆ. ಮಾತನಾಡುವ ಭರದಲ್ಲಿ ಈ ರೀತಿ ಹೇಳಿರಬಹುದು. ಖುದ್ದಾಗಿ ಅವರನ್ನು ಭೇಟಿಯಾಗಿ ಈ ಬಗ್ಗೆ ಮಾತನಾಡುತ್ತೇನೆ ಎಂದರು. ಇದನ್ನೂ ಓದಿ: ಹಿಂದೂ ದೇವಸ್ಥಾನ ಟಾರ್ಗೆಟ್ ಮಾಡಿ ಧ್ವಂಸ ಮಾಡಲಾಗುತ್ತಿದೆ: ಪ್ರತಾಪ್ ಸಿಂಹ