ಚಿಕ್ಕೋಡಿ: ಕಾಂಗ್ರೆಸ್ (Congress) ಪಕ್ಷದ ತಾಯಿ ಬಂಜೆಯಾಗಿದ್ದಾಳೆ ಇಲ್ಲಿ ಮಕ್ಕಳು ಹುಟ್ಟುವ ಪ್ರಶ್ನೆ ಉದ್ಭವವಾಗುವುದಿಲ್ಲ ಎಂದು ಪರಿಷತ್ ಸದಸ್ಯ ಹಾಗೂ ರಾಜ್ಯ ಬಿಜೆಪಿ (BJP) ಉಪಾಧ್ಯಕ್ಷ ಲಕ್ಷ್ಮಣ ಸವದಿ (Laxman Savadi) ವಿವಾದಾತ್ಮಕ ಹೇಳಿಕೆ ನೀಡಿದರು.
ಬೆಳಗಾವಿ (Belagavi) ಜಿಲ್ಲೆಯ ಅಥಣಿಯಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಅವರು, 50 ದಿನದಲ್ಲಿ ಬಿಜೆಪಿ ಸರ್ಕಾರ ಉರುಳುತ್ತದೆ ಎನ್ನುವ ಡಿ.ಕೆ ಶಿವಕುಮಾರ್ (D.K Shivakumar) ಹೇಳಿಕೆಗೆ ತಿರುಗೇಟು ನೀಡಿದರು. ಕಾಂಗ್ರೆಸ್ನವರು ಕೂಸು ಹುಟ್ಟುವ ಮೊದಲೇ ಕುಲಾಯಿ ಹೋಲಿಸುತ್ತಿದ್ದಾರೆ. ಇಲ್ಲಿ ಕೂಸು ಹುಟ್ಟುವ ಪ್ರಶ್ನೆಯೇ ಇಲ್ಲ ಎಂದು ವಾಗ್ದಾಳಿ ನಡೆಸಿದರು.
ರಮೇಶ್ ಜಾರಕಿಹೊಳಿ (Ramesh Jarkiholi) ಸಿಡಿ ಪ್ರಕರಣ (CD Case) ವಿಚಾರವಾಗಿ ಪ್ರತಿಕ್ರಿಯಿಸಿ, ರಮೇಶ್ ಜಾರಕಿಹೊಳಿ ಹಾಗೂ ಡಿ.ಕೆ ಶಿವಕುಮಾರ್ ಇಬ್ಬರ ವೈಯಕ್ತಿಕ ವಿವಾದ. ಈ ವಿಚಾರಗಳು ಬಿಜೆಪಿ ಪಕ್ಷಕ್ಕೂ ಕಾಂಗ್ರೆಸ್ ಪಕ್ಷಕ್ಕೂ ಸಂಬಂಧವಿಲ್ಲ. ಈ ಬಗ್ಗೆ ನಾನು ಪ್ರತಿಕ್ರಿಯೆ ನೀಡುವುದಿಲ್ಲ. ಸಿಡಿ ಪ್ರಕರಣ ಸಿಬಿಐ ತನಿಖೆ ಬಗ್ಗೆ ವರಿಷ್ಠರು ತೀರ್ಮಾನ ತೆಗೆದುಕೊಳ್ಳುತ್ತಾರೆ ಎಂದು ತಿಳಿಸಿದರು.
Live Tv
[brid partner=56869869 player=32851 video=960834 autoplay=true]
Join our Whatsapp group by clicking the below link
https://chat.whatsapp.com/E6YVEDajTzH06LOh77r25k