ಪಾಲಕ್ಕಾಡ್: ಕೇರಳದ ಆಡಳಿತಾರೂಢ ಲೆಫ್ಟ್ ಡೆಮಾಕ್ರಟಿಕ್ ಫ್ರಂಟ್ (LDF) ಮತ್ತು ಕಾಂಗ್ರೆಸ್ ನೇತೃತ್ವದ ಯುಡಿಎಫ್ (UDF) ರಾಜ್ಯದ ಸ್ಥಿತಿಯನ್ನು ಹದಗೆಡಿಸುತ್ತಿವೆ. ಕೇರಳದ (Kerala) ಜನರು ಎಲ್ಡಿಎಫ್ ಮತ್ತು ಯುಡಿಎಫ್ ಎರಡರ ಬಗ್ಗೆ ಎಚ್ಚರದಿಂದಿರಬೇಕು ಎಂದು ಪ್ರಧಾನಿ ನರೇಂದ್ರ ಮೋದಿ (Narendra Modi) ವಿಪಕ್ಷಗಳ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ಪಾಲಕ್ಕಾಡ್ನಲ್ಲಿ (Palakkad) ಸಾರ್ವಜನಿಕ ರ್ಯಾಲಿಯನ್ನುದ್ದೇಶಿಸಿ ಮಾತನಾಡಿದ ಅವರು, ಕೇರಳ ಅಥವಾ ಪಶ್ಚಿಮ ಬಂಗಾಳದಲ್ಲಿ ಎಲ್ಲಾ ಎಡ ಸರ್ಕಾರಗಳು ಒಂದೇ ಆಗಿದ್ದು, ಅವರು ಅಭಿವೃದ್ಧಿಗೆ ಅಡ್ಡಗಾಲು ಹಾಕುತ್ತಾರೆ ಎಂದು ಆರೋಪಿಸಿದರು. ಕೇರಳ ಮತ್ತು ಇಡೀ ಪ್ರದೇಶದ ಅಭಿವೃದ್ಧಿಗೆ ಬಿಜೆಪಿ ನೇತೃತ್ವದ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟದ ಪ್ರಯತ್ನಗಳಿಗೆ ವಿರೋಧ ಪಕ್ಷಗಳು ಅಡ್ಡಿಪಡಿಸುತ್ತವೆ. ರಾಷ್ಟ್ರೀಯ ಹೆದ್ದಾರಿ ಯೋಜನೆಗಳಿಗೆ ಅಡ್ಡಿಪಡಿಸಲು ಪ್ರಯತ್ನಿಸುತ್ತಿದ್ದಾರೆ ಮತ್ತು ಕೇಂದ್ರ ಸರ್ಕಾರ ರಾಜ್ಯಕ್ಕೆ ಮೀಸಲಿಟ್ಟ ಹಣವನ್ನು ದುರುಪಯೋಗ ಪಡಿಸಿಕೊಳ್ಳುತ್ತಿದ್ದಾರೆ ಎಂದು ಆರೋಪಿಸಿದರು. ಇದನ್ನೂ ಓದಿ: ಕೇಜ್ರಿವಾಲ್ರನ್ನು ಭಯೋತ್ಪಾದಕನಂತೆ ನಡೆಸಿಕೊಳ್ಳಲಾಗುತ್ತಿದೆ: ಪಂಜಾಬ್ ಸಿಎಂ
ಪಶ್ಚಿಮ ಬಂಗಾಳದಿಂದ ಕೇರಳದವರೆಗೆ ಎಲ್ಲಾ ಎಡಪಂಥೀಯ ಸರ್ಕಾರಗಳ ಸ್ವಭಾವ ಸಾಮಾನ್ಯವಾಗಿದೆ. ಅವರಿಗೆ ಯಾವ ಎಡವಿಲ್ಲ ಮತ್ತು ಯಾವ ಬಲವಿಲ್ಲ. ಕೇರಳದಲ್ಲಿ ಕಾಂಗ್ರೆಸ್ ಎಡ ಪಕ್ಷದ ಜನರನ್ನು ‘ಭಯೋತ್ಪಾದಕರು’ ಎಂದು ಕರೆಯುತ್ತದೆ. ಆದರೆ ದೆಹಲಿಯಲ್ಲಿ ಕಾಂಗ್ರೆಸ್ ಮತ್ತು ಈ ‘ಭಯೋತ್ಪಾದಕರು’ ಒಟ್ಟಿಗೆ ಕುಳಿತು ಒಟ್ಟಿಗೆ ತಿನ್ನುತ್ತಾರೆ ಮತ್ತು ಚುನಾವಣೆಗೆ ತಂತ್ರಗಳನ್ನು ಮಾಡುತ್ತಾರೆ. ಇಂತಹ ಜನರ ಬಗ್ಗೆ ಎಚ್ಚರಿಕೆ ಇರಲಿ ಎಂದು ಹರಿಹಾಯ್ದರು. ಇದನ್ನೂ ಓದಿ: ಕುಟುಂಬದೊಂದಿಗೆ ಅಯೋಧ್ಯೆಯಲ್ಲಿ ರಾಮನವಮಿ ಆಚರಣೆಗೆ ಅರುಣ್ ಯೋಗಿರಾಜ್ ಪ್ಲಾನ್
ಕಾಂಗ್ರೆಸ್ನ ದೊಡ್ಡ ನಾಯಕರೊಬ್ಬರು ಉತ್ತರ ಪ್ರದೇಶದಲ್ಲಿ ತಮ್ಮ ಕುಟುಂಬದ, ಸ್ಥಾನದ ಗೌರವವನ್ನು ಉಳಿಸಿಕೊಳ್ಳಲು ಕಷ್ಟಪಟ್ಟಿದ್ದಾರೆ. ಈಗ ಚುನಾವಣೆ ಗೆಲ್ಲಲು ಕೇರಳದಲ್ಲಿ ತಮ್ಮ ಹೊಸ ನೆಲೆಯನ್ನು ಕಂಡುಕೊಂಡಿದ್ದಾರೆ. ರಾಷ್ಟ್ರವಿರೋಧಿ ಧೋರಣೆಗಾಗಿ ದೇಶದಲ್ಲಿ ನಿಷೇಧಕ್ಕೊಳಗಾಗಿರುವ ಸಂಘಟನೆಯೊಂದರ ರಾಜಕೀಯ ವಿಭಾಗದ ಜೊತೆ ಕಾಂಗ್ರೆಸ್ ಹಿಂಬಾಗಿಲ ಒಪ್ಪಂದ ಮಾಡಿಕೊಂಡಿದೆ. ಕಾಂಗ್ರೆಸ್ನ ಯುವರಾಜ ಕೇರಳದ ಜನರಲ್ಲಿ ಮತ ಕೇಳುತ್ತಾರೆ. ಆದರೆ ನಿಮ್ಮ ಸಮಸ್ಯೆಗಳ ಬಗ್ಗೆ ಒಂದೇ ಒಂದು ಮಾತನ್ನೂ ಹೇಳುವುದಿಲ್ಲ ಎಂದು ಪರೋಕ್ಷವಾಗಿ ವಯನಾಡ್ನಿಂದ ಸ್ಪರ್ಧಿಸಿರುವ ರಾಹುಲ್ ಗಾಂಧಿ ಅವರನ್ನು ಟೀಕಿಸಿದರು. ಇದನ್ನೂ ಓದಿ: ಪ್ರಹ್ಲಾದ್ ಜೋಶಿ 2 ಲಕ್ಷಕ್ಕೂ ಹೆಚ್ಚು ಲೀಡ್ ಪಡೆದು ಗೆಲ್ತಾರೆ : ಬಿಎಸ್ವೈ ವಿಶ್ವಾಸ