ರಾಜ್ಯದಲ್ಲಿ ಕಾಂಗ್ರೆಸ್ (Congress) ಸರಕಾರ ಬಂದು ನೂರು ದಿನಗಳು ಕಳೆದರೂ, ಈವರೆಗೂ ಬಿಜೆಪಿಯಿಂದ (BJP) ವಿರೋಧ ಪಕ್ಷದ ನಾಯಕನನ್ನು ಆಯ್ಕೆ ಮಾಡಲು ಆಗಿಲ್ಲ. ವಿಧಾನಸಭಾ ಅಧಿವೇಶನ ನಡೆದರೂ, ಬಜೆಟ್ ಮಂಡನೆಯಾದರೂ ಈವರೆಗೂ ವಿರೋಧ ಪಕ್ಷದ ನಾಯಕನ ಸ್ಥಾನಕ್ಕೆ ಯಾರೊಬ್ಬರೂ ಆಯ್ಕೆಯಾಗಿಲ್ಲ. ಹೀಗಾಗಿ ಜನರೂ ಬೇಸತ್ತಿದ್ದರು. ಇದೀಗ ನಿರ್ದೇಶಕ ನಾಗತಿಹಳ್ಳಿ ಚಂದ್ರಶೇಖರ್ (Nagatihalli Chandrasekhar) ಬಿಜೆಪಿಗೆ ಸಲಹೆಯೊಂದನ್ನು ನೀಡಿದ್ದಾರೆ.
ವಿರೋಧ ಪಕ್ಷದ ನಾಯಕನ (Leader of the Opposition) ಸ್ಥಾನದ ಕುರಿತಂತೆ ನಾಗತಿಹಳ್ಳಿ ಚಂದ್ರಶೇಖರ್ ಸೋಷಿಯಲ್ ಮೀಡಿಯಾದಲ್ಲಿ ಬರೆದಿದ್ದು, ‘ಬಿಜೆಪಿಗೆ ಒಂದು ವಿನಮ್ರ ಸಲಹೆ. ವಿಪಕ್ಷ ನಾಯಕನಿಲ್ಲದೆ ವಿಧಾನ ಸಭೆ ಅಪೂರ್ಣ ಎನಿಸುತ್ತಿದೆ. ನಿಮಗೆ ಆಯ್ಕೆ ತೀರಾ ಕಷ್ಟವಾದಲ್ಲಿ ಕಾಂಗ್ರೆಸ್ ನಲ್ಲೇ ಸೂಕ್ತರಾದ ಒಬ್ಬರನ್ನು ಹುಡುಕಿ ವಿಪಕ್ಷ ನಾಯಕನ ಹುದ್ದೆಯನ್ನು ಔಟ್ ಸೋರ್ಸ್ ಮಾಡಿ’ ಎಂದು ಸಲಹೆ ನೀಡಿದ್ದಾರೆ.
ನಾಗತಿಹಳ್ಳಿ ಅವರು ಈ ಸಲಹೆ ರಾಜಕೀಯ ವಲಯದಲ್ಲಿ ಸಾಕಷ್ಟು ಚರ್ಚೆಗೆ ಕಾರಣವಾಗಿದೆ. ಬಿಜೆಪಿಗೆ ಮುಖಭಂಗ ಎಂದು ಬಣ್ಣಿಸಲಾಗುತ್ತಿದೆ. ಇಂಥದ್ದೊಂದು ಮಾಡುವುದಕ್ಕೆ ಸಾಧ್ಯವಾ? ಎಂತಹ ಯೋಚನೆ ಇದು ಎಂದು ಕೆಲವರು ನಾಗತಿಹಳ್ಳಿ ವಿರುದ್ಧ ಕಾಮೆಂಟ್ ಮಾಡಿದ್ದಾರೆ.
Web Stories