ಸಿರಿಯಾದಲ್ಲಿ ಹೆಚ್ಚಿದ ಹಿಂಸಾಚಾರ – ಕೂಡಲೇ ದೇಶವನ್ನು ತೊರೆಯಿರಿ; ಭಾರತೀಯರಿಗೆ ಸೂಚನೆ

Public TV
1 Min Read
syria rebels

ಡೆಮಾಸ್ಕಸ್‌: ಸಿರಿಯಾದಲ್ಲಿ (Syria) ಹದಗೆಡುತ್ತಿರುವ ಪರಿಸ್ಥಿತಿಯ ಬಗ್ಗೆ ಭಾರತ ಸರ್ಕಾರ ಕಳವಳ ವ್ಯಕ್ತಪಡಿಸಿದರೆ. ಆದಷ್ಟು ಬೇಗ ಅಲ್ಲಿಂದ ಭಾರತಕ್ಕೆ ವಾಪಸ್‌ ಆಗಿ ಎಂದು ಭಾರತೀಯ ವಿದೇಶಾಂಗ ಸಚಿವಾಲಯ ಸೂಚನೆ ನೀಡಿದೆ.

ಜಿಹಾದಿ ಗುಂಪು ಹಯಾತ್ ತಹ್ರೀರ್ ಅಲ್-ಶಾಮ್ ನೇತೃತ್ವದ ದಂಗೆಕೋರರು ಸಿರಿಯಾದ ಪ್ರಮುಖ ನಗರಗಳನ್ನು ವಶಪಡಿಸಿಕೊಳ್ಳುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ದೇಶದಲ್ಲಿ ಬಿಕ್ಕಟ್ಟು ತಲೆದೋರಿದ್ದು, ಭಾರತೀಯರು ಸಂಕಷ್ಟಕ್ಕೆ ಸಿಲುಕಿದ್ದಾರೆ.

ಭಾರತದ ವಿದೇಶಾಂಗ ಸಚಿವಾಲಯ ಪ್ರಕಟಣೆ ಹೊರಡಿಸಿದ್ದು, ಅನಗತ್ಯ ಪ್ರಯಾಣ ಮುಂದೂಡಿ. ಲಭ್ಯವಿರುವ ವಾಣಿಜ್ಯ ವಿಮಾನಗಳ ಮೂಲಕ ಸಿರಿಯಾ ತೊರೆದು, ಆದಷ್ಟು ಬೇಗ ವಾಪಸ್‌ ಬನ್ನಿ ಎಂದು ಸಲಹೆ ನೀಡಿದೆ. ಇದನ್ನೂ ಓದಿ: ವಿಯೆಟ್ನಾಂ ಯುವತಿಯರಿಗೆ ಬಾಡಿಗೆಗೆ ಬಾಯ್‌ಫ್ರೆಂಡ್‌ ಬೇಕಂತೆ..; ಸೃಷ್ಟಿಯಾಗಿದೆ ಹೊಸ ಟ್ರೆಂಡ್‌ – ಯಾಕೆ ಗೊತ್ತಾ?

ತುರ್ತು ಸಹಾಯವಾಣಿ ಸಂಖ್ಯೆಯನ್ನು (+963 993385973) ಡೆಮಾಸ್ಕಸ್‌ನಲ್ಲಿರುವ ಭಾರತೀಯ ರಾಯಭಾರ ಕಚೇರಿಗಾಗಿ ಹಂಚಿಕೊಳ್ಳಲಾಗಿದೆ. ಈ ಸಂಖ್ಯೆಗೆ WhatsApp ನಲ್ಲಿ ಓದಿದ ಹೇಳಿಕೆಯನ್ನು ಸಹ ಬಳಸಬಹುದು. ಜೊತೆಗೆ ತುರ್ತು ಇಮೇಲ್ ಐಡಿಯನ್ನು ಕೂಡ ಸೇರಿಸಬಹುದು.

Share This Article