ರಾಯಚೂರು: ಉಪನ್ಯಾಸಕರೊಬ್ಬರನ್ನು ದೇವದುರ್ಗ-ಶಹಾಪೂರ ನಡು ರಸ್ತೆಯಲ್ಲಿಯೇ ಬರ್ಬರವಾಗಿ ಕೊಲೆ ಮಾಡಲಾಗಿದೆ.
ಮಾನಪ್ಪ ಗೋಪಳಾಪುರ(59) ಕೊಲೆಯಾದ ವ್ಯಕ್ತಿ ರ್ದುದೈವಿ. ಮಾನಪ್ಪ ಅವರು ದೇವದುರ್ಗದ ಬಾಲಕಿಯರ ಪದವಿಪೂರ್ವ ಕಾಲೇಜಿನಲ್ಲಿ ಉಪನ್ಯಾಸಕರಾಗಿ ಸೇವೆ ನಿರ್ವಯಿಸುತ್ತಿದ್ದರು. ಕೌಟುಂಬಿಕ ಕಲಹದ ಹಿನ್ನೆಲೆ ಕೊಲೆ ನಡೆದಿರುವ ಬಗ್ಗೆ ಶಂಕೆ ವ್ಯಕ್ತವಾಗಿದೆ. ಇದನ್ನೂ ಓದಿ: ಮಹಿಳೆ ಕತ್ತು ಹಿಸುಕಿ ಸಮಾಧಿ ಮಾಡಲು ಹೋಗಿ ತಾನೇ ಸತ್ತ
ಕತ್ತು, ತಲೆ ಭಾಗಕ್ಕೆ ಗಂಭೀರಗಾಯಗಳಾಗಿದ್ದು, ಮಾನಪ್ಪ ಅವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಯಾದಗಿರಿಯ ಶಹಾಪೂರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆರೋಪಿಗಳ ಪತ್ತೆಗೆ ಪೊಲೀಸರು ಬಲೆ ಬೀಸಿದ್ದು, ಕೊಲೆಯ ಬಗ್ಗೆ ವಿವರಗಳು ಸಿಕ್ಕಿಲ್ಲ. ಈ ಹಿನ್ನೆಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಯುತ್ತಿದೆ.