ಧೋನಿಯಂತಹ ಪ್ರಸಿದ್ಧ ಆಟಗಾರನಿಗೆ ಯಾವಾಗ ನಿವೃತ್ತಿ ಹೊಂದಬೇಕು ಗೊತ್ತು – ಎಂಎಸ್‍ಕೆ ಪ್ರಸಾದ್

Public TV
2 Min Read
msk prasad

ನವದೆಹಲಿ: ಎಂ.ಎಸ್ ಧೋನಿಯಂತಹ ಪ್ರಸಿದ್ಧ ಆಟಗಾರನಿಗೆ ಯಾವಾಗ ನಿವೃತ್ತಿ ಹೊಂದಬೇಕು ಎಂಬುದು ಗೊತ್ತು ಎಂದು ಭಾರತದ ಆಯ್ಕೆ ಸಮಿತಿಯ ಅಧ್ಯಕ್ಷ ಎಂಎಸ್‍ಕೆ ಪ್ರಸಾದ್ ಹೇಳಿದ್ದಾರೆ.

ಎಂಎಸ್‍ಕೆ ಪ್ರಸಾದ್ ನೇತೃತ್ವದ ಆಯ್ಕೆ ಸಮಿತಿ ಇಂದು ಮುಂಬೈನಲ್ಲಿ ಸಭೆ ಸೇರಿ ಆಗಸ್ಟ್ 2ರಿಂದ ಭಾರತದ ಮತ್ತು ವೆಸ್ಟ್ ಇಂಡೀಸ್ ಪ್ರವಾಸಕ್ಕಾಗಿ ಏಕದಿನ, ಟಿ-20 ಮತ್ತು ಟೆಸ್ಟ್ ಸರಣಿಯ ತಂಡಗಳನ್ನು ಆಯ್ಕೆ ಮಾಡಿದರು.

Dhoni

ಈ ವೇಳೆ ಧೋನಿ ವಿಚಾರದ ಬಗ್ಗೆ ಮಾತನಾಡಿರುವ ಎಂ.ಎಸ್.ಕೆ ಪ್ರಸಾದ್, ನಿವೃತ್ತಿ ಎಂಬುದು ಆಟಗಾರ ವೈಯಕ್ತಿಕ ವಿಷಯವಾಗಿದ್ದು, ಅವರೇ ಆ ಬಗ್ಗೆ ನಿರ್ಧಾರ ಮಾಡಬೇಕು. ಅದ್ದರಿಂದ ಧೋನಿಯಂತಹ ಅನುಭವಿ ಆಟಗಾರರಿಗೆ ಯಾವಾಗ ನಿವೃತ್ತಿ ಹೊಂದಬೇಕು ಎಂಬುದು ಗೊತ್ತು ಎಂದು ಹೇಳಿದ್ದಾರೆ.

rishabhpant170319 1 0

ಎಂಎಸ್ ಧೋನಿ ಅವರು ಈ ಸರಣಿಗೆ ಲಭ್ಯವಿಲ್ಲ. ಅವರು ಈ ಸರಣಿಗೆ ತಮ್ಮ ಅಲಭ್ಯತೆಯನ್ನು ವ್ಯಕ್ತಪಡಿಸಿದ್ದಾರೆ. ಈ ವೇಳೆ ಧೋನಿ ಅವರ ಬದಲು ಮೂರು ಮಾದರಿಯ ಕ್ರಿಕೆಟ್‍ಗೂ ರಿಷಭ್ ಪಂತ್ ಅವರನ್ನು ಆಯ್ಕೆ ಮಾಡಿಕೊಂಡಿರುವ ಬಗ್ಗೆ ಸ್ಪಷ್ಟನೆ ನೀಡಿ ಈ ಬಾರಿಯ ವಿಶ್ವಕಪ್ ನಂತರ ಹಲವಾರು ಯೋಜನೆಗಳನ್ನು ಹಾಕಿಕೊಂಡಿದ್ದೇವೆ. ಅದ್ದರಿಂದ ರಿಷಬ್ ಪಂತ್ ಅವರಿಗೆ ಹೆಚ್ಚಿನ ಅವಕಾಶ ನೀಡಿ ಅವರನ್ನು ಮುಂದಿನ ಯೋಜನೆಗಳಿಗೆ ತಯಾರಿ ಮಾಡುತ್ತಿದ್ದೇವೆ ಎಂದು ಹೇಳಿದರು.

MSD

ವಿಶ್ವಕಪ್‍ನಲ್ಲಿ ಎಂ ಎಸ್ ಧೋನಿ ಅವರ ಸ್ಟ್ರೈಕ್ ರೇಟ್ ಬಗ್ಗೆ ಬಹಳ ಚರ್ಚೆಯಾಗುತ್ತಿದೆ. ಆದರ ಬಗ್ಗೆ ಈಗ ಮಾತನಾಡುವುದು ಸೂಕ್ತವಲ್ಲ. ಆದರೆ ಭಾರತ ತಂಡದಲ್ಲಿ ಯುವ ಆಟಗಾರರನ್ನು ಸಿದ್ಧ ಮಾಡಲು ಹೊರಟಿದ್ದೇವೆ. ಅದ್ದರಿಂದ ರಿಷಬ್ ಪಂತ್‍ಗೆ ಮೂರು ಮಾದರಿಯ ಪಂದ್ಯಗಳಲ್ಲೂ ವಿಕೆಟ್ ಕೀಪರ್ ಆಗಿ ಅವಕಾಶ ನೀಡಿದ್ದೇವೆ ಎಂದರು.

msd fbsport 647 061616104643 1

ಧೋನಿ ಟೆರಿಟೋರಿಯಲ್ ಆರ್ಮಿಯ ಪ್ಯಾರಾಶೂಟ್ ರೆಜಿಮೆಂಟ್‍ನ ಕರ್ನಲ್ ಆಗಿದ್ದಾರೆ. ಹಾಗಾಗಿ ತಮ್ಮ ಎರಡು ತಿಂಗಳ ರಜೆಯನ್ನು ರೆಜಿಮೆಂಟ್ ನಲ್ಲಿ ಕಳೆಯಲಿದ್ದಾರೆ. ಧೋನಿ ಅವರೇ ಸ್ವಇಚ್ಛೆಯಿಂದ ವೆಸ್ಟ್ ಇಂಡೀಸ್ ಜೊತೆಗಿನ ಪಂದ್ಯಕ್ಕೆ ಅಲಭ್ಯರಾಗುತ್ತಿದ್ದಾರೆ. ತಮ್ಮ ಎರಡು ತಿಂಗಳ ರಜಾವಧಿಯನ್ನು ಪ್ಯಾರಾಮಿಲಿಟ್ರಿ ರೆಜಿಮೆಂಟ್ ಜೊತೆ ವ್ಯಯಿಸಲಿದ್ದಾರೆ ಎಂದು ಬಿಸಿಸಿಐ ಅಧಿಕಾರಿಯೊಬ್ಬರು ಸುದ್ದಿಸಂಸ್ಥೆಗೆ ತಿಳಿಸಿದ್ದರು.

ವೆಸ್ಟ್ ಇಂಡೀಸ್ ಪ್ರವಾಸಕ್ಕೆ ಮೂರು ಮಾದರಿಯ ಪಂದ್ಯಗಳಿಗೂ ಆಟಗಾರನ್ನು ಆಯ್ಕೆ ಮಾಡಿದ್ದು, ಆಟಗಾರರ ಪಟ್ಟಿ ಇಂತಿದೆ.

ಟೆಸ್ಟ್ ತಂಡ:
ವಿರಾಟ್ ಕೊಹ್ಲಿ (ನಾಯಕ) ರೋಹಿತ್ ಶರ್ಮಾ (ಉಪನಾಯಕ), ಅಜಿಂಕ್ಯ ರಹಾನೆ, ಮಯಾಂಕ್ ಅಗರ್ವಾಲ್, ಕೆ. ಎಲ್.ರಾಹುಲ್, ಚೇತೇಶ್ವರ ಪೂಜಾರ, ಹನುಮ ವಿಹಾರಿ, ರಿಷಬ್ ಪಂತ್ (ವಿಕೆಟ್ ಕೀಪರ್), ವೃದ್ಧಿಮಾನ್ ಸಹಾ, ಆರ್ ಅಶ್ವಿನ್, ರವೀಂದ್ರ ಜಡೇಜಾ, ಕುಲದೀಪ್ ಯಾದವ್, ಇಶಾಂತ್ ಶರ್ಮಾ, ಮೊಹಮ್ಮದ್ ಶಮಿ, ಜಸ್ಪ್ರೀತ್ ಬೂಮ್ರಾ ಹಾಗೂ ಉಮೇಶ್ ಯಾದವ್.

ಏಕದಿನ ತಂಡ:
ವಿರಾಟ್ ಕೊಹ್ಲಿ (ನಾಯಕ), ರೋಹಿತ್ ಶರ್ಮಾ (ಉಪನಾಯಕ), ಶಿಖರ್ ಧವನ್, ಕೆ.ಎಲ್.ರಾಹುಲ್, ಶ್ರೇಯಸ್ ಐಯ್ಯರ್, ಮನೀಶ್ ಪಾಂಡೆ, ರಿಷಬ್ ಪಂತ್ (ವಿಕೆಟ್ ಕೀಪರ್), ರವೀಂದ್ರ ಜಡೇಜಾ, ಕುಲದೀಪ್ ಯಾದವ್, ಯಜುವೇಂದ್ರ ಚಹಲ್, ಕೇದಾರ್ ಜಾಧವ್, ಮೊಹಮ್ಮದ್ ಶಮಿ, ಭುವನೇಶ್ವರ್ ಕುಮಾರ್, ಖಲೀಲ್ ಅಹ್ಮದ್ ಹಾಗೂ ನವದೀಪ್ ಸೈನಿ.

ಟಿ-20 ತಂಡ:
ವಿರಾಟ್ ಕೊಹ್ಲಿ (ನಾಯಕ), ರೋಹಿತ್ ಶರ್ಮಾ (ಉಪನಾಯಕ), ಶಿಖರ್ ಧವನ್, ಕೆ.ಎಲ್.ರಾಹುಲ್, ಶ್ರೇಯಸ್ ಐಯ್ಯರ್, ಮನೀಶ್ ಪಾಂಡೆ, ರಿಷಬ್ ಪಂತ್ (ವಿಕೆಟ್ ಕೀಪರ್), ಕೃಣಾಲ್ ಪಾಂಡ್ಯ, ರವೀಂದ್ರ ಜಡೇಜ, ವಾಷಿಂಗ್ಟನ್ ಸುಂದರ್, ರಾಹುಲ್ ಚಹರ್, ಭುವನೇಶ್ವರ್ ಕುಮಾರ್, ಖಲೀಲ್ ಅಹ್ಮದ್, ದೀಪಕ್ ಚಹರ್ ಹಾಗೂ ನವದೀಪ್ ಸೈನಿ.

Share This Article
Leave a Comment

Leave a Reply

Your email address will not be published. Required fields are marked *