ಬೆಳಗಾವಿ: ಜೂನ್ನಲ್ಲಿ ನಡೆಯುವ ಶಿಕ್ಷಕರ ಕ್ಷೇತ್ರದ ಪರಿಷತ್ ಚುನಾವಣೆಗೆ ಕಾಂಗ್ರೆಸ್ ಪಕ್ಷ ತನ್ನ ಅಭ್ಯರ್ಥಿಯನ್ನು ಪ್ರಕಟಿಸಿದೆ.
ವಾಯವ್ಯ ಶಿಕ್ಷಕರ ಮತ ಕ್ಷೇತ್ರದ ಅಭ್ಯರ್ಥಿಯನ್ನಾಗಿ ಪ್ರಕಾಶ್ ಹುಕ್ಕೇರಿಯವರನ್ನು ಕಾಂಗ್ರೆಸ್ ಆಯ್ಕೆ ಮಾಡಿದೆ. ಹುಕ್ಕೇರಿಯವರು ಮಾಜಿ ಸಚಿವ ಹಾಗೂ ಚಿಕ್ಕೋಡಿ ಲೋಕಸಭಾ ಕ್ಷೇತ್ರದ ಮಾಜಿ ಸಂಸದರಾಗಿದ್ದಾರೆ. ಇದನ್ನೂ ಓದಿ: ಧ್ವಂಸಗೊಂಡ ಅಪ್ಪನ ಅಂಗಡಿಯಲ್ಲಿ ಕಾಯಿನ್ ಸಂಗ್ರಹಿಸುತ್ತಿದ್ದ ಬಾಲಕ – ಫೋಟೋ ವೈರಲ್
ಬೆಳಗಾವಿ, ಬಾಗಲಕೋಟೆ ಮತ್ತು ವಿಜಯಪುರ ಜಿಲ್ಲೆಗಳನ್ನು ಒಳಗೊಂಡ ವಾಯವ್ಯ ಶಿಕ್ಷಕರ ಕ್ಷೇತ್ರದಲ್ಲಿ ಬಿಜೆಪಿಯು ಈಗಾಗಲೇ ಕ್ಷೇತ್ರದ ಹಾಲಿ ಸದಸ್ಯ ಅರುಣ್ ಶಹಾಪುರ ಅವರಿಗೆ ಟಿಕೆಟ್ ನೀಡಿದೆ.