ಮಡಿಕೇರಿ: ಕಿಡಿಗೇಡಿಗಳು ದೇವಾಲಯದ ಪ್ರವೇಶ ದ್ವಾರಕ್ಕೆ ಕತ್ತರಿಸಿದ ಗೋವಿನ ಕಾಲುಗಳನ್ನು ಕಟ್ಟಿದ ಘಟನೆ ಕೊಡಗು ಜಿಲ್ಲೆಯ ಮಡಿಕೇರಿ ತಾಲೂಕಿನ ಕಕ್ಕಬ್ಬೆ ನಟ್ಟುಮಾಡುವಿನಲ್ಲಿ ನಡೆದಿದೆ.
ಕಕ್ಕಬ್ಬೆ ಪಟ್ಟಣದ ವಿರಾಜಪೇಟೆ ರಸ್ತೆಯ ಬದಿಯಲ್ಲಿ ಇರುವ ಭಗವತಿ ದೇವಾಲಯದಲ್ಲಿ ಕಿಡಿಗೇಡಿಗಳು ಪ್ಲಾಸ್ಟಿಕ್ ಚೀಲದಲ್ಲಿ ಗೋವಿನ 4 ಕಾಲುಗಳನ್ನು ಹಾಕಿ ದೇವಾಲಯದ ಪ್ರವೇಶ ದ್ವಾರದಲ್ಲಿ ಇಟ್ಟಿದ್ದಾರೆ.
ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಗೋವಿನ ಕಾಲುಗಳು ತುಂಬಿದ್ದ ಚೀಲವನ್ನ ವಶಕ್ಕೆ ಪಡೆದಿದ್ದಾರೆ. ಈ ಘಟನೆ ಖಂಡಿಸಿ ಸ್ಥಳೀಯರು ಪ್ರತಿಭಟನೆ ನಡೆಸಿದ್ದು, ಕಿಡಿಗೇಡಿಗಳ ಬಂಧನಕ್ಕೆ ಆಗ್ರಹಿಸಿದ್ದಾರೆ.
ಸ್ಥಳಕ್ಕೆ ಜಿಪಂ ಅಧ್ಯಕ್ಷ ಬಿಎ ಹರೀಶ್, ಸದಸ್ಯ ಮುರಳಿ ಕರುಂಬಯ್ಯ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸ್ಥಳೀಯರು ಆರೋಪಿಗಳನ್ನು ತಕ್ಷಣ ಬಂಧಿಸದಿದ್ದಲ್ಲಿ ಕೊಡಗು ಬಂದ್ ಮಾಡುವ ಬಗ್ಗೆ ಎಚ್ಚರಿಕೆಯನ್ನ ನೀಡಿದ್ದಾರೆ.
ಈ ಕುರಿತು ನಾಪೋಕ್ಲು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.