ಬಾಗಲಕೋಟೆ: ಜಿಲ್ಲೆಯ ಗುಳೇದಗುಡ್ಡ (Guledgudda) ತಾಲೂಕಿನಲ್ಲಿ ಬರುವ ಮಂಗಳಗುಡ್ಡ, ಚಿಮ್ಮಲಗಿ ಹಾಗೂ ಪಟ್ಟದಕಲ್ಲು ಗ್ರಾಮಕ್ಕೆ ಹೊಂದಿಕೊಂಡಂತಿರುವ ಗುಡ್ಡದಲ್ಲಿ ಚಿರತೆ (Leopard) ಕಾಣಿಸಿದೆ.
ಚಿರತೆ ಗುಡ್ಡದಲ್ಲಿ ಓಡಾಡುವ ದೃಶ್ಯವನ್ನು ಗ್ರಾಮಸ್ಥರು ಮೊಬೈಲಿನಲ್ಲಿ ಸೆರೆಹಿಡಿದಿದ್ದು ಆತಂಕದಲ್ಲಿದ್ದಾರೆ. ಇದನ್ನೂ ಓದಿ: ಇನ್ನುಂದೆ ʻಅನ್ನಭಾಗ್ಯʼ ಹಣದ ಬದಲು ಅಕ್ಕಿ ಕೊಡಲು ಸರ್ಕಾರ ತೀರ್ಮಾನ
ಚಿರತೆ ರಾತ್ರಿ ಆಕಳು ಮತ್ತು ಕರುವಿನ ಮೇಲೆ ದಾಳಿ ಮಾಡಿ, ತಿಂದು ಹೋದ ಘಟನೆಗಳು ನಡೆದಿವೆ. ಚಿರತೆ ಕಾಣಿಸಿದ್ದರಿಂದ ಗ್ರಾಮದ ರೈತರು ಹಾಗೂ ಗದ್ದೆಗಳಲ್ಲಿ ಕೆಲಸ ಮಾಡುವ ಜನರು ಭಯದಲ್ಲಿದ್ದಾರೆ.