ಕಾಳಗದಲ್ಲಿ ಗಾಯಗೊಂಡಿದ್ದ ಚಿರತೆಯ ಚಿಕಿತ್ಸೆಗಾಗಿ ಮೈಸೂರಿಗೆ ರವಾನೆ

Public TV
0 Min Read
cng leapord collage

ಚಾಮರಾಜನಗರ: ಅರಣ್ಯದಲ್ಲಿ ಮತ್ತೊಂದು ಚಿರತೆಯೊಂದಿಗಿನ ಕಾಳಗದಲ್ಲಿ ಗಾಯಗೊಂಡಿದ್ದ ಚಿರತೆಯೊಂದು ಚಾಮರಾಜನಗರ ಸಮೀಪದ ಹೊನ್ನಳ್ಳಿ ಬಳಿ ಕಾಣಿಸಿಕೊಂಡು ಕೆಲಕಾಲ ಆತಂಕ ಮೂಡಿಸಿತ್ತು.

ಕಳೆದ ನಾಲ್ಕೈದು ದಿನಗಳಿಂದ ಹೊನ್ನಳ್ಳಿ ಹೊರಭಾಗದ ಜಮೀನುಗಳಲ್ಲಿ ಅಡ್ಡಾಡುತ್ತಿದ್ದ ಈ ಚಿರತೆ ಸೋಮವಾರ ತೋಟವೊಂದರ ಮನೆಯ ಬಾಗಿಲಿನ ಬಳಿ ಮಲಗಿತ್ತು. ಬೆಳಗ್ಗೆ ಬಾಗಿಲು ತೆರೆದ ಮನೆಯವರು ಚಿರತೆ ನೋಡಿ ಗಾಬರಿಗೊಂಡು ತಕ್ಷಣ ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದಾರೆ.

cng leapord 2

ಚಾಮರಾಜನಗರದ ಅರಣ್ಯ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಅಸ್ವಸ್ಥಗೊಂಡಿದ್ದ ಚಿರತೆಯನ್ನು ಹಗ್ಗದಿಂದ ಕಟ್ಟಿಹಾಕಿದರು. ಚಿರತೆಯ ತಲೆ ಭಾಗದಲ್ಲಿ ತೀವ್ರ ಗಾಯಗಳಾಗಿದ್ದು, ಸ್ಥಳೀಯವಾಗಿ ಅರಣ್ಯ ಇಲಾಖೆಯಲ್ಲಿ ಪಶುವೈದ್ಯರು ಇಲ್ಲದ ಕಾರಣ ಹೆಚ್ಚಿನ ಚಿಕಿತ್ಸೆಗೆ ಮೈಸೂರಿನ ಮೃಗಾಲಯಕ್ಕೆ ಕೊಂಡೊಯ್ಯಲಾಯಿತು.

Share This Article
Leave a Comment

Leave a Reply

Your email address will not be published. Required fields are marked *