ಚಿಕ್ಕಮಗಳೂರು: 5 ವರ್ಷದ ಚಿರತೆಯೊಂದು ಚಿಕ್ಕಮಗಳೂರು ತಾಲೂಕಿನ ಬಸರವಳ್ಳಿ ಗ್ರಾಮದಲ್ಲಿ ಉರುಳಿಗೆ ಬಿದ್ದಿದೆ
ಗ್ರಾಮಸ್ಥರು ಪ್ರಾಣಿ ಬೇಟೆಗಾಗಿ ಕಾಫಿ ತೋಟದಲ್ಲಿ ಉರುಳನ್ನು ಹಾಕಿದ್ದರು. ಈ ಉರುಳಿಗೆ ಚಿರತೆ ಬಿದ್ದಿತ್ತು. ಚಿರತೆಯ ಒಂದು ಕಾಲು ಉರುಳಿನಲ್ಲಿ ಸಿಕ್ಕಿಕೊಂಡ ಕಾರಣ ನರಳಾಡುತಿತ್ತು.
ಉರುಳಿಗೆ ಬಿದ್ದ ಸುದ್ದಿ ತಿಳಿಯುತ್ತಿದ್ದಂತೆ ತಂಡೋಪತಂಡವಾಗಿ ಜನರು ಬಸರವಳ್ಳಿ ಗ್ರಾಮಕ್ಕೆ ಆಗಮಿಸಿದ್ದರು. ಸ್ಥಳಕ್ಕೆ ಅರಣ್ಯಾಧಿಕಾರಿಗಳು ಬಂದು ಚಿರತೆಯನ್ನು ರಕ್ಷಣೆ ಮಾಡಿದ್ದಾರೆ. ನಂತರ ಅದನ್ನು ಭದ್ರಾ ಅಭಯಾರಣ್ಯಕ್ಕೆ ಬಿಡಲಾಗಿದೆ.
ಉರುಳು ಹಾಕಿದವರ ವಿರುದ್ಧ ಅರಣ್ಯಾಧಿಕಾರಿಗಳ ಆಕ್ರೋಶ ವ್ಯಕ್ತಪಡಿಸಿದ್ದಾರೆ.