ಸಂತರ ಕೆಲ್ಸ ಸಂತರು ಮಾಡ್ಬೇಕು, ಸರ್ಕಾರದ ಕೆಲ್ಸ ಸರ್ಕಾರ ಮಾಡ್ಬೇಕು, ಮಠ ವಶಕ್ಕೆ ಪಡೆಯೋ ದುಸ್ಸಾಹಸ ಬೇಡ- ನಿರ್ಮಲಾನಂದ ಸ್ವಾಮೀಜಿ

Public TV
2 Min Read
CM SWAMIJI

ಬೆಂಗಳೂರು: ಮಠ ಮಾನ್ಯಗಳ ಸುಪರ್ದಿಗೆ ಸರ್ಕಾರದ ಸುತ್ತೋಲೆ ವಿಚಾರವಾಗಿ ಸರ್ಕಾರದ ನಡೆಯ ವಿರುದ್ಧ ಆದಿಚುಂಚನಗಿರಿಯ ನಿರ್ಮಾಲಾನಂದನಾಥ ಸ್ವಾಮೀಜಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಸುತ್ತೋಲೆಯನ್ನು ವಾಪಸ್ ಪಡೆದಿರುವ ಬಗ್ಗೆ ಗುರುವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದ್ದಾರೆ. ಬಹುಶಃ ಸಾರ್ವಜನಿಕರಲ್ಲಿ ಎದ್ದಿದ್ದ ಗೊಂದಲ, ಆತಂಕ ನಿವಾರಣೆಯಾಗಿದೆ. ಈ ರೀತಿಯ ಪ್ರಯತ್ನವನ್ನು ಯಾವ ಕಾಲಕ್ಕೂ ಮಾಡಬಾರದು ಎಂದರು.

641657 633737 siddaramaiah

ಸಂತರು ಮಾಡುವ ಕೆಲಸವೇ ಬೇರೆ. ಸರ್ಕಾರ ಮಾಡುವ ಕೆಲಸವೇ ಬೇರೆ. ಆ ದೃಷ್ಟಿಯಿಂದ ಸಂಸ್ಕತಿಯನ್ನ, ಆಧ್ಯತ್ಮವನ್ನು, ಅರಿವನ್ನ ಮತ್ತು ತಿಳಿವಳಿಕೆಯನ್ನು ಕೊಡಲು ಹೊರಟ್ಟಿದ್ದ ಮಠಗಳ ಕೆಲಸವನ್ನು ಸ್ವತಂತ್ರವಾಗಿ ಮಾಡಲು ಬಿಡಬೇಕು. ಮುಂದೆ ಇಂತಹ ದುಸ್ಸಾಸಹಕ್ಕೆ ಕೈ ಹಾಕಬಾರದು. ಈಗಾಗಲೇ ಸಿದ್ದರಾಮಯ್ಯ ಅವರ ಈ ವಿಚಾರದ ಬಗ್ಗೆ ಸುತ್ತೋಲೆಯನ್ನು ವಾಪಸ್ ತೆಗೆದುಕೊಳ್ಳುವುದಾಗಿ ಹೇಳಿದ್ದಾರೆ. ಆದ್ದರಿಂದ ಈ ವಿವಾದ ಮುಗಿದಿದೆ ಎಂದು ನಿರ್ಮಲಾನಂದ ಸ್ವಾಮೀಜಿ ಹೇಳಿದ್ರು.

ಗುರುವಾರದಂದು ಪರಿಷತ್ ನಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಯಾವುದೇ ಮಠ, ಮಾನ್ಯಗಳನ್ನು ವಶಪಡಿಸಿಕೊಳ್ಳುವ ಉದ್ದೇಶ ಸರ್ಕಾರಕ್ಕೆ ಇಲ್ಲ. ಧಾರ್ಮಿಕ ದತ್ತಿ ಇಲಾಖೆಯ ಆದೇಶವನ್ನು ಈ ಕೂಡಲೇ ಹಿಂದೆ ಪಡೆಯುವುದಾಗಿ ಹೇಳಿದರು. ಹೈಕೋರ್ಟ್ ವಿಭಾಗಿಯ ಪೀಠದ ಆದೇಶದಂತೆ ಸಮಿತಿ ರಚನೆ ಮಾಡಿ ಸಾರ್ವಜನಿಕರ ಅಭಿಪ್ರಾಯಕ್ಕೆ ಸರ್ಕಾರ ಮುಂದಾಗಿತ್ತು. ಮುಜರಾಯಿ ಇಲಾಖೆಯ ದೇವಸ್ಥಾನಗಳನ್ನು ಹೊರತುಪಡಿಸಿ ಬೇರೆಯವರ ಉಸಾಬರಿ ನಮಗೆ ಯಾಕೆ ಎಂದು ಪ್ರಶ್ನಿಸಿದರು.

vlcsnap 2018 02 09 11h00m49s136

ಪರಿಷತ್ ಪ್ರತಿಪಕ್ಷದ ನಾಯಕ ಈಶ್ವರಪ್ಪ ಮಾತನಾಡಿ, ಇದು ತುಘಲಕ್ ಸರ್ಕಾರದ ರೀತಿ ನಡೆದುಕೊಳ್ಳುತ್ತಿದೆ. ಹಿಂದೂಗಳನ್ನ ಪದೇ ಪದೇ ಟಾರ್ಗೆಟ್ ಮಾಡುತ್ತಿದೆ. ಈ ಆದೇಶದಿಂದ ಮಠಾಧೀಶರಿಗೆ ಆಘಾತವಾಗಿದ್ದು ಸರ್ಕಾರ ಕೂಡಲೇ ಆದೇಶ ಹಿಂಪಡೆದು ಮಠಾಧೀಶರ ಕ್ಷಮೆ ಕೇಳಬೇಕು ಎಂದು ಆಗ್ರಹಿಸಿದರು. ಇದನ್ನು ಓದಿ:  ಮಠಗಳನ್ನು ಸರ್ಕಾರದ ಸುಪರ್ದಿಗೆ ಪಡೆಯುವುದಕ್ಕೆ ಧರ್ಮಸ್ಥಳ ಧರ್ಮಾಧಿಕಾರಿ ವಿರೋಧ

ಇದು ತುಘಲಕ್ ಪಕ್ಷ ಎಂದು ಈಶ್ವರಪ್ಪ ಟೀಕಿಸಿದಾಗ 2007ರ ಮಾರ್ಚ್ 1 ರಂದು ರಾಮಾಜೋಯಿಸ್ ಅಧ್ಯಕ್ಷತೆಯ ಸಮಿತಿ ಇದೇ ರೀತಿ ಆದೇಶ ಮಾಡಿತ್ತು ಎಂದು ಸಿಎಂ ಉತ್ತರಿಸಿದರು. ಇದಕ್ಕೆ ಈಶ್ವರಪ್ಪ ಅಂದು ಸಮಿತಿ ಆದೇಶ ಮಾಡಿತ್ತು, ಇಂದು ಸರ್ಕಾರವೇ ಆದೇಶ ಮಾಡಿದೆ ಎಂದು ತಿರುಗೇಟು ನೀಡಿದರು. ಇದನ್ನು ಓದಿ: ಯಾವುದೇ ಮಠಗಳನ್ನು ವಶಪಡಿಸಿಕೊಳ್ಳುವ ಉದ್ದೇಶ ಸರ್ಕಾರಕ್ಕಿಲ್ಲ: ಸಿಎಂ

Share This Article
Leave a Comment

Leave a Reply

Your email address will not be published. Required fields are marked *