ಬೆಂಗಳೂರು: ಹುಬ್ಬಳ್ಳಿ ಗಲಭೆ (Hubballi Communal Riots) ಪ್ರಕರಣ ಸೇರಿ 43 ಪ್ರಕರಣಗಳನ್ನು ರದ್ದುಗೊಳಿಸಿದ್ದ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ (Highcourt) ಛೀಮಾರಿ ಹಾಕಿದೆ. ಇದರಿಂದ ಸರ್ಕಾರಕ್ಕೆ ತೀವ್ರ ಮುಖಭಂಗವಾಗಿದೆ ಎಂದು ವಿಧಾನಸಭೆ ಪ್ರತಿಪಕ್ಷ ಉಪನಾಯಕ ಅರವಿಂದ್ ಬೆಲ್ಲದ್ (Arvind Bellad) ಟೀಕಿಸಿದ್ದಾರೆ.
ಹುಬ್ಬಳ್ಳಿಯಲ್ಲಿ ಪೊಲೀಸ್ ಠಾಣೆ ಮೇಲೆ ನಡೆಸಿದ ದಾಳಿ ಸೇರಿ 43 ಪ್ರಕರಣಗಳನ್ನು ರದ್ದುಗೊಳಿಸುವ ಕುರಿತು ಕೆಲ ತಿಂಗಳ ಹಿಂದೆ ಸರ್ಕಾರ ನಿರ್ಧರಿಸಿತ್ತು. ಇದನ್ನು ಪ್ರಶ್ನಿಸಿ ಸಲ್ಲಿಸಿದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ನ್ಯಾಯಾಲಯ, ಸರ್ಕಾರದ ನಡೆ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿ ಪ್ರಕರಣ ವಾಪಸ್ ಪಡೆದಿದ್ದನ್ನು ರದ್ದು ಮಾಡುವಂತೆ ಆದೇಶಿಸಿದೆ. ಇದನ್ನೂ ಓದಿ: ಡಿಕೆಶಿ ಹೇಳಿಕೆಗೆ ಭಾರೀ ವಿರೋಧ; ಗ್ಯಾರಂಟಿಯಿಂದ ಮಂಗಳೂರಿಗರು ಹೊಟ್ಟೆಬಟ್ಟೆ ಕಟ್ಟಿಕೊಳ್ತಿಲ್ಲ: ಸುನಿಲ್ ಕುಮಾರ್
ಈ ಕುರಿತು ಮಾಧ್ಯಮದವರೊಂದಿಗೆ ಮಾತನಾಡಿದ ಬೆಲ್ಲದ್, ಅತ್ಯಂತ ಹೀನ ಕೃತ್ಯಗಳಲ್ಲಿ ಭಾಗಿಯಾದವರಿಗೆ ಕಠಿಣ ಶಿಕ್ಷೆ ನೀಡುವ ಬದಲು ಅವರ ರಕ್ಷಣೆ ಸರ್ಕಾರ ನಿಂತಿರುವುದು ನಾಚಿಗೇಡಿನ ಸಂಗತಿ ಎಂದು ಕಿಡಿಕಾರಿದ್ದಾರೆ. ಇದನ್ನೂ ಓದಿ: ಕಮಲ್ ಹಾಸನ್ ಪರ ಬ್ಯಾಟ್ ಬೀಸಿದ ರಮ್ಯಾ – ಸಿನಿಮಾ ಬಹಿಷ್ಕರಿಸುವುದು ಸ್ವಲ್ಪ ಜಾಸ್ತಿ ಆಯ್ತು ಅಲ್ಲವೇ? ಎಂದ ನಟಿ
ಇಂತಹ ಪ್ರಕರಣ ವಾಪಸ್ ಪಡೆಯುವುದೇ ಸರಿಯಲ್ಲ. ಆದರೂ ರಾಜಕೀಯ ಒತ್ತಡ ಹಾಗೂ ಮುಸ್ಲಿಂ ಓಲೈಕೆ ರಾಜಕಾರಣಕ್ಕೆ ಕೇಸ್ ವಾಪಸ್ ಪಡೆದಿದೆ. ರಾಜ್ಯದ ಹಿತದೃಷ್ಟಿಯಿಂದ ಕೆಲಸ ಮಾಡಬೇಕೆ ಹೊರತು, ಮುಸ್ಲಿಂ ಓಲೈಕೆ ರಾಜಕಾರಣ ಮಾಡಬಾರದು. ಇನ್ನಾದರೂ ಸರ್ಕಾರ ಡಿಜೆ ಹಳ್ಳಿ, ಕೆಜೆ ಹಳ್ಳಿ ಗಲಭೆ ಪ್ರಕರಣದಲ್ಲಿ ಭಾಗಿಯಾದವರ ಮೇಲೆ ಕ್ರಮಹಿಸಲಿ ಎಂದು ಆಗ್ರಹಿಸಿದ್ದಾರೆ. ಇದನ್ನೂ ಓದಿ: ಡಿಸಿ ಬಗ್ಗೆ ವಿವಾದಾತ್ಮಕ ಹೇಳಿಕೆ | ಕರ್ನಲ್ ಸೋಫಿಯಾ ವಿರುದ್ಧದ ಹೇಳಿಕೆಗೆ ಆದೇಶ ಗೊತ್ತಾ? – ರವಿಕುಮಾರ್ಗೆ ಹೈಕೋರ್ಟ್ ಚಾಟಿ