Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ವಿಜಯೇಂದ್ರ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯಾಗಲಿ, ನಾನು ರಾಜ್ಯಾಧ್ಯಕ್ಷ ಆಗ್ತೀನಿ: ಯತ್ನಾಳ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ವಿಜಯೇಂದ್ರ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯಾಗಲಿ, ನಾನು ರಾಜ್ಯಾಧ್ಯಕ್ಷ ಆಗ್ತೀನಿ: ಯತ್ನಾಳ್

Latest

ವಿಜಯೇಂದ್ರ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯಾಗಲಿ, ನಾನು ರಾಜ್ಯಾಧ್ಯಕ್ಷ ಆಗ್ತೀನಿ: ಯತ್ನಾಳ್

Public TV
Last updated: June 21, 2024 12:31 pm
Public TV
Share
2 Min Read
VIJAYENDRA YATNAL
SHARE

– ಸಕ್ಕರೆ ಸಚಿವರ ಹಗರಣ ಶೀಘ್ರವೇ ಬಯಲಿಗೆ ಬರುತ್ತೆ: ಬಿಜೆಪಿ ಶಾಸಕ ಹೊಸ ಬಾಂಬ್‌

ವಿಜಯಪುರ: ವಿಜಯೇಂದ್ರನೇ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹುದ್ದೆ ಇಟ್ಟುಕೊಳ್ಳಲಿ. ನಾನು ರಾಜ್ಯಾಧ್ಯಕ್ಷನಾಗುತ್ತೇನೆಂದು ಹೇಳಿದ್ದೇನೆ ಎಂದು ಶಾಸಕ ಬಸನಗೌಡ ಪಾಟೀಲ ಯತ್ನಾಳ್‌ (Basanagouda Patil Yatnal) ತಿಳಿಸಿದರು.

ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಹಾಗೂ ವಿಜಯೇಂದ್ರ ಜೊತೆ ಹೊಂದಾಣಿಕೆ ಅಗುವಂತೆ ಮನವೊಲಿಕೆ ಯತ್ನ ವಿಚಾರವಾಗಿ ವಿಜಯಪುರದಲ್ಲಿ (Vijayapura) ಯತ್ನಾಳ್ ಪ್ರತಿಕ್ರಿಯಿಸಿ, ಅಂಥ ಪ್ರಯತ್ನಗಳು ನಡೆಯುತ್ತವೆ. ನಾನು ಕಾಂಪಿಟೇಟರ್ ಇದ್ದೇನೆ. ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹುದ್ದೆ ನೀಡುವುದಾಗಿ ನನಗೆ ಹೇಳಿದರು. ವಿಜಯೇಂದ್ರನೇ (Vijayendra) ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹುದ್ದೆ ಇಟ್ಟುಕೊಳ್ಳಲಿ. ನಾನು ರಾಜ್ಯಧ್ಯಕ್ಷನಾಗುತ್ತೇನೆಂದು ಹೇಳಿದ್ದೇನೆ ಎಂದರು. ಇದನ್ನೂ ಓದಿ: ಚನ್ನಪಟ್ಟಣ ಉಪಚುನಾವಣೆ – ಜೆಡಿಎಸ್ ಜೊತೆ ಚರ್ಚಿಸಿ ಅಭ್ಯರ್ಥಿ ಆಯ್ಕೆ: ವಿಜಯೇಂದ್ರ

basanagouda patil yatnal vijayapura

ಚನ್ನಪಟ್ಟಣ ಉಪಚುನಾವಣೆಯಲ್ಲಿ ಕಾಂಗ್ರೆಸ್‌ನಿಂದ ಡಿಕೆಶಿ ಅಥವಾ ಡಿ.ಕೆ.ಸುರೇಶ್ ಸ್ಪರ್ಧೆ ಮಾಡುವ ಸಾಧ್ಯತೆ ಕುರಿತು ಮಾತನಾಡಿ, ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಯಾರು ಬೇಕಾದರೂ ಸ್ಪರ್ಧೆ ಮಾಡಬಹುದು. ಆದರೆ ಚುನಾವಣೆ ಸ್ಪರ್ಧೆಯ ವಿಚಾರದಲ್ಲಿ ಚುನಾವಣಾ ಆಯೋಗ ಕೆಲ ಕಾಯ್ದೆಗಳನ್ನ ಮಾರ್ಪಾಡು ಮಾಡಬೇಕು. ಒಂದು ಕ್ಷೇತ್ರದಲ್ಲಿ ಸಂಸದ, ಶಾಸಕರಾಗಿದ್ದವರು ಮತ್ತೊಂದು ಕ್ಷೇತ್ರಕ್ಕೆ ಸ್ಪರ್ಧೆ ಮಾಡಲು ಅವಕಾಶ ನೀಡಬಾರದು. ಈ ಕುರಿತು ಹೊಸ ಕಾನೂನು ಜಾರಿ ಮಾಡಬೇಕೆಂದು ಒತ್ತಾಯಿಸಿದರು.

ಕಳೆದ ಲೋಕಸಭಾ ಚುನಾವಣೆಯಲ್ಲಿ ನನಗೂ ಕೂಡ ಬಾಗಲಕೋಟೆ, ಬೆಳಗಾವಿಯಿಂದ ಸ್ಪರ್ಧೆ ಮಾಡುವಂತೆ ಹೇಳಲಾಗಿತ್ತು. ನಾನು ಸ್ಪರ್ಧೆ ಮಾಡಲಿಲ್ಲ. ಒಂದು ಕ್ಷೇತ್ರದಲ್ಲಿ ಶಾಸಕರಾಗಿದ್ದವರು, ಸಚಿವರಾಗಿದ್ದರೂ ಕೂಡ ಉಪ ಚುನಾವಣೆಗಳಲ್ಲಿ ಸ್ಪರ್ಧೆ ಮಾಡುವಂತಾಗಬಾರದು. ಈ ನಿಟ್ಟಿನಲ್ಲಿಯೂ ಕೂಡ ಕಾನೂನು ಜಾರಿಯಾಗಬೇಕು. ಉಪ ಚುನಾವಣೆ ನಡೆಯುವುದರಿಂದ ನೀತಿ ಸಂಹಿತೆ ಎರಡು ತಿಂಗಳು ಜಾರಿಯಲ್ಲಿರುತ್ತದೆ. ಇದರಿಂದ ಅಭಿವೃದ್ಧಿ ಕೆಲಸ ಕಾಮಗಾರಿಗಳು ಆಗಲ್ಲ ಎಂದು ಅಭಿಪ್ರಾಯಪಟ್ಟರು. ಇದನ್ನೂ ಓದಿ: ಹಾವೇರಿಯಲ್ಲಿ ಸ್ಪಿರಿಟ್ ಲಾರಿಯ ಟೈಯರ್ ಬ್ಲಾಸ್ಟ್ – ತಪ್ಪಿದ ದೊಡ್ಡ ದುರಂತ!

bjp jds 3 by vijayendra

ಈಗಾಗಲೇ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಮಾಡಲಾಗಿದೆ. ಈಗ ಬಸ್ ದರವನ್ನು ಏರಿಕೆ ಮಾಡುತ್ತಿದ್ದಾರೆ. ರಾಜ್ಯ ಸರ್ಕಾರ ದಿವಾಳಿಯಾಗಿದೆ. ಗ್ಯಾರಂಟಿ ಯೋಜನೆಗಳು ಜೀವಂತವಾಗಿರಲು ಸರ್ಕಾರ ಬೆಲೆ ಏರಿಕೆ ಮಾಡುತ್ತಿದೆ. ಬೆಲೆ ಏರಿಕೆ ಮಾಡದಿದ್ದರೆ ಸರ್ಕಾರಿ ನೌಕರರ ಸಂಬಳ‌ ನೀಡಲು ಸರ್ಕಾರದ ಬಳಿ ಹಣವಿಲ್ಲದಂತಾಗಿದೆ. ಕಾಂಗ್ರೆಸ್ ಸಚಿವರು‌, ಶಾಸಕರು ಅಭಿವೃದ್ಧಿಗೆ ಅನುದಾನ‌ ನೀಡುತ್ತಿಲ್ಲ ಎನ್ನುತ್ತಿದ್ದಾರೆ. ಗ್ಯಾರಂಟಿ ಯೋಜನೆಗಳು ಬೇಡವೆಂದು ಸಚಿವ ಚೆಲುವರಾಯಸ್ವಾಮಿ ಹೇಳಿದ್ದಾರೆ. ಗ್ಯಾರಂಟಿ ಯೋಜನೆಗಳನ್ನು ಬಂದ್ ಮಾಡಿದರೆ ಕಾಂಗ್ರೆಸ್‌ ಮೇಲೆ ಮತ್ತಷ್ಟು ಪರಿಣಾಮ ಬೀರಲಿದೆ ಎಂದು ಮುಂದುವರೆಸಿಕೊಂಡು ಹೋಗುತ್ತಿದ್ದಾರೆ. ಗ್ಯಾರಂಟಿ ಯೋಜನೆಗಳಿಗಾಗಿ ಬೆಲೆ ಏರಿಕೆ ಮಾಡಲಾಗುತ್ತಿದೆ. ಮದ್ಯದ ದರವನ್ನು ಏರಿಕೆ‌ ಮಾಡುತ್ತಿದ್ದಾರೆ. ಮದ್ಯದ ದರ ಏರಿಕೆ‌ ಮಾಡಿದರೆ ಮಾಡಲಿ ಎಂದರು.

ರಾಜ್ಯ ಸರ್ಕಾರ ವ್ಯಾಪಕ‌ ಭ್ರಷ್ಟಾಚಾರದಲ್ಲಿ ಭಾಗಿಯಾಗಿದೆ. ಎಲ್ಲ ಮಂತ್ರಿಗಳು‌ ಲೂಟಿ ಮಾಡುತ್ತಿದ್ದಾರೆ. ಕಂದಾಯ ಸಚಿವರ ಕ್ಷೇತ್ರದಲ್ಲಿಯೇ ಇಬ್ಬರು ಸಚಿವರು ಜಮೀನು ನುಂಗುವ ಹುನ್ನಾರ ನಡೆಸಿದ್ದಾರೆ. ಬೆಂಗಳೂರಿನ ಹೃದಯ ಭಾಗದಲ್ಲಿನ ಸಾವಿರಾರು ಕೋಟಿ ರೂಪಾಯಿ ಮೌಲ್ಯದ ಜಮೀನು ನುಂಗುವ ಹುನ್ನಾರ ನಡೆದಿದೆ. 20 ಎಕರೆ ಜಮೀನನ್ನು ಬೇನಾಮಿಯಾಗಿ ಕಬಳಿಸಲು ನಕಲಿ ಕಾಗದ ಪತ್ರ ಮಾಡಿ ಕಬಳಿಸಲು ಮುಂದಾಗಿದ್ದಾರೆ. ಸಕ್ಕರೆ ಸಚಿವ ಶಿವಾನಂದ‌ ಪಾಟೀಲರ ಹಗರಣ ಶೀಘ್ರವೇ ಬಯಲಿಗೆ ಬರಲಿದೆ ಎಂದು ಯತ್ನಾಳ್ ಹೊಸ ಬಾಂಬ್ ಸಿಡಿಸಿದ್ದಾರೆ.

TAGGED:Basanagouda Patil YatnalbjpvijayapuraVijayendraಬಸನಗೌಡ ಪಾಟೀಲ ಯತ್ನಾಳ್ಬಿಜೆಪಿವಿಜಯಪುರವಿಜಯೇಂದ್ರ
Share This Article
Facebook Whatsapp Whatsapp Telegram

Cinema news

Rajath Kishan and Dog Satish
ಶೌಚಾಲಯದಲ್ಲಿದ್ದ ವಿಡಿಯೋವೊಂದಕ್ಕೆ ಸುದೀಪ್ ಮೂವಿ ಹಾಡು – ಡಾಗ್ ಸತೀಶ್ ವಿರುದ್ಧ ರಜತ್ ದೂರು
Bengaluru City Cinema Karnataka Latest Main Post Sandalwood
Vijay Sangeetha Sornalingam
ನಟಿ ಜೊತೆ ವಿವಾಹೇತರ ಸಂಬಂಧ ಆರೋಪ; ಡಿವೋರ್ಸ್‌ಗೆ ಅರ್ಜಿ ಸಲ್ಲಿಸಿದ ನಟ ವಿಜಯ್‌ ಪತ್ನಿ
Cinema Latest Main Post South cinema
The Kerala Story 2
‘ದಿ ಕೇರಳ ಸ್ಟೋರಿ 2’ ಸಿನಿಮಾಗೆ ಬಿಗ್‌ ರಿಲೀಫ್‌ – ರಿಲೀಸ್‌ಗಿದ್ದ ತಡೆಯಾಜ್ಞೆ ತೆರವುಗೊಳಿಸಿದ ಹೈಕೋರ್ಟ್‌
Cinema Court Latest Main Post South cinema
Rashmika Mandanna Vijay Deverakonda Wedding
Rashmika Mandanna-Vijay Deverakonda Wedding: ಮದುವೆಯ ಫೋಟೊ ಹಂಚಿಕೊಂಡ ರಶ್ಮಿಕಾ ಮಂದಣ್ಣ
Cinema Latest Main Post South cinema

You Might Also Like

Udupi SI Death
Districts

ಪೊಲೀಸ್ ಮ್ಯಾರಥಾನ್ ವೇಳೆ ಕುಸಿದು ಬಿದ್ದು ಎಸ್‌ಐ ಸಾವು

Public TV
By Public TV
15 minutes ago
Ayatollah Ali Khamenei
Latest

ಪವಾಡವೇ ನಡೆದಿತ್ತು… ಬಾಂಬ್‌ ದಾಳಿಯಲ್ಲೂ ಬದುಕುಳಿದಿದ್ದ ಖಮೇನಿ – ಜೀವನದ ಪ್ರಮುಖ ಘಟ್ಟಗಳು ಹೇಗಿತ್ತು?

Public TV
By Public TV
20 minutes ago
UAE Ballistic Missiles
Latest

ಗಲ್ಫ್ ರಾಷ್ಟ್ರಗಳ ಮೇಲೆ ಸಮರ ಸಾರಿದ ಇರಾನ್‌ – ಯುಎಇ ಮೇಲೆ 208 ಡ್ರೋನ್‌, 137 ಬ್ಯಾಲಿಸ್ಟಿಕ್‌ ಕ್ಷಿಪಣಿ ದಾಳಿ

Public TV
By Public TV
47 minutes ago
Dubai Kannadigas
Bellary

Iran Israel War | 50ಕ್ಕೂ ಹೆಚ್ಚು ಕನ್ನಡಿಗರು ದುಬೈ, ಬಹ್ರೇನ್‌ನಲ್ಲೇ ಲಾಕ್‌

Public TV
By Public TV
1 hour ago
Iran Women Celebration On Ayatollah Ali Khamenei Death
Latest

ಇರಾನ್ ಸರ್ವೋಚ್ಛ ನಾಯಕನ ಹತ್ಯೆ – ಖಮೇನಿ ಸಾವನ್ನ ಸಂಭ್ರಮಿಸಿದ ಇರಾನ್ ಮಹಿಳೆಯರು

Public TV
By Public TV
2 hours ago
iran israel war
Latest

30 ಬಾಂಬ್‌ಗಳಿಂದ ದಾಳಿ – ತನ್ನ ಮನೆಯಲ್ಲೇ ಖಮೇನಿ ಹತ್ಯೆಗೆ ಅಮೆರಿಕ-ಇಸ್ರೇಲ್‌ ರೂಪಿಸಿದ್ದ ರಣತಂತ್ರ ಹೇಗಿತ್ತು?

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?