Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Bengaluru City

ನಾವೆಲ್ಲ ಒಟ್ಟಿಗೆ ಸೇರಿ ಕೆಲಸ ಮಾಡೋಣ- ಆಪ್ತ ಬಳಗಕ್ಕೆ ಡಿಕೆಶಿ ಸಂದೇಶ

Public TV
Last updated: October 31, 2023 3:17 pm
Public TV
Share
3 Min Read
DK SHIVAKUMAR 2
SHARE

– 5 ವರ್ಷವೂ ಸಿದ್ದರಾಮಯ್ಯ ಸಿಎಂ ಜಪ ಬೆನ್ನಲ್ಲೇ ಡಿಕೆ ಫಿಲಾಸಫಿ

ಬೆಂಗಳೂರು: ಐದು ವರ್ಷವೂ ಸಿದ್ದರಾಮಯ್ಯ ಸಿಎಂ ಜಪ ಬೆನ್ನಲ್ಲೇ ಡಿಕೆಶಿ ಫಿಲಾಸಫಿ. ನನಗೆ ಅಧಿಕಾರ ಸಿಗುತ್ತೋ.. ಇಲ್ವೋ ಗೊತ್ತಿಲ್ಲ. ಅದರ ಬಗ್ಗೆ ನೀವು ತಲೆಕೆಡಿಸಿಕೊಳ್ಳಬೇಡಿ ಎಂದು ಆಪ್ತ ಬಳಗಕ್ಕೆ ಮತ್ತೊಮ್ಮೆ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ (DK Shivakumar) ಸಂದೇಶ ರವಾನಿಸಿದ್ದಾರೆ.

KPCC

ಕೆಪಿಸಿಸಿ ಕಚೇಯಲ್ಲಿ ಇಂದಿರಾ ಗಾಂಧಿ (Indira Gandhi) ಪುಣ್ಯಸ್ಮರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ನೆಹರು ಅವರ ಬಳಿ ಎಷ್ಟೆಲ್ಲಾ ಆಸ್ತಿ ಇತ್ತು. ಈಗ ಸೋನಿಯಾ ಗಾಂಧಿ, ಈಗ ರಾಹುಲ್ ಗಾಂಧಿ ಬಳಿ ಏನೂ ಇಲ್ಲ. ಎಲ್ಲವನ್ನೂ ತ್ಯಾಗ ಮಾಡಿದ್ದಾರೆ. ಬಿಜೆಪಿ ಅವರು ಒಂದು ಸೈಟನ್ನೂ ತ್ಯಾಗ ಮಾಡಿಲ್ಲ. ನಾನು ನನ್ನ ಕಾರ್ಯಕರ್ತರಿಗೆ ಹೇಳ್ತಾ ಇದ್ದೀನಿ. ನನಗೆ ಅಧಿಕಾರ ಸಿಗುತ್ತೋ.. ಇಲ್ವೋ. ಅದರ ಬಗ್ಗೆ ನೀವು ತಲೆಕೆಡಿಸಿಕೊಳ್ಳಬೇಡಿ. ನಾವೆಲ್ಲ ಒಟ್ಟಿಗೆ ಸೇರಿ ಕೆಲಸ ಮಾಡೋಣ. ಇಂಡಿಯಾ ಅಂದ್ರೆ ಅದು ಇಂದಿರಾ. ಇಂಡಿಯಾ ಹೆಸರು ಬದಲಿಸಲು ಬಿಜೆಪಿ ಹೊರಟಿದೆ. ನಾವು ಬದುಕಿನ ಜೊತೆ ಇರುತ್ತೇವೆ ಎಂದರು.

ಇಡೀ ದೇಶ, ಪ್ರಪಂಚ ಬಲಿಷ್ಠ ನಾಯಕಿಯನ್ನ ನೆನಪು ಮಾಡಿಕೊಳ್ಳೋ ಪವಿತ್ರ ದಿನ. ಸರ್ದಾರ್ ವಲ್ಲಭಭಾಯಿ ಪಟೇಲ್ (Sardar Vallabhbhai Patel) ಜನ್ಮದಿನ ಆಚರಣೆ ಮಾಡೋ ದಿನ. ದೇಶ ಇಬ್ಬರು ಮಹಾನ್ ಶಕ್ತಿಗಳನ್ನ ನೆನಪು ಮಾಡಿಕೊಳ್ತಿದ್ದೇವೆ. ನಾನು ಯೂತ್ ಕಾಂಗ್ರೆಸ್ ನಲ್ಲಿ ಇದ್ದೆ. ರೈಲಿನಲ್ಲಿ ದೆಹಲಿಗೆ ಯೂತ್ ಕಾಂಗ್ರೆಸ್ ಸಮಾವೇಶಕ್ಕೆ ಹೋಗ್ತಿದ್ವಿ. ಬೆಂಗಳೂರು ಬಿಟ್ಟು ಹೋಗುವಾಗ ಅರ್ಧಕ್ಕೆ ರೈಲು ನಿಂತಿತ್ತು. ಇಂದಿರಾ ಗಾಂಧಿ ಕೊಲೆ ಆಗಿದೆ ಅಂತ ರೈಲು ನಿಲ್ಲಿಸಿದರು. ಆಗ ದೊಡ್ಡ ಗಲಾಟೆ ಆಯ್ತು. ಈ ವೇಳೆ ನನ್ನನ್ನು ಅರೆಸ್ಟ್ ಮಾಡಿ ಮಲ್ಲೇಶ್ವರಂ ಪೊಲೀಸ್ ಠಾಣೆಯಲ್ಲಿ ಇಟ್ಟಿದ್ರು ಅಂತ ಹಳೆಯ ನೆನಪುಗಳನ್ನು ಡಿಕೆಶಿ ಮೆಲುಕು ಹಾಕಿಕೊಂಡರು.

Siddu

ಇಂದಿರಾಗಾಂಧಿ ಅವಧಿಯಲ್ಲಿ ಅನೇಕ ಕಾರ್ಯಕ್ರಮ ಕೊಟ್ಟಿದ್ರು. ಜನಾರ್ದನ ಪೂಜಾರಿ (Janardhan Poojary) ಅವರು ಮಂತ್ರಿ ಆಗಿ 10 ಸಾವಿರ ಯಾವುದೇ ಗ್ಯಾರಂಟಿ ಇಲ್ಲದೆ ಜನರಿಗೆ ಕೊಡೋ ಕಾರ್ಯಕ್ರಮ ಜಾರಿ ಮಾಡಿದ್ರು. ಪೂಜಾರಿ ಮೇಳ ಅಂತ ಅವರು ಕರೆಯುತ್ತಿದ್ದರು. ನಾನು ಅನೇಕರಿಗೆ ಸಾಲ ಕೊಡಿಸಿದೆ. ಆ ಸಾಲ ಮೇಳದ ಹೆಸರಲ್ಲಿ ಜಿಲ್ಲಾ ಪಂಚಾಯತ್ ಗೆದ್ದೆ. ಅಂದಿನಿಂದ ಇಂದಿನವರೆಗೂ ಗೆಲ್ಲುತ್ತಾ ಇದ್ದೀನಿ. ಬ್ಯಾಂಕ್ ಗಳ ರಾಷ್ಟ್ರೀಕರಣ ಮಾಡಿದ್ದು ಇಂದಿರಾಗಾಂಧಿ ಎಂದು ಹೇಳಿದರು. ಇದನ್ನೂ ಓದಿ: ಹೈಕಮಾಂಡ್ ಸಚಿವ ಸ್ಥಾನ ಬಿಟ್ಕೊಡಿ ಅಂದ್ರೆ ಬಿಟ್ಟು ಕೊಡ್ತೀನಿ: ಪರಮೇಶ್ವರ್

ಉಳುವವನೇ ಭೂಮಿಯ ಒಡೆಯ ಕಾರ್ಯಕ್ರಮ ಮಾಡಿದ್ದು ಇಂದಿರಾ ಗಾಂಧಿ. ದೇಶದಲ್ಲಿ ದೊಡ್ಡ ಕ್ರಾಂತಿ ಮಾಡಿದ್ರು. ರಾಜೀವ್ ಗಾಂಧಿ (Rajeev Gandhi) ಕಾಲದಲ್ಲಿ ದೊಡ್ಡ ಕಾರ್ಯಕ್ರಮ ಆಗಿದೆ. ಕಾಂಗ್ರೆಸ್ ಬಂದಾಗ ದೊಡ್ಡ ದೊಡ್ಡ ಕಾರ್ಯಕ್ರಮ ಆಗಿವೆ. ನಮ್ಮ ಸರ್ಕಾರ ಬಂದ ಮೇಲೆ ಗೃಹಲಕ್ಷ್ಮಿ ಯೋಜನೆ ಜಾರಿ ಮಾಡಿದ್ವಿ. 1 ಕೋಟಿ 10 ಲಕ್ಷ ಮಹಿಳೆಯರಿಗೆ ಹಣ ಹೋಗಿದೆ. ಬಸ್ ನಲ್ಲಿ ಫ್ರೀ ಓಡಾಡೋಕೆ ಶಕ್ತಿ ಯೋಜನೆ ಜಾರಿ ಮಾಡಿದ್ದೇವೆ. ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಮಾತ್ರ ಇಂತಹ ಕಾರ್ಯಕ್ರಮ. ಬಿಜೆಪಿ ಅವರು ಅಧಿಕಾರಕ್ಕೆ ಬಂದರೆ ಭಾವನೆ ಅಷ್ಟೆ ಎಂದು ಹೇಳಿದರು.

INDIRA GANDHI

ಕಾಂಗ್ರೆಸ್ ಸಮಾಜದ ಎಲ್ಲಾ ಜನರನ್ನ ಹೊಂದಿಸುತ್ತದೆ. ಕಾಂಗ್ರೆಸ್ (Congress) ಸಮಾಜವನ್ನ ಹೊಂದಿಸುತ್ತದೆ. ಬಿಜೆಪಿ ಅವರು ಕತ್ತರಿಸುತ್ತಾರೆ. ಈಗ ಇಂಡಿಯಾ ಹೆಸರು ಬದಲಾವಣೆ ಮಾಡೋಕೆ ಮುಂದಾಗಿದ್ದಾರೆ. ಅದು ಹೇಗೆ ಆಗುತ್ತದೆ. ಐಎಎಸ್, ಐಪಿಎಸ್ ಎಲ್ಲಾ ಚೇಂಜ್ ಮಾಡ್ತೀನಿ ಅಂತಿದ್ದಾರೆ. ನಾವು ಇಂಡಿಯಾ ಅಂತ ಹೆಸರು ಇಟ್ಟಿರೋದಕ್ಕೆ ಭಾರತ ಅಂತ ಬದಲಾವಣೆ ಮಾಡ್ತಿದ್ದಾರೆ. ಮೇಕ್ ಇನ್ ಇಂಡಿಯಾ ಅಂತ ಹೇಳಿ ಹುಲಿ ಇಟ್ಟಿದ್ದಾರೆ. ನಾವು ಸಿಎಂ ಮನೆ ಮುಂದೆ ಹುಲಿ ನಿಲ್ಲಿಸಿದ್ದೇವೆ. ಬಿಜೆಪಿ ಅವರು ಭಾವನೆ ಕೆರಳಿಸೋ ಕೆಲಸ ಮಾಡುತ್ತಾರೆ. ನಾವು ಜನರ ಹೊಟ್ಟೆ ತುಂಬಿಸೋ ಕೆಲಸ ಮಾಡ್ತೀವಿ. ನಾವು ಗೃಹಜ್ಯೋತಿ, ಶಕ್ತಿ ಯೋಜನೆ ಕೊಟ್ಟಿದ್ದೇವೆ ಎಂದು ತಿಳಿಸಿದರು.

ನಾವು ಜಾತಿ ನೋಡಿ ಯೋಜನೆ ಜಾರಿ ಮಾಡಿಲ್ಲ. ಈ ಯೋಜನೆ ಬಿಜೆಪಿ ಅವರು ತೆಗೆದುಕೊಂಡಿಲ್ಲವಾ?. ನಮಗಿಂತ ಬಿಜೆಪಿ ಅವರೇ ಗ್ಯಾರಂಟಿ ಯೋಜನೆ ಜಾಸ್ತಿ ತೆಗೆದುಕೊಂಡಿದ್ದಾರೆ. ಗ್ಯಾರಂಟಿ ಯೋಜನೆ ಬಿಜೆಪಿ ಅವರೇ ಜಾಸ್ತಿ ತೆಗೆದುಕೊಳ್ತಿದ್ದಾರೆ. ಮಂಗಳೂರಿನಲ್ಲಿ ಬಿಜೆಪಿ ಅವರೇ ಹೆಚ್ಚು ಅರ್ಜಿ ಹಾಕಿದ್ದಾರೆ ಅಂತ ನಮ್ಮ ನಾಯಕರು ಹೇಳಿದ್ರು. ನಮಗೂ ಮತ್ತು ಇಂದಿರಾಹುಲ್ ಗಾಂಧಿ ಕುಟುಂಬಕ್ಕೆ ಇರೋದು ಭಕ್ತ ಮತ್ತು ದೇವರ ನಡುವಿನ ಸಂಬಂಧವಾಗಿದೆ. ತಮ್ಮ ಆಸ್ತಿಯನ್ನು ಜನರಿಗೆ ದಾನ ಮಾಡಿದರು. ಬಿಜೆಪಿ ಅವರು, ಜೆಡಿಎಸ್ ಅವರು 60*40 ಸೈಟ್ ಕೂಡಾ ಯಾರಿಗೂ ಕೊಟ್ಟಿಲ್ಲ. ಬ್ಲಾಕ್ ಅಧ್ಯಕ್ಷರಾಗಿದ್ದ ಮಲ್ಲಿಕಾರ್ಜುನ್ ಖರ್ಗೆ ಎಐಸಿಸಿ ಅಧ್ಯಕ್ಷರಾಗಿದ್ದಾರೆ. ಇದು ಕಾಂಗ್ರೆಸ್ ನ ಶಕ್ತಿ ಎಂದರು.

Web Stories

ಯಮ್ಮೊ ಯಮ್ಮೊ.. ಹೇಗ್‌ ಕಾಣ್ತಾರ್‌ ನೋಡಿ..
ಯಮ್ಮೊ ಯಮ್ಮೊ.. ಹೇಗ್‌ ಕಾಣ್ತಾರ್‌ ನೋಡಿ..
ಮಳೆಗಾಲದಲ್ಲಿ ಪಡ್ಡೆಗಳ ಮೈಚಳಿ ಬಿಡಿಸಿದ ತಮನ್ನಾ ಹಾಟ್‌ ಲುಕ್‌
ಮಳೆಗಾಲದಲ್ಲಿ ಪಡ್ಡೆಗಳ ಮೈಚಳಿ ಬಿಡಿಸಿದ ತಮನ್ನಾ ಹಾಟ್‌ ಲುಕ್‌
ಯೋಗ ದಿನದಂದು ನಟಿ ಪ್ರಣಿತಾ ಯೋಗ…
ಯೋಗ ದಿನದಂದು ನಟಿ ಪ್ರಣಿತಾ ಯೋಗ…
ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!..
ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!..
ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್
ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್
ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್
ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್
ನವಿಲಿನಂತೆ ಕಂಗೊಳಿಸಿದ ಮಲೈಕಾ
ನವಿಲಿನಂತೆ ಕಂಗೊಳಿಸಿದ ಮಲೈಕಾ
ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ
ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ
ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್
ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್
ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್
ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್

TAGGED:bengaluruDK ShivakumarIndira Gandhiಇಂದಿರಾ ಗಾಂಧಿಡಿಕೆ ಶಿವಕುಮಾರ್ಬೆಂಗಳೂರು
Share This Article
Facebook Whatsapp Whatsapp Telegram

Cinema Updates

Darshan
ಹಳೇ ಕೇಸ್‌ ಕೇಳಿದ ಸುಪ್ರೀಂ – ದರ್ಶನ್‌ಗೆ ಎದುರಾಗುತ್ತಾ ಸಂಕಷ್ಟ?
Cinema Court Latest Main Post National Sandalwood
Anchor Anushree
ಟೆಕ್ಕಿ ಜೊತೆ ಆ.28ಕ್ಕೆ ಅನುಶ್ರೀ ಮದುವೆ!
Cinema Latest Main Post Sandalwood
Darshan Thailand
ಥೈಲ್ಯಾಂಡ್‌ನಲ್ಲಿ ಡೆವಿಲ್ ಸಾಂಗ್ ಶೂಟಿಂಗ್ – ದರ್ಶನ್ ಫೋಟೋ ರಿವೀಲ್
Cinema Latest Sandalwood Top Stories
Hrithika Srinivas
ಕಿರಣ್ ರಾಜ್‌ಗೆ ನಾಯಕಿಯಾದ ಉಡಾಳ ಹುಡುಗಿ ಹೃತಿಕಾ
Cinema Latest Sandalwood Top Stories
The girl Friend
ರಶ್ಮಿಕಾ ಮಂದಣ್ಣ ನಟನೆಯ ದಿ ಗರ್ಲ್ ಫ್ರೆಂಡ್ ಚಿತ್ರದ ಫಸ್ಟ್ ಸಾಂಗ್ ರಿಲೀಸ್
Cinema Latest Top Stories

You Might Also Like

AI Siren
Districts

ಕೊಡಗು ಜಿಲ್ಲೆಯಲ್ಲಿ ಮಿತಿಮೀರಿದ ಕಾಡಾನೆಗಳ ಉಪಟಳ – ಎಚ್ಚರಿಕೆ ನೀಡಲು AI ಸೈರನ್ ಅಳವಡಿಕೆ

Public TV
By Public TV
6 minutes ago
rituparna rolls royce
Dakshina Kannada

ಮಂಗಳೂರು| ಕಿರಿಯ ವಯಸ್ಸಿನಲ್ಲೇ ರೋಲ್ಸ್‌ ರಾಯ್ಸ್‌ನಲ್ಲಿ ಉದ್ಯೋಗ; ವರ್ಷಕ್ಕೆ 72 ಲಕ್ಷ ಸಂಬಳ- ಯುವತಿಗೆ ಸನ್ಮಾನ

Public TV
By Public TV
11 minutes ago
CRIME
Crime

ಕಾಡು ಹಂದಿಗಳು ಬೆಳೆ ನಾಶ ಮಾಡಿದ್ದಕ್ಕೆ ಫಾರೆಸ್ಟ್ ವಾಚರ್ ಮೇಲೆ ಮಾರಣಾಂತಿಕ ಹಲ್ಲೆ

Public TV
By Public TV
19 minutes ago
Indigo
Latest

ದೆಹಲಿ-ಗೋವಾ ಇಂಡಿಗೋ ವಿಮಾನದಲ್ಲಿ ತಾಂತ್ರಿಕ ಸಮಸ್ಯೆ – ತುರ್ತು ಲ್ಯಾಂಡಿಂಗ್

Public TV
By Public TV
22 minutes ago
Narayan Barmani 1
Belgaum

ಬೆಳಗಾವಿ ಡಿಸಿಪಿಯಾಗಿ ನಾರಾಯಣ ಭರಮನಿ ವರ್ಗಾವಣೆ

Public TV
By Public TV
29 minutes ago
Biklu Shiva Murder Case Accused Surrender
Bengaluru City

ಬಿಕ್ಲು ಶಿವ ಮರ್ಡರ್ ಕೇಸ್ – ಕೊಲೆ ಮಾಡಿದ್ದು ನಾವು ಎಂದು ಐವರು ಶರಣಾಗತಿ

Public TV
By Public TV
1 hour ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
ಯಮ್ಮೊ ಯಮ್ಮೊ.. ಹೇಗ್‌ ಕಾಣ್ತಾರ್‌ ನೋಡಿ.. ಮಳೆಗಾಲದಲ್ಲಿ ಪಡ್ಡೆಗಳ ಮೈಚಳಿ ಬಿಡಿಸಿದ ತಮನ್ನಾ ಹಾಟ್‌ ಲುಕ್‌ ಯೋಗ ದಿನದಂದು ನಟಿ ಪ್ರಣಿತಾ ಯೋಗ… ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!.. ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್ ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್ ನವಿಲಿನಂತೆ ಕಂಗೊಳಿಸಿದ ಮಲೈಕಾ ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್ ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್
Welcome Back!

Sign in to your account

Username or Email Address
Password

Lost your password?