ಪ್ರಸಾದ ವಿನಿಯೋಗಕ್ಕೆ ಲೈಸೆನ್ಸ್, ದೇವರ ಪ್ರಸಾದ ಲ್ಯಾಬ್ ಪರೀಕ್ಷೆಗೆ ಒಳಪಡ್ಬೇಕು- ಆಹಾರ ಸುರಕ್ಷತೆ ಇಲಾಖೆ ನೋಟಿಸ್

Public TV
1 Min Read
prasada

ಬೆಂಗಳೂರು: ಇನ್ಮುಂದೆ ಸಿಕ್ಕ ಸಿಕ್ಕಿದ್ದನ್ನೆಲ್ಲಾ ಪ್ರಸಾದ ಅಂತ ಹಂಚೋ ಹಾಗಿಲ್ಲ. ಯಾಕಂದ್ರೆ ಆಹಾರ ಸುರಕ್ಷತಾ ಇಲಾಖೆ ಹೊಸದೊಂದು ನಿಯಮ ಜಾರಿ ಮಾಡಿದೆ.

prasada 1

ಮುಜುರಾಯಿ ಇಲಾಖೆ ದೇಗುಲ ಸೇರಿದಂತೆ ರಾಜ್ಯದ ಎಲ್ಲಾ ದೇಗುಲಗಳಿಗೆ, ಚರ್ಚ್ ಹಾಗೂ ಮಸೀದಿಗಳಿಗೆ ಆಹಾರ ಸುರಕ್ಷತಾ ಇಲಾಖೆ ನೋಟಿಸ್ ಜಾರಿ ಮಾಡಿದ್ದು, ಪ್ರಸಾದ ವಿನಿಯೋಗಕ್ಕೆ ಲೈಸನ್ಸ್ ಪಡೆಯುವಂತೆ ಸೂಚಿಸಿದೆ.

prasada 4

ಭಕ್ತರಿಗೆ ಪ್ರಸಾದ ರೂಪದಲ್ಲಿ ಯಾವುದೇ ಆಹಾರ ಪದಾರ್ಥ ನೀಡಿದ್ರೂ ಅದನ್ನು ಆಹಾರ ಸುರಕ್ಷತೆ ಇಲಾಖೆಯ ಲ್ಯಾಬ್‍ನಲ್ಲಿ ಪರೀಕ್ಷೆಗೆ ಒಳಪಡಿಸಬೇಕೆಂದು ಹೇಳಿದೆ. ದೇಗುಲದಲ್ಲಿ ವಿತರಣೆ ಮಾಡುವ ಪ್ರಸಾದದಲ್ಲಿ ಗುಣಮಟ್ಟ ಕಾಪಾಡುವುದಿಲ್ಲ ಅಂತಾ ದೂರುಗಳು ಬಂದ ಹಿನ್ನಲೆಯಲ್ಲಿ ಈ ಕ್ರಮಕ್ಕೆ ಮುಂದಾಗಿರೋದಾಗಿ ಅಧಿಕಾರಿಗಳು ಹೇಳಿದ್ದಾರೆ.

ಮೂರು ಬಾರಿ ನೋಟಿಸ್ ನೀಡಿದ ನಂತರವೂ ಲೈಸೆನ್ಸ್ ಪಡೆಯದೇ, ಪ್ರಸಾದ ಪರೀಕ್ಷೆಗೆ ಒಳಪಡಿಸದೇ ವಿತರಣೆ ಮಾಡಿದ್ರೆ ದಂಡ ವಿಧಿಸಲು ಆಹಾರ ಇಲಾಖೆ ನಿರ್ಧರಿಸಿದೆ.

prasada 3

prasada 5

prasada 2

Share This Article
Leave a Comment

Leave a Reply

Your email address will not be published. Required fields are marked *