Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Bengaluru City

ಉದ್ಯಮಿ ಆಗುವ ಕನಸು ಕಂಡಿದ್ದ ಡಿಕೆಶಿ ಡಿಸಿಎಂ ಆಗಿದ್ದು ಹೇಗೆ..?

Public TV
Last updated: May 20, 2023 2:44 pm
Public TV
Share
4 Min Read
DK SHIVAKUMAR 1
SHARE

ಟ್ರಬಲ್ ಶೂಟರ್, ಕನಕಪುರ ಬಂಡೆ, ಸಾವಿರ ಕೋಟಿ ಒಡೆಯ ಎಂದೆಲ್ಲ ಕರೆಯಿಸಿಕೊಂಡು ರಾಜ್ಯಾದ್ಯಂತ ಜನ ಮೆಚ್ಚುಗೆ ಗಳಿಸಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾ‌ರ್‌ (D K Shivakumar) ಈಗ ರಾಜ್ಯದ ಉಪ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ.

DKSHI 1

ಕನಕಪುರ ತಾಲೂಕಿನ ದೊಡ್ಡ ಆಲನಹಳ್ಳಿಯ ಇಬ್ಬಳಿಕೆ ಕೆಂಪೇಗೌಡ (KempeGowda) ಅವರ ಮೊಮ್ಮಗನಾದ ಡಿಕೆಶಿ, ಹುಟ್ಟುತ್ತಲೇ ಶ್ರೀಮಂತ. ಅವರ ಸೋದರ ಮಾವ ಮುನಿಲಿಂಗಯ್ಯ ಅವರು ಕನಕಪುರದಲ್ಲಿ ರೈಸ್‌ ಮಿಲ್‌ ನಡೆಸುತ್ತಿದ್ದರು. ಮೊದಲು ಉದ್ಯಮಿಯಾಗುವ ಕನಸು ಕಂಡಿದ್ದ ಡಿಕೆಶಿ ಕನಕಪುರದಲ್ಲಿನ ಭೂಮಿ ಮಾರಿ, ಬೆಂಗಳೂರಿನಲ್ಲಿ ಕೋಳಿ ಫಾರಂ ತೆರೆದರು. ಬಳಿಕ ಸುಂಕದಕಟ್ಟೆಯಲ್ಲಿ 3 ಎಕರೆ ಭೂಮಿ ಖರೀದಿಸಿ, ಬಸವೇಶ್ವರ ನಗರದಲ್ಲಿ ಮನೆಯೊಂದನ್ನು ಖರೀದಿಸಿದರು. ಆದ್ರೆ ತನ್ನ ಮಾವನ ರೈಸ್‌ಮಿಲ್‌ನಲ್ಲಿ ಹೆಚ್ಚು ಕಾಲ ಕಳೆಯುತ್ತಿದ್ದ ಡಿಕೆಶಿ ಕೊನೆಗೆ ಅಲ್ಲಿ ನಡೆಯುತ್ತಿದ್ದ ಚರ್ಚೆಗಳಿಂದ ಪ್ರೇರಿತರಾಗಿ ರಾಜಕೀಯಕ್ಕೆ ದುಮುಕಿದರು. ಸೆಂಟ್ರಲ್ ಹಾಸ್ಟೆಲ್ ನಲ್ಲಿ ಕಾಲ ಕಳೆಯುತ್ತಿದ್ದ ಡಿಕೆಶಿಗೆ ಮೊದಲು ಬಂಗಾರಪ್ಪ, ಬಳಿಕ ಎಸ್.ಎಂ ಕೃಷ್ಣ ರಾಜಕೀಯ ಗುರುಗಳಾದರು.

DKSHI 4

18ನೇ ವಯಸ್ಸಿನಲ್ಲಿಯೇ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ (Congress) ಪಕ್ಷದ ವಿದ್ಯಾರ್ಥಿ ವಿಭಾಗವಾದ ಎನ್‌ಎಸ್‌ಯುಐಗೆ ಸೇರ್ಪಡೆಗೊಂಡು ಅನತಿ ಕಾಲದಲ್ಲಿಯೇ ಬೆಂಗಳೂರು ಜಿಲ್ಲೆಯ ಘಟಕದ ಅಧ್ಯಕ್ಷರಾದರು (1981-83). ವಿದ್ಯಾಭ್ಯಾಸಕ್ಕೆಂದು ಬೆಂಗಳೂರಿನತ್ತ ಮುಖ ಮಾಡಿದರು. ಅರ್‌ಸಿಬಿ ಕಾಲೇಜಿನಲ್ಲೊ ವ್ಯಾಸಂಗ ಮಾಡಲು ಬಂದರು. ಆದ್ರೆ ಡಿಕೆಶಿ ಹೋರಾಟಗಳಿಂದ ಗುರುತಿಸಿಕೊಂಡಿದ್ದರಿಂದ ಆರ್‌ಸಿ ಕಾಲೇಜು ಸೀಟ್‌ ನೀಡುವಲ್ಲಿ ಹಿಂದೇಟು ಹಾಕಿತ್ತು. ಕೊನೆಗೆ ತಮ್ಮ ಸಾಮರ್ಥ್ಯದಿಂದ ಸೀಟು ಗಿಟ್ಟಿಸಿಕೊಂಡು ವಿದ್ಯಾಭ್ಯಾಸ ಮಾಡಿದರು. ಆಗಲೇ ಯುವ ಕಾಂಗ್ರೆಸ್‍ಗೆ ಸೇರಿ ರಾಜ್ಯ ಘಟಕದ ಪ್ರಧಾನ ಕಾರ್ಯದರ್ಶಿಯಾಗಿ ಆಯ್ಕೆಯಾದರು. ಬೆಂಗಳೂರು ಗ್ರಾಮಾಂತರ ಜಿಲ್ಲಾ ಯುವಕಾಂಗ್ರೆಸ್‍ ಅಧ್ಯಕ್ಷರಾಗಿ ಕನಕಪುರ ತಾಲ್ಲೂಕಿನ ಗ್ರಾಮೀಣ ಭಾಗಗಳಲ್ಲಿ ಉಚಿತ ವೈದ್ಯಕೀಯ ಶಿಬಿರ, ರಕ್ತದಾನ ಶಿಬಿರಗಳನ್ನು ವ್ಯವಸ್ಥೆಗೊಳಿಸಿ ಜನರ ಗಮನ ಸೆಳೆದರು. ಇದನ್ನೂ ಓದಿ: ಹಳ್ಳಿಗಾಡಿನ ಜೀವನ, ದನ ಕಾಯುತ್ತಿದ್ದ ಹುಡುಗನಿಂದ ಮುಖ್ಯಮಂತ್ರಿ ಗಾದಿವರೆಗೆ; ಸಿದ್ದರಾಮಯ್ಯ ಸಾಗಿಬಂದ ಹಾದಿ..

DKSHI 3

1985ರ ಸಾತನೂರು ವಿಧಾನಸಭಾಕ್ಷೇತ್ರದಲ್ಲಿ ಅಂದಿನ ಪ್ರಭಾವಿ ಜನತಾದಳ ಮುಖಂಡರಾದ ಶ್ರೀ ಹೆಚ್.ಡಿ. ದೇವೇಗೌಡ (HD Devegowda)  ಅವರ ವಿರುದ್ಧ ಕಾಂಗ್ರೆಸ್ ಪಕ್ಷದಲ್ಲಿ ಉತ್ತಮ ಅಭ್ಯರ್ಥಿ ಸಿಗುವುದು ದುರ್ಲಭವಾದಾಗ ಪಕ್ಷದ ವರಿಷ್ಠರ ಕಣ್ಣು ಡಿ.ಕೆ. ಶಿವಕುಮಾರ್ ಮೇಲೆ ಬಿತ್ತು. ಹೆಚ್.ಡಿ ದೇವೇಗೌಡರ ವಿರುದ್ಧ ಕಣಕ್ಕಿಳಿದಾಗ ಡಿಕೆಶಿ ಒಂದಿಷ್ಟು ಮಂದಿಗೆ ಮಾತ್ರವೇ ಪರಿಚಯ ಇತ್ತು. ಅಂದಿನಿಂದ ಈವರೆಗೂ ಹೋರಾಟದ ಮೂಲಕವೇ ಸ್ಥಾನ, ಬಿರುದುಗಳೆಲ್ಲವನ್ನು ಪಡೆದಿರುವ ಅವರು ರಾಜ್ಯ ಕಾಂಗ್ರೆಸ್‌ನ ಶಕ್ತಿಯೂ ಹೌದು. ಇಂದು ತಮ್ಮ ಅಧ್ಯಕ್ಷತೆಯಲ್ಲಿ ಕಾಂಗ್ರೆಸ್‌ 135 ಸ್ಥಾನಗಳನ್ನ ಗೆದ್ದು ಮತ್ತೊಮ್ಮೆ ಬಹುಮತದ ಸರ್ಕಾರ ಸ್ಥಾಪಿಸುತ್ತಿದೆ.

DKSHI 2

ಮೊಟ್ಟ ಮೊದಲ ಚುನಾವಣೆಯಲ್ಲಿ ದೊಡ್ಡಗೌಡರ ವಿರುದ್ಧ ಕಣಕ್ಕಿಳಿದಿದ್ದ ಡಿಕೆಶಿ, ಅವರಿಗೆ ಪ್ರಯಾಸದ ಗೆಲುವು ಪಡೆಯುವಂತೆ ಫೈಟ್‌ ಕೊಟ್ಟಿದ್ದರು. ಆ ಬಳಿಕ 1987ರಲ್ಲಿ ಸಾತನೂರು ಕ್ಷೇತ್ರದಿಂದ ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯಿತಿ ಸದಸ್ಯರಾಗಿ ಆಯ್ಕೆಯಾದರು. 1989ರಲ್ಲಿ ಸಾತನೂರು ಕ್ಷೇತ್ರದಿಂದ ವಿಧಾನಸಭೆ ಚುನಾವಣೆ ಗೆಲ್ಲುವ ಮೂಲಕ ಕ್ಷೇತ್ರದಲ್ಲಿದ್ದ ಜೆಡಿಎಸ್ ಪ್ರಭಾವ ಕಡಿಮೆಗೊಳಿಸಿದರು. 1991ರಲ್ಲಿ ಅಂದಿನ ಮುಖ್ಯಮಂತ್ರಿ ಶ್ರೀ ವೀರೇಂದ್ರ ಪಾಟೀಲ್‍ ಅವರು ಅನಾರೋಗ್ಯದ ಕಾರಣ ಮುಖ್ಯಮಂತ್ರಿ ಪದವಿಯನ್ನು ತ್ಯಜಿಸಬೇಕಾಗಿ ಬಂದಾಗ ಬಂಗಾರಪ್ಪ ಮುಖ್ಯಮಂತ್ರಿಯಾಗಿ ಆಯ್ಕೆಯಾಗುವಲ್ಲಿ ಡಿ.ಕೆ ಶಿವಕುಮಾರ್‌‌ ಮಹತ್ವದ ಪಾತ್ರವಹಿಸಿದ್ದರು. ಬಂಗಾರಪ್ಪ ಸಂಪುಟದಲ್ಲಿ ಬಂಧಿ ಖಾನೆ ಖಾತೆ ಹೊಣೆ ಅವರಿಗೆ ನೀಡಲಾಯಿತು. 1994ರ ಚುನಾವಣೆಯಲ್ಲಿ ಕಾಂಗ್ರೆಸ್‌ನಿಂದ ಟಿಕೆಟ್ ಕೈತಪ್ಪಿ ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿದು ಜಯಗಳಿಸಿ ಕಾಂಗ್ರೆಸ್‌ಗೆ ಬಿಗ್‌ ಶಾಕ್‌ ಕೊಟ್ಟಿದ್ದರು. 1999ರ ಚುನಾವಣೆಯಲ್ಲಿ ಸಾತನೂರು ಕ್ಷೇತ್ರದಿಂದ ಮತ್ತೆ ಆಯ್ಕೆಗೊಂಡರು, ಅಲ್ಲದೇ ಎಸ್‌.ಎಂ ಕೃಷ್ಣ ಸಂಪುಟದಲ್ಲಿ ಮೊದಲಬಾರಿಗೆ ಸಹಕಾರ ಸಚಿವರೂ ಆಗಿದ್ದರು.

DKSHI 5

2008ರಲ್ಲಿ ಕ್ಷೇತ್ರ ಪುನರ್ ವಿಂಗಡಣೆ ಬಳಿಕ ಸಾತನೂರು ಕ್ಷೇತ್ರ (Sathanur Constituency) ಇಲ್ಲವಾಯಿತು. ಆಗ ಕನಕಪುರ ಕ್ಷೇತ್ರಕ್ಕೆ ಬಂದರು. 2008, 2013, 2018 ಮತ್ತು 2023ರ ಚುನಾವಣೆಯಲ್ಲಿ ಕನಕಪುರದಿಂದ ನಿರಂತರವಾಗಿ ಗೆಲುವು ಸಾಧಿಸುತ್ತಾ ಬಂದರು. 2013ರ ಚುನಾವಣೆಯಲ್ಲಿ ಕಾಂಗ್ರೆಸ್‌ ಬಹುಮತ ಸರ್ಕಾರ ರಚನೆಯಾಯಿತು. ಸಿದ್ದರಾಮಯ್ಯ ಸಿಎಂ ಆಗಿದ್ದರೂ, ಹೈಕಮಾಂಡ್‌ ಒಪ್ಪಿದ ಮೇಲೆ ಸಂಪುಟ ಸೇರಿ 7 ತಿಂಗಳ ನಂತರ ಇಂಧನ ಖಾತೆ ವಹಿಸಿಕೊಂಡರು. 2018ರಲ್ಲಿ‌ ಯಾವ ಪಕ್ಷವೂ ಬಹುಮತ ಪಡೆಯಲಿಲ್ಲ. ಆಗ ಕಾಂಗ್ರೆಸ್‌ – ಜೆಡಿಎಸ್‌ ಮೈತ್ರಿ ಸರ್ಕಾರದಲ್ಲಿ ಜಲ ಸಂಪನ್ಮೂಲ ಮತ್ತು ಕನ್ನಡ ಸಂಸ್ಕೃತಿ ಇಲಾಖೆ ಸಚಿವರಾದರು. 35 ವರ್ಷಗಳಿಂದ ಸ್ವಾಮಿ ನಿಷ್ಠೆಯಿಂದ ಕಾಂಗ್ರೆಸ್‌ ಪಕ್ಷಕ್ಕಾಗಿ ದುಡಿಯುತ್ತಿರುವ ಡಿಕೆ ಶಿವಕುಮಾರ್‌, ಡಿನೇಶ್‌ ಗುಂಡೂರಾವ್‌ ಅವರ ಬಳಿಕ 2020 ಮಾರ್ಚ್‌ 11ರಂದು ಕೆಪಿಸಿಸಿ ಅಧ್ಯಕ್ಷರಾಗಿ ನೇಮಕಗೊಂಡರು.

DKSHI

ಅಷ್ಟೇ ಅಲ್ಲ ಮಹಾರಾಷ್ಟ್ರದಲ್ಲಿ ವಿಲಾಸ್ ರಾವ್ ದೇಶಮುಖ್ ಸರ್ಕಾರ ಕುಸಿಯುವ ಭೀತಿ ಎದುರಾದಾಗ ಶಾಸಕರನ್ನು ರಕ್ಷಣೆ ಮಾಡಿ ಬೆಂಗಳೂರಿಗೆ ಕರೆದುಕೊಂಡು ಬಂದು, ಕುದುರೆ ವ್ಯಾಪಾರ ನಡೆಯದಂತೆ ನೋಡಿಕೊಂಡರು. 2017ರಲ್ಲಿ ಗುಜರಾತ್ ವಿಧಾನಸಭೆಯಿಂದ ರಾಜ್ಯಸಭೆ ಚುನಾವಣೆ ನಡೆಯುವಾಗ ಪಕ್ಷದ ಸೂಚನೆಯಂತೆ ಪಕ್ಷದ ಶಾಸಕರನ್ನು ಬೆಂಗಳೂರಿಗೆ ಕರೆದುಕೊಂಡು ಬಂದು ಕುದುರೆ ವ್ಯಾಪಾರ ತಪ್ಪಿಸಿದರು. ಜಾರಿ ನಿರ್ದೇಶನಾಲಯದ ದಾಳಿ ಬಳಿಕ ಡಿ.ಕೆ ಶಿವಕುಮಾರ್ ಬಂಧನವಾಯಿತು. ದೆಹಲಿಯ ತಿಹಾರ್ ಜೈಲಿನಲ್ಲಿದ್ದ ಅವರನ್ನು ನೋಡಲು ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಭೇಟಿ ನೀಡಿದ್ದರು.

 

Share This Article
Facebook Whatsapp Whatsapp Telegram

Cinema Updates

Ravi Ganiga
ಕನ್ನಡಕ್ಕೆ ಅಪಮಾನ ಮಾಡಿದಾಗ ಶಿವರಾಜ್ ಕುಮಾರ್ ಮಾತಾಡಬೇಕು – ರವಿ ಗಣಿಗ
40 minutes ago
Kamal Haasan
ನಾನು ಬೆದರಿಕೆಗೆ ಹೆದರಲ್ಲ, ಕ್ಷಮೆ ಕೇಳಲ್ಲ- ಕಮಲ್ ಹಾಸನ್ ಉದ್ಧಟತನ
1 hour ago
sukumar upendra 1
‘ಪುಷ್ಪ’ ಸಿನಿಮಾ ಮಾಡಲು ಉಪೇಂದ್ರ ಸ್ಪೂರ್ತಿ ಎಂದ ನಿರ್ದೇಶಕ ಸುಕುಮಾರ್
3 hours ago
Shivaraj Tangadagi
ಮರೆಯಾದ ಭಾವಗೀತೆಗಳ ಭಾವ, ಅಗಲಿದ ಕಾವ್ಯ ಚೇತನ – ಹೆಚ್‌ಎಸ್‌ವಿ ನಿಧನಕ್ಕೆ ಶಿವರಾಜ ತಂಗಡಗಿ ಶೋಕ
3 hours ago

You Might Also Like

Corona
Chikkaballapur

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಗರ್ಭಿಣಿಯರೂ ಸೇರಿ 4 ಮಂದಿಗೆ ಕೊರೊನಾ

Public TV
By Public TV
13 minutes ago
virat kohli 1 1
Cricket

ದೇವಸ್ಥಾನದಲ್ಲಿ ಪ್ರಸಾದ ಹಂಚಲು ಕೊಹ್ಲಿ ಯಾವಾಗ ಹೋದ್ರು?- ಇಂಟರ್ನೆಟ್‌ಗೆ ಬೆಂಕಿ ಹಚ್ಚಿದ ವೀಡಿಯೋ

Public TV
By Public TV
17 minutes ago
Dharwad Accident 1
Crime

ನಿಂತಿದ್ದ ಲಾರಿಗೆ ಕಾರು ಡಿಕ್ಕಿ – ಜಮೀನು ಖರೀದಿಗೆ ತೆರಳಿದ್ದ ಮೂವರು ಸ್ಥಳದಲ್ಲೇ ಸಾವು

Public TV
By Public TV
31 minutes ago
H D Kumaraswamy
Bengaluru City

ಮಾನ್ಯತಾ ಟೆಕ್ ಪಾರ್ಕ್ ಬಳಿ ರಾಜಕಾಲುವೆ ಮೇಲೆ ಅಕ್ರಮವಾಗಿ ಎದ್ದಿರುವ ಬೃಹತ್ ಕಟ್ಟಡ ಯಾರದ್ದು?- ಹೆಚ್‌ಡಿಕೆ ಪ್ರಶ್ನೆ

Public TV
By Public TV
35 minutes ago
RCB 7
Cricket

ಈ ಸಲ ಆರ್‌ಸಿಬಿ ಕಪ್‌ ಗೆಲ್ಲದಿದ್ರೆ ಪತಿಗೆ ಡಿವೋರ್ಸ್‌ – ವೈರಲ್‌ ಆಯ್ತು ಅಭಿಮಾನಿಯ ಪೋಸ್ಟರ್‌

Public TV
By Public TV
43 minutes ago
Vaibhav Suryavanshi Narendra Modi IPL 2025
Cricket

ಪ್ರಧಾನಿ ಮೋದಿ ಪಾದ ಮುಟ್ಟಿ ನಮಸ್ಕರಿಸಿದ ವೈಭವ್ ಸೂರ್ಯವಂಶಿ

Public TV
By Public TV
52 minutes ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?