ಬಳ್ಳಾರಿ: ಪಾಲಿಕೆ (Mahanagara Palike) ಸದಸ್ಯನೊಬ್ಬ ಸ್ನೇಹಿತನಿಗೆ ಜೀವ ಬೆದರಿಕೆ ಒಡ್ಡಿದ್ದು ಆತ ಆತ್ಮಹತ್ಯೆಗೆ ಯತ್ನಿಸಿದ ಪ್ರಕರಣ ಬಳ್ಳಾರಿಯಲ್ಲಿ (Bellary) ನಡೆದಿದೆ.
ಮಹಾನಗರ ಪಾಲಿಕೆಯ ಕಾಂಗ್ರೆಸ್ ಸದಸ್ಯ ಆಸೀಫ್ ಭಾಷಾ ಎಂಬಾತ ಸ್ನೇಹಿತ ಅಹಮದ್ ಹುಸೇನ್ಗೆ ಜೀವ ಬೆದರಿಕೆ ಒಡ್ಡಿದ್ದಾನೆ. ಅಲ್ಲದೇ ಕುಟುಂಬಕ್ಕೂ ಬೆದರಿಕೆ ಹಾಕಿದ್ದಾನೆ ಎಂದು ಆರೋಪಿಸಿದ್ದಾನೆ. ಇದರಿಂದ ಮನನೊಂದು ಹುಸೇನ್ ಫಿನಾಯಿಲ್ ಕುಡಿದು ಆತ್ಮಹತ್ಯೆಗೆ ಯತ್ನಿಸಿದ್ದಾನೆ. ಆತನಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಇದನ್ನೂ ಓದಿ: ಪಲಾವ್ನಲ್ಲಿ ವಿಷ ಬೆರೆಸಿ ತಂದೆ-ತಾಯಿಯ ಕೊಲೆಗೈದ ಪಾಪಿ ಪುತ್ರ!
ಆಸೀಫ್ ಹಾಗೂ ಅಹಮದ್ ಹುಸೇನ್ ಅತ್ಮೀಯ ಸ್ನೇಹಿತರು. ಆಸೀಫ್ನ ಎಲ್ಲಾ ವ್ಯವಹಾರಗಳನ್ನ ಅಹಮದ್ ಹುಸೇನ್ ನೋಡಿಕೊಳ್ಳುತ್ತಿದ್ದ. ಇದರಿಂದ ಅಹಮದ್ ಹುಸೇನ್ ಮನೆಗೆ ಆಸೀಫ್ ಆಗಾಗಾ ಬಂದು ಹೋಗುತ್ತಿದ್ದ ಎನ್ನಲಾಗಿದೆ. ಬಳಿಕ ಹುಸೇನ್ನ ಪತ್ನಿಯ ಜೊತೆ ಸಲುಗೆ ಬೆಳೆದು ಅಕ್ರಮ ಸಂಬಂಧಕ್ಕೆ ತಿರುಗಿದೆ ಎಂದು ಆತ ಆರೋಪಿಸಿದ್ದಾನೆ.
ಈ ವಿಚಾರವನ್ನು ಪ್ರಶ್ನಿಸಿದ್ದಕ್ಕೆ ಆಸೀಫ್ ಪ್ರಾಣ ಬೆದರಿಕೆ ಹಾಕಿದ್ದಾನೆ. ಅಲ್ಲದೇ ಆತನ ಕುಟುಂಬದವರನ್ನು ಕೊಲ್ಲುವುದಾಗಿ ಬೆದರಿಕೆ ಹಾಕಿದ್ದಾನೆ. ಇದರಿಂದ ಆತ್ಮಹತ್ಯೆಗೆ ಯತ್ನಿಸಿದ್ದಾಗಿ ಹುಸೆನ್ ಹೇಳಿದ್ದಾನೆ. ಈ ಸಂಬಂಧ ಕೌಲ್ ಬಜಾರ್ ಪೊಲೀಸ್ (Police) ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ಇದನ್ನೂ ಓದಿ: ನಾಯಿ ಬೊಗಳಿದ್ದಕ್ಕೆ ವೃದ್ಧನಿಗೆ ಚಾಕು ಇರಿತ – ಆರೋಪಿ ಬಂಧನ
Web Stories