ವಿಧಾನ ಪರಿಷತ್ ಸದಸ್ಯ ಬಸವರಾಜ ಹೊರಟ್ಟಿ ಅವರಿಗೆ ಜೀವ ಬೆದರಿಕೆ ಪತ್ರ

Public TV
1 Min Read
basavarajhoratti hubballi 1

ಹುಬ್ಬಳ್ಳಿ: ವಿಧಾನ ಪರಿಷತ್ ಸದಸ್ಯ ಬಸವರಾಜ ಹೊರಟ್ಟಿಯವರ ಹುಬ್ಬಳ್ಳಿ ನಿವಾಸಕ್ಕೆ ಜೀವ ಬೆದರಿಕೆ ಹಾಕಿರುವ ಅನಾಮಧೇಯ ಪತ್ರವೊಂದು ಬಂದಿದೆ.

ಪತ್ರ ದಲ್ಲಿ ಕೇವಲ ನಾಲ್ಕು ಸಾಲುಗಳಿದ್ದು, ನಿಮ್ಮನ್ನು ಗುಂಡಿಕ್ಕಿ ಕೊಲೆ ಮಾಡಲು ಮುಂಬೈನಿಂದ ಐವರು ತಂಡವೊಂದು ಹುಬ್ಬಳ್ಳಿಗೆ ಬಂದಿದ್ದು, ಇನ್ನೂ ಎರಡು ದಿನಗಲ್ಲಿ ನಿಮ್ಮನ್ನು ಕೊಲೆ ಮಾಡಲಿದ್ದಾರೆ ಎಂದು ಬರೆಯಲಾಗಿದೆ. ಪತ್ರವನ್ನು ಆಂಚೆ ಮೂಲಕ ಪೋಸ್ಟ್ ಮಾಡಲಾಗಿದ್ದು ಹುಬ್ಬಳ್ಳಿಯ ಉಣಕಲ್ ಗ್ರಾಮದಿಂದ ಪತ್ರ ಬಂದಿದೆ.

HBL HORATTI LETTER AV 2

ಪ್ರಸ್ತುತ ಹೊರಟ್ಟಿಯವರು ಬೆಂಗಳೂರಿನಲ್ಲಿರುವ ಕಾರಣದಿಂದ ಅವರ ಸಪ್ತ ಸಹಾಯಕನಿಂದ ಪತ್ರವನ್ನು ಡಿಸಿಪಿ ನೇಮಗೌಡರಿಗೆ ಹಸ್ತಾಂತರ ಮಾಡಿದ್ದಾರೆ. ಇನ್ನೂ ಬಸವರಾಜ ಹೊರಟ್ಟಿಯವರು ಲಿಂಗಾಯತ ಪ್ರತ್ಯೇಕ ಧರ್ಮದ ಹೋರಾಟ ಸಮಿತಿಯ ಅಧ್ಯಕ್ಷರಾಗಿ ಹೋರಾಟದಲ್ಲಿ ಭಾಗಿಯಾಗಿದ್ದಾರೆ ಈ ಹಿನ್ನೆಲೆಯಲ್ಲಿ ಪತ್ರ ಬಂದಿರಬಹುದು ಎನ್ನಲಾಗುತ್ತಿದೆ.

ಈ ಕುರಿತು ಹುಬ್ಬಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣವನ್ನು ದಾಖಲಿಸಿಕೊಳ್ಳಲಾಗಿದೆ. ಪ್ರಕರಣದ ಕುರಿತು ಪ್ರತಿಕ್ರಿಯೆ ನೀಡಿರುವ ಡಿಸಿಪಿ ರೇಣುಕಾ ಸುಕುಮಾರ್ ಪ್ರಕರಣ ದಾಖಲು ಮಾಡಿಕೊಂಡು ತನಿಖೆ ನಡೆಸಲಾಗುತ್ತಿದೆ. ಇಂತಹ ಸಂದರ್ಭದಲ್ಲಿ ಪ್ರಕರಣ ಕುರಿತು ಯಾವುದೇ ಮಾಹಿತಿಯನ್ನು ನೀಡಲಾಗುವುದಿಲ್ಲ ಎಂದು ಹೇಳಿದ್ದಾರೆ.

HBL HORATTI LETTER AV 1

HBL HORATTI LETTER AV 2

HBL HORATTI LETTER AV 1

 

Share This Article
Leave a Comment

Leave a Reply

Your email address will not be published. Required fields are marked *