Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: 40 ಕ್ಷೇತ್ರಗಳಲ್ಲಿ ಅಭ್ಯರ್ಥಿ ಆಯ್ಕೆ ಕಗ್ಗಂಟು – ಏಪ್ರಿಲ್‌ 11ರಂದು ಬಿಜೆಪಿ ಫಸ್ಟ್‌ ಲಿಸ್ಟ್‌ ರಿಲೀಸ್..?
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | 40 ಕ್ಷೇತ್ರಗಳಲ್ಲಿ ಅಭ್ಯರ್ಥಿ ಆಯ್ಕೆ ಕಗ್ಗಂಟು – ಏಪ್ರಿಲ್‌ 11ರಂದು ಬಿಜೆಪಿ ಫಸ್ಟ್‌ ಲಿಸ್ಟ್‌ ರಿಲೀಸ್..?

Bengaluru City

40 ಕ್ಷೇತ್ರಗಳಲ್ಲಿ ಅಭ್ಯರ್ಥಿ ಆಯ್ಕೆ ಕಗ್ಗಂಟು – ಏಪ್ರಿಲ್‌ 11ರಂದು ಬಿಜೆಪಿ ಫಸ್ಟ್‌ ಲಿಸ್ಟ್‌ ರಿಲೀಸ್..?

Public TV
Last updated: April 10, 2023 10:01 pm
Public TV
Share
3 Min Read
BJP meeting
SHARE

– ಸಮೀಕ್ಷೆಗಳ ವ್ಯತ್ಯಾಸ ಕಂಡು ಅಮಿತ್ ಶಾ ಗರಂ

ಬೆಂಗಳೂರು: ಕರ್ನಾಟಕ ವಿಧಾನಸಭೆ ಚುನಾವಣೆಗೆ ಅಧಿಸೂಚನೆ ಹೊರಬೀಳಲು ಮೂರು ದಿನಗಳು ಬಾಕಿ ಉಳಿದಿದೆ. ಆದರೂ ಆಡಳಿತಾರೂಢ ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನೇ ಬಿಡುಗಡೆ ಮಾಡಿಲ್ಲ. ಕಳೆದ ಎರಡು ದಿನಗಳಿಂದಲೂ ದೆಹಲಿಯಲ್ಲಿ ಸಾಲು ಸಾಲು ಸಭೆ ನಡೆದಿದ್ದರೂ, ಮೊದಲ ಪಟ್ಟಿ ಬಿಡುಗಡೆ ಕಗ್ಗಂಟಾಗಿಯೇ ಉಳಿದಿದೆ.

BJP meeting

ಭಾನುವಾರ 170-180 ಅಭ್ಯರ್ಥಿಗಳ ಪಟ್ಟಿ ರೆಡಿಯಾಗಿದೆ, ರಿಲೀಸ್ ಆಗೋದಷ್ಟೇ ಬಾಕಿಯಿದೆ ಎನ್ನಲಾಗಿತ್ತು. ಆದ್ರೆ, ರಾತ್ರಿ ಕಳೆದು ಬೆಳಗಾಗುವಷ್ಟರಲ್ಲಿ ನಿರ್ಧಾರ ಬದಲಿಸಿದೆ. ಸೋಮವಾರ ಬೆಳ್ಳಂಬೆಳಗ್ಗೆ ಸಿಎಂ ಬೊಮ್ಮಾಯಿ ಅವರೊಂದಿಗೆ ಮಾತುಕತೆ ನಡೆಸಿದ ಅಮಿತ್ ಶಾ, ಸುಮಾರು 40 ಕ್ಷೇತ್ರಗಳ ಬಗ್ಗೆ ಸ್ಪಷ್ಟನೆ ಕೇಳಿದ್ದರು. ರಾಜ್ಯ ನಾಯಕರು ನಡೆಸಿದ ಸರ್ವೆ ಮತ್ತು ಕೇಂದ್ರದಿಂದ ನಡೆದ ಸರ್ವೆಯಲ್ಲಿ ವ್ಯತಾಸಗಳಿದ್ದು ಈ ಬಗ್ಗೆ ಮತ್ತೊಂದು ವರದಿ ಕೊಡುವಂತೆ ಸೂಚನೆ ನೀಡಿದ್ದಾರೆ. ಮುಖ್ಯವಾಗಿ ಹೊಸ ಮುಖಗಳನ್ನು ಕಣಕ್ಕಿಳಿಸುವ ಮತ್ತು ಹಾಲಿ ಶಾಸಕರನ್ನು ಮುಂದುವರಿಸುವ ವಿಚಾರದಲ್ಲಿ ಗೊಂದಲವಿದೆ. ಹೀಗಾಗಿಯೇ ಸಿಇಸಿಯಲ್ಲಿ ಅನುಮತಿ ಸಿಕ್ಕಿದ್ದ ಪಟ್ಟಿಯನ್ನ ಪ್ರಕಟಿಸದಂತೆ ಅಮಿತ್ ಶಾ ತಡೆ ಹಿಡಿದಿದ್ದಾರೆ ಎಂದು ಮೂಲಗಳು ತಿಳಿಸಿವೆ.

narendra modi j.p.nadda

ಬಿಎಸ್‌ವೈ ಹೊರಗಿಟ್ಟು ಅಮಿತ್ ಶಾ, ಸಿಎಂ ಜೊತೆ ಪ್ರತ್ಯೇಕ ಸಭೆ ನಡೆಸಿದ್ದಾರೆ. ಬಿ.ವೈ ವಿಜಯೇಂದ್ರ ಅವರನ್ನ ಎಲ್ಲಿ ಕಣಕ್ಕಿಳಿಸಬೇಕು ಎನ್ನುವ ಬಗ್ಗೆ ಅಭಿಪ್ರಾಯ ಪಡೆದಿದ್ದಾರೆ. ಮತ್ತೊಂದುಕಡೆ ಬಿ.ಎಸ್‌ ಯಡಿಯೂರಪ್ಪ ಜೊತೆ ಜೆಪಿ ನಡ್ಡಾ ಪ್ರತ್ಯೇಕ ಸಭೆ ನಡೆಸಿದ್ದಾರೆ. ಹಲವು ಕ್ಷೇತ್ರಗಳಲ್ಲಿ ಗೊಂದಲಗಳು ಹಾಗೆಯೇ ಉಳಿದಿರುವ ಕಾರಣ ನಡ್ಡಾ ಮತ್ತೊಂದು ಸುತ್ತಿನ ಸಭೆ ನಡೆಸಿದ್ದಾರೆ. ಆದ್ರೆ, ಈ ಸಭೆಗೂ ಮುನ್ನವೇ ಬೆಂಗಳೂರು ವಿಮಾನ ಹತ್ತಿದ್ದು ಕುತೂಹಲಕ್ಕೆ ಕಾರಣವಾಗಿದೆ.

ಬಿಜೆಪಿ ಫಸ್ಟ್ ಲಿಸ್ಟ್ ವಿಳಂಬಕ್ಕೆ ಕಾರಣ ಏನು?
40 ಕ್ಷೇತ್ರಗಳಲ್ಲಿ ಅಭ್ಯರ್ಥಿಗಳ ಆಯ್ಕೆ ಕಗ್ಗಂಟಾಗಿದೆ. ಸರ್ವೇ ರಿಪೋರ್ಟ್‌ಗಳಲ್ಲಿ ಗೊಂದಲ ಹಾಗೂ ವ್ಯತ್ಯಾಸ ಕಂಡುಬಂದಿದೆ. ನೈಜ ವರದಿ ನೀಡಲು ರಾಜ್ಯ ನಾಯಕರಿಗೆ ಸೂಚನೆ ನೀಡಲಾಗಿದೆ. ಹಲವು ಕ್ಷೇತ್ರಗಳಲ್ಲಿ ಭಾರೀ ಬಂಡಾಯ ಭೀತಿ ಎದುರಾಗಿದ್ದು, ಟಿಕೆಟ್‌ ಆಕಾಂಕ್ಷಿಗಳ ಬಂಡಾಯ ಮುಂದೂಡಲು ಹೊಸ ತಂತ್ರ ನಡೆಸಲಾಗಿದೆ ಎಂದು ತಿಳಿದುಬಂದಿದೆ.

BJP meeting2

ಸನ್‌ ಸ್ಟ್ರೋಕ್‌ ನೀಡುತ್ತಾ ಹೈಕಮಾಂಡ್?
ಟಿಕೆಟ್‌ ಹಂಚಿಕೆ ರಹಸ್ಯವಾಗಿದ್ದು, ಕುಟುಂಬ ರಾಜಕಾರಣಕ್ಕೆ ಅಂತ್ಯ ಆಡುವ ಸಾಧ್ಯತೆಯಿದೆ ಎಂದು ಹೇಳಲಾಗಿದೆ. ಆದರೆ, ಎಲ್ಲರಿಗೂ ಈ ನಿಯಮ ಅನ್ವಯ ಅನುಮಾನವಾಗಿದೆ. ಶಿಕಾರಿಪುರದಿಂದ ತಮ್ಮ ಬದಲಾಗಿ ಪುತ್ರ ವಿಜಯೇಂದ್ರನಿಗೆ ಬಿಎಸ್‌ವೈ ಟಿಕೆಟ್‌ ಕೇಳಿದ್ದಾರೆ. ಈ ನಡುವೆ ಸಚಿವ ವಿ. ಸೋಮಣ್ಣ ಪುತ್ರ ಅರುಣ್‌ಗೆ ಗುಬ್ಬಿ ಕ್ಷೇತ್ರದಿಂದ ಟಿಕೆಟ್‌ ಕೇಳಿದ್ದಾರೆ. ಸವಿವ ಎಂಟಿಬಿ ನಾಗರಾಜು ಪುತ್ರ ನಿತಿನ್‌ಗೆ ಹೊಸಕೋಟೆಯಿಂದ, ಶಾಸಕ ತಿಪ್ಪಾರೆಡ್ಡಿ ಪುತ್ರ ಡಾ. ಸಿದ್ದಾರ್ಥ್‌ಗೆ ಚಿತ್ರದುರ್ಗದಿಂದ, ಮಾಡಾಳ್‌ ವಿರೂಪಾಕ್ಷಪ್ಪ ಮಲ್ಲಿಕಾರ್ಜುನ್‌ಗೆ ಚನ್ನಗಿರಿ ಕ್ಷೇತ್ರದಿಂದ, ಸಂಸದ ಸಿದ್ದೇಶ್ವರ ಪುತ್ರ ಅನಿತ್‌ಗೆ ದಾವಣಗೆರೆ ಉತ್ತರ ಕ್ಷೇತ್ರದಿಂದ, ದಿವಂಗತ ಉಮೇಶ್ ಕತ್ತಿ ಕುಟುಂಬಸ್ಥರು ಹುಕ್ಕೇರಿ ಕ್ಷೇತ್ರದಿಂದ ಹಾಗೂ ದಿವಂಗತ ಆನಂದ್ ಮಾಮನಿ ಕುಟುಂಬಸ್ಥರು ಸವದತ್ತಿ ಕ್ಷೇತ್ರದಿಂದ ಟಿಕೆಟ್‌ಗೆ ಬೇಡಿಕೆಯಿಟ್ಟಿದ್ದಾರೆ. ಆದರೆ ವಿಜಯೇಂದ್ರಗೆ ಶಿಕಾರಿ ಪುರದಿಂದ ಬಹುತೇಕ ಟಿಕೆಟ್‌ ಫಿಕ್ಸ್‌ ಆಗಿದ್ದು, ಉಳಿದವರಿಗೆ ಟಿಕೆಟ್‌ ನೀಡುವುದು ಸಂಶಯವಾಗಿದೆ.

ಇವರಿಗೆ ಕೈತಪ್ಪುತ್ತಾ ಬಿಜೆಪಿ ಟಿಕೆಟ್?
* ಹಾಲಾಡಿ ಶ್ರೀನಿವಾಸ ಶೆಟ್ಟಿ – ಕುಂದಾಪುರ ( ನಿವೃತ್ತಿ ಘೋಷಣೆ)
* ಎಸ್.ಎ.ರವೀಂದ್ರನಾಥ್ – ದಾವಣಗೆರೆ ಉತ್ತರ ( ನಿವೃತ್ತಿ ಘೋಷಣೆ)
* ಲಿಂಗಣ್ಣ – ಮಾಯಕೊಂಡ
* ಮಾಡಾಳ್ ವಿರೂಪಾಕ್ಷಪ್ಪ – ಚನ್ನಗಿರಿ
* ಸಂಜೀವ್ ಮಠಂದೂರು – ಪುತ್ತೂರು
* ಬಸವರಾಜ ದಡೇಸುಗೂರು – ಕನಕಗಿರಿ
* ಮಹೇಶ್ ಕುಮಟಳ್ಳಿ – ಅಥಣಿ
* ಶ್ರೀಮಂತ ಪಾಟೀಲ್ – ಕಾಗವಾಡ
* ಅರುಣ್ ಪೂಜಾರ್ – ರಾಣೆಬೆನ್ನೂರು
* ಸುನೀಲ್ ನಾಯ್ಕ್ – ಭಟ್ಕಳ
* ಲಾಲಾಜಿ ಮೆಂಡನ್ – ಕಾಪು
* ಸುಕುಮಾರ್ ಶೆಟ್ಟಿ – ಬೈಂದೂರು
* ರಘುಪತಿ ಭಟ್ – ಉಡುಪಿ

TAGGED:Amit ShahbjpBJP candidate listBS YediyurappaJP Naddaಅಮಿತ್ ಶಾಕರ್ನಾಟಕ ಎಲೆಕ್ಷನ್ಚುನಾವಣಾ ಅಭ್ಯರ್ಥಿಗಳುಬಸವರಾಜ ಬೊಮ್ಮಾಯಿಬಿ.ಎಸ್.ಯಡಿಯೂರಪ್ಪಬಿಜೆಪಿ
Share This Article
Facebook Whatsapp Whatsapp Telegram

Cinema news

darshan ex manager mallikarjun 2 1
ದರ್ಶನ್‌, ಧ್ರುವ ಸರ್ಜಾ ನಡುವೆ ಮನಸ್ತಾಪಕ್ಕೆ ಕಾರಣ ಯಾರು? – ಮಲ್ಲಿಕಾರ್ಜುನ್‌ ಹೇಳಿದ್ದೇನು?
Bengaluru City Cinema Latest Sandalwood Top Stories
darshan ex manager mallikarjun 2
ಕೇಸ್‌ ಒಂದ್ರಲ್ಲಿ ದರ್ಶನ್‌ ಸರ್‌ ಸಿಕ್ಕಾಕೊಂಡಾಗ ಬಹಳ ಬೇಜಾರಾಯ್ತು: ಮಾಜಿ ಮ್ಯಾನೇಜರ್‌ ಮಲ್ಲಿಕಾರ್ಜುನ್‌ ಮಾತು
Bengaluru City Cinema Latest Sandalwood Top Stories
darshan ex manager mallikarjun
8 ವರ್ಷ ನಾಪತ್ತೆಯಾಗಿದ್ದ ದರ್ಶನ್‌ ಮಾಜಿ ಮ್ಯಾನೇಜರ್‌ ದಿಢೀರ್‌ ಪ್ರತ್ಯಕ್ಷ – ನಡೆದಿದ್ದೇನು ಅಂತ ಎಳೆಎಳೆಯಾಗಿ ಬಿಚ್ಚಿಟ್ಟ ಮಲ್ಲಿ
Bengaluru City Cinema Latest Main Post Sandalwood
Udupi Rishab Shetty Home Bhajane Kunitha Yakshagana Harake
ನಟ ರಿಷಬ್ ಶೆಟ್ಟಿ ಮನೆಯಲ್ಲಿ ಕುಣಿತ ಭಜನೆ, ಯಕ್ಷಗಾನ ಹರಕೆ ಪ್ರದರ್ಶನ
Cinema Districts Karnataka Latest Sandalwood Top Stories Udupi

You Might Also Like

Gill
Cricket

ತವರಿನಲ್ಲೇ ತಿಣುಕಾಡಿ ಗೆದ್ದ ಗುಜರಾತ್‌ – ಕೆಕೆಆರ್‌ಗೆ ಡಬಲ್‌ ಹ್ಯಾಟ್ರಿಕ್‌ ಸೋಲು

Public TV
By Public TV
4 minutes ago
Drugs
Crime

38 ಕೋಟಿ ಮೌಲ್ಯದ ಡ್ರಗ್ಸ್ ನಾಶಪಡಿಸಿದ ಎನ್‌ಸಿಬಿ

Public TV
By Public TV
38 minutes ago
Leopard 1
Districts

ಮೈಸೂರು | ಚಾಮುಂಡಿ ಬೆಟ್ಟದ ತಪ್ಪಲಿನಲ್ಲಿ ಮನೆ ಹೊಕ್ಕಿದ್ದ ಚಿರತೆ ಸೆರೆ

Public TV
By Public TV
2 hours ago
Mandya Youth Death
Districts

ಕೆರೆಯಲ್ಲಿ ಮೀನು ಹಿಡಿಯಲು ಹೋಗಿ ಯುವಕ ಸಾವು

Public TV
By Public TV
2 hours ago
Fruits
Bengaluru City

ಮಾವು, ಬಾಳೆಹಣ್ಣು, ಪಪ್ಪಾಯ ಹಣ್ಣಿಗೆ ಕ್ಯಾಲ್ಸಿಯಂ ಕಾರ್ಬೈಡ್ ಬಳಕೆ – ಕ್ರಮ ಕೈಗೊಳ್ಳಲು FSSAI ಸೂಚನೆ

Public TV
By Public TV
2 hours ago
Electricity
Bengaluru City

ಗೃಹಬಳಕೆ ಗ್ರಾಹಕರಿಗೆ ವಿದ್ಯುತ್ ದರ ಏರಿಕೆ ಶಾಕ್ – ಯೂನಿಟ್‌ಗೆ 56 ಪೈಸೆ ಹೆಚ್ಚಳ

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?