ಬೆಂಗಳೂರು: ಮತ್ತೆ ಬೆಂಗಳೂರು ಸೇರಿದಂತೆ ಕರ್ನಾಟಕದ ದಕ್ಷಿಣ ಒಳನಾಡಿನ ಭಾಗದಲ್ಲಿ ಎರಡು ದಿನ ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆಯಿದೆ.
ಸೋಮವಾರ ರಾತ್ರಿ ಬೆಂಗಳೂರಿನಲ್ಲಿ ಮಳೆಯಾಗಿತ್ತು. ಈಗ ಇಂದು ಮತ್ತು ನಾಳೆ ಮಳೆ ಸುರಿಯುವ ಸಾಧ್ಯತೆಯಿದೆ. ಯೆಲ್ಲೋ ಅಲರ್ಟ್ ಘೋಷಣೆಯಾಗಿದೆ ಎಂದು ಹವಾಮಾನ ಇಲಾಖೆಯ ನಿರ್ದೇಶಕ ಸಿ.ಎಸ್ ಪಾಟೀಲ್ ಪಬ್ಲಿಕ್ ಟಿವಿಗೆ ಮಾಹಿತಿ ನೀಡಿದ್ದಾರೆ.
ಮಳೆಯ ಅಬ್ಬರಕ್ಕೆ ಕೊರೊನಾ ಮಹಾಮಾರಿ ಹೆಚ್ಚಾಗುವ ಭೀತಿ ಈಗ ಎದುರಾಗಿದೆ. ತಂಪಾದ ವಾತಾವರಣದಲ್ಲಿ ಕೊರೊನಾ ವೈರಸ್ ಬೇಗ ಹರಡುತ್ತದೆ. ಆದ್ದರಿಂದ ಮನೆಯಿಂದ ಹೊರ ಬರಬೇಡಿ, ಮನೆಯಲ್ಲೇ ಇರಿ ಎನ್ನುವ ಸಲಹೆ ವ್ಯಕ್ತವಾಗಿದೆ.