ಬೆಂಗಳೂರು: ಸನಾತನ ಧರ್ಮ (Sanatan Dharma) ಡೆಂಗ್ಯೂ, ಮಲೇರಿಯಾ ಇದ್ದಂತೆ ಅಂತ ವಿವಾದಾತ್ಮಕ ಹೇಳಿಕೆ ನೀಡಿದ್ದ ತಮಿಳುನಾಡು ಸಚಿವ ಉದಯನಿಧಿ ಸ್ಟಾಲಿನ್ (Udhayanidhi Stalin) ಅವರಿಂದು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ (Representatives Speical Court) ಮುಂದೆ ಹಾಜರಾಗುವ ಸಾಧ್ಯತೆಗಳಿವೆ ಎಂದು ಮೂಲಗಳು ತಿಳಿಸಿವೆ.
ಸನಾತನ ಧರ್ಮದ ವಿರುದ್ಧ ಅವಹೇಳನಕಾರಿ ಹೇಳಿಕೆ ಹಿನ್ನೆಲೆಯಲ್ಲಿ 5 ತಿಂಗಳ ಹಿಂದೆ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಸಮನ್ಸ್ ನೀಡಿತ್ತು. ಖುದ್ದಾಗಿ ವಿಚಾರಣೆಗೆ ಹಾಜರಾಗುವಂತೆ ಸೂಚಿಸಿತ್ತು. ಕಳೆದ ಮಾರ್ಚ್ 4 ರಂದು ವಿಚಾರಣೆಗೆ ಹಾಜರಾಗುವಂತೆ ಸಮನ್ಸ್ ನೀಡಿತ್ತು. ಆದ್ರೆ ಕಾರಣಾಂತರದಿಂದ ಗೈರಾಗಿದ್ದ ಉದಯನಿಧಿ ಸ್ಟಾಲಿನ್ ಅವರಿಂದು ಬೆಳಗ್ಗೆ 10:30ರ ವೇಳೆಗೆ ಬೆಂಗಳೂರಿನ 42ನೇ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ಎದುರು ಹಾಜರಾಗಲಿದ್ದಾರೆ ಮೂಲಗಳು ತಿಳಿಸಿವೆ. ಇದನ್ನೂ ಓದಿ: ಸನಾತನ ಧರ್ಮದ ಬಗ್ಗೆ ಮಾತನಾಡಿದ್ದಕ್ಕೆ ಚಿಕ್ಕ ಮಗುವನ್ನ ಬೇಟೆಯಾಡ್ತಿದ್ದಾರೆ; ಉದಯನಿಧಿ ಸ್ಟಾಲಿನ್ ಬೆಂಬಲಿಸಿದ ಕಮಲ್
- Advertisement -
- Advertisement -
ಬೆಂಗಳೂರಿನ ಪರಮೇಶ್ ಎಂಬುವವರು ಉದಯನಿಧಿ ಹೇಳಿಕೆ ವಿರುದ್ಧ ಖಾಸಗಿ ದೂರು ಸಲ್ಲಿಸಿದ್ದರು. ಈ ಸಂಬಂಧ ವಿಚಾರಣೆ ನಡೆಸಿದ್ದ 42ನೇ ಎಸಿಎಂಎಂ ಕೋರ್ಟ್ ನ್ಯಾಯಾಧೀಶರಾದ ಜೆ. ಪ್ರೀತ್ ಅವರಿದ್ದ ಪೀಠ 5 ತಿಂಗಳ ಹಿಂದೆ ಸಮನ್ಸ್ ಜಾರಿಗೊಳಿಸಿತ್ತು.
- Advertisement -
ಏನಿದು ಪ್ರಕರಣ?
2023ರ ಸೆಪ್ಟೆಂಬರ್ 3 ರಂದು ಕಾರ್ಯಕ್ರಮವೊಂದರಲ್ಲಿ ಮಾತನಾಡುತ್ತಾ, ಸನಾತನನ ಧರ್ಮವು ಡೆಂಗ್ಯೂ, ಮಲೇರಿಯಾ ಇದ್ದಂತೆ. ಅದನ್ನು ನಿರ್ಮೂಲನೆ ಮಾಡಬೇಕೇ ಹೊರತು, ವಿರೋಧಿಸಬಾರದು ಎಂದು ಉದಯನಿಧಿ ಸ್ಟಾಲಿನ್ ವಿವಾದಾತ್ಮಕ ಹೇಳಿಕೆ ನೀಡಿದ್ದರು. ಇದನ್ನೂ ಓದಿ: ಸನಾತನ ಧರ್ಮದ ಬಗ್ಗೆ ವಿವಾದಾತ್ಮಕ ಹೇಳಿಕೆ – ಉದಯನಿಧಿ ಸ್ಟಾಲಿನ್ಗೆ ಹೈಕೋರ್ಟ್ ರಿಲೀಫ್
- Advertisement -
ಸನಾತನ ಧರ್ಮದ ನಿರ್ಮೂಲನೆ ಆಗಬೇಕು. ಅದು ಸಾಮಾಜಿಕ ನ್ಯಾಯ ಮತ್ತು ಸಮಾನತೆಗೆ ವಿರುದ್ಧವಾಗಿದೆ ಎಂದು ಕರೆ ನೀಡಿದ್ದರು. “ಕೆಲವು ವಿಷಯಗಳನ್ನು ವಿರೋಧಿಸಲು ಸಾಧ್ಯವಿಲ್ಲ. ಅದನ್ನು ನಿರ್ಮೂಲನೆ ಮಾಡಬೇಕು. ನಾವು ಡೆಂಗ್ಯೂ, ಸೊಳ್ಳೆಗಳು, ಮಲೇರಿಯಾ ಅಥವಾ ಕೊರೊನಾ ವೈರಸ್ ಅನ್ನು ವಿರೋಧಿಸಲು ಸಾಧ್ಯವಿಲ್ಲ. ಇದನ್ನು ನಿರ್ಮೂಲನೆ ಮಾಡಬೇಕು. ಅದೇ ರೀತಿ ಸನಾತನವನ್ನು ನಿರ್ಮೂಲನೆ ಮಾಡಬೇಕು ಎಂದು ಕರೆ ಕೊಟ್ಟಿದ್ದರು. ಈ ಸಂಬಂಧ ದೇಶಾದ್ಯಂತ ಪ್ರತಿಪಕ್ಷ ನಾಯಕರಿಂದ ವಿರೋಧ ವ್ಯಕ್ತವಾಗಿತ್ತು. ಇದರ ಹೊರತಾಗಿಯೂ ಉದಯನಿಧಿ ಸ್ಟಾಲಿನ್ ತಮ್ಮ ಹೇಳಿಕೆಯನ್ನು ಸಮರ್ಥಿಸಿಕೊಂಡಿದ್ದರು.