Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ರಾಜ್ಯದ ಮೂರು ಜಿಲ್ಲೆ ಹೊರತುಪಡಿಸಿ ಎಲ್ಲ ಕಡೆ ಎಣ್ಣೆ ಸಿಗುತ್ತೆ- ಆದ್ರೆ ಷರತ್ತು ಅನ್ವಯ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Corona | ರಾಜ್ಯದ ಮೂರು ಜಿಲ್ಲೆ ಹೊರತುಪಡಿಸಿ ಎಲ್ಲ ಕಡೆ ಎಣ್ಣೆ ಸಿಗುತ್ತೆ- ಆದ್ರೆ ಷರತ್ತು ಅನ್ವಯ

Corona

ರಾಜ್ಯದ ಮೂರು ಜಿಲ್ಲೆ ಹೊರತುಪಡಿಸಿ ಎಲ್ಲ ಕಡೆ ಎಣ್ಣೆ ಸಿಗುತ್ತೆ- ಆದ್ರೆ ಷರತ್ತು ಅನ್ವಯ

Public TV
Last updated: May 1, 2020 8:17 pm
Public TV
Share
3 Min Read
Liquor Shops 2 copy
SHARE

ನವದೆಹಲಿ: ಹಸಿರು, ಕಿತ್ತಳೆ ವಲಯದ ಜಿಲ್ಲೆಯಲ್ಲಿರುವ ಮದ್ಯಪ್ರಿಯರಿಗೆ ಗುಡ್‍ನ್ಯೂಸ್. ಕೊರೊನಾ ಲಾಕ್‍ಡೌನ್‍ನಿಂದ ಕಂಗೆಟ್ಟಿದ್ದ ಮದ್ಯಪ್ರಿಯರಿಗೆ ಮೇ 4 ರಿಂದ ಎಣ್ಣೆ ಸಿಗಲಿದೆ.

ಕೇಂದ್ರ ಸರ್ಕಾರ ಮತ್ತೆ ಮೂರು ವಾರಗಳ ಕಾಲ ಲಾಕ್‍ಡೌನ್ ವಿಸ್ತರಿಸಿದ್ದು, ಮೇ 17ರವರೆಗೆ ಲಾಕ್‍ಡೌನ್ ಮುಂದುವರಿಯಲಿದೆ. ಈ ಅವಧಿಯಲ್ಲಿ ಕಿತ್ತಾಳೆ, ಹಸಿರು ವಲಯದ ಜಿಲ್ಲೆಗಳಲ್ಲಿ ಮದ್ಯ ಮಾರಾಟದ ಜೊತೆ ಪಾನ್ ಅಂಗಡಿ ತೆರೆಯಲು ಅನುಮತಿ ನೀಡಿದೆ.

Liquor Shops 7 copy

ಮದ್ಯ ಮಾರಾಟಕ್ಕೆ ಅನುಮತಿ ಸಿಕ್ಕಿದರೂ ಷರತ್ತು ವಿಧಿಸಿದೆ. ಅಂಗಡಿಯಲ್ಲಿ ಕುಡಿಯುವಂತಿಲ್ಲ. ಪಾರ್ಸೆಲ್ ಗೆ ಮಾತ್ರ ಅನುಮತಿ. ಅಂಗಡಿಗಳಲ್ಲಿ ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕು. ಒಂದು ಬಾರಿ 5 ಜನ ಅಂಗಡಿಯ ಮುಂದೆ ನಿಲ್ಲಬಹುದು. ವ್ಯಕ್ತಿಗಳು ಕನಿಷ್ಟ 6 ಅಡಿ ಅಂತರದಲ್ಲಿ ನಿಲ್ಲಬೇಕು ಎಂದು ಷರತ್ತು ವಿಧಿಸಿದೆ. ಹಸಿರು ವಲಯಲ್ಲಿ ಮಾತ್ರ ಅನುಮತಿ ನೀಡಿದ್ದು, ಕೆಂಪು ವಲಯ ಮತ್ತು ಕಿತ್ತಳೆ ವಲಯದಲ್ಲಿ ಮದ್ಯ ಮಾರಾಟಕ್ಕೆ ಅನುಮತಿ ನೀಡಿಲ್ಲ. ಕರ್ನಾಟಕದ ಕೆಂಪು ವಲಯದ ಜಿಲ್ಲೆಗಳಾದ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ ಮತ್ತು ಮೈಸೂರಿನಲ್ಲಿ ಮದ್ಯ ಮಾರಾಟಕ್ಕೆ ಅನುಮತಿ ಸಿಕ್ಕಿಲ್ಲ.

Liquor stores & paan shops will be allowed to function in green zones while ensuring minimum six feet distance (2 gaz ki doori) from each other & ensuring that not more 5 persons are present at one time at the shop: MHA on the extension of #lockdown for two weeks from May 4

— ANI (@ANI) May 1, 2020

ಕೇಂದ್ರ ಸರ್ಕಾರ ಕೊರೊನಾ ಪೀಡಿತ ಜಿಲ್ಲೆಗಳ ವಲಯವಾರು ಪಟ್ಟಿಯನ್ನು ಇಂದು ಪರಿಷ್ಕರಿಸಿದೆ. ಕಿತ್ತಳೆ ವಲಯದಲ್ಲಿದ್ದ ಜಿಲ್ಲೆಗಳನ್ನು ಹಸಿರು ವಲಯಕ್ಕೂ, ಕೆಂಪು ವಲಯದಲ್ಲಿದ್ದ ಜಿಲ್ಲೆಗಳು ಕಿತ್ತಳೆ ವಲಯದಲ್ಲಿ ಸ್ಥಾನ ಪಡೆದಿದೆ. ಈ ಮೊದಲು ಕೊರೊನಾ ಪ್ರಕರಣ ದಾಖಲಾಗದ ಜಿಲ್ಲೆಗಳು ಹಸಿರು ವಲಯದಲ್ಲೂ, ಕಡಿಮೆ ಪ್ರಕರಣ ದಾಖಲಾದ ಜಿಲ್ಲೆಗಳು ಕಿತ್ತಳೆ ವಲಯಕ್ಕೂ, ಅತಿ ಹೆಚ್ಚು ಪ್ರಕರಣ ದಾಖಲಾದ ಜಿಲ್ಲೆಗಳು ಕೆಂಪು ವಲಯದಲ್ಲಿ ಸ್ಥಾನ ಪಡೆಯುತ್ತಿತ್ತು.

rcr no liquor sale 1

14 ದಿನಗಳಿಂದ ಯಾವುದೇ ಪ್ರಕರಣ ಬೆಳಕಿಗೆ ಬಾರದೇ ಇದ್ದಲ್ಲಿ ಕಿತ್ತಳೆ ವಲಯದಲ್ಲಿದ್ದ ಜಿಲ್ಲೆ ಹಸಿರು ಜಿಲ್ಲೆಯಾಗುತ್ತಿತ್ತು. ಕೆಂಪು ವಲಯಲ್ಲಿದ್ದ ಜಿಲ್ಲೆಯಲ್ಲಿ 14 ದಿನಗಳ ಕಾಲ ಕೊರೊನಾ ಬಾರದೇ ಇದ್ದಲ್ಲಿ ಕಿತ್ತಳೆ ವಲಯದಲ್ಲಿ, ಬಳಿಕ 14 ದಿನಗಳ ಕಾಲ ಯಾವುದೇ ಪ್ರಕರಣ ಬಾರದೇ ಇದ್ದಲ್ಲಿ ಹಸಿರು ವಲಯದಲ್ಲಿ ಸ್ಥಾನ ಪಡೆಯುತ್ತಿತ್ತು.

delhi lockdown

ಹೊಸ ಮಾನದಂಡ ಏನು?
ಈ ಮೊದಲು ಪ್ರಕರಣಗಳು ದ್ವಿಗುಣವಾಗುವುದರ ಮೇಲೆ ಕೆಂಪು, ಕಿತ್ತಳೆ, ಹಸಿರು ವಲಯಗಳನ್ನು ಪ್ರಕಟಿಸಲಾಗುತ್ತಿತ್ತು. ಈಗ ಗುಣಮುಖರಾಗುತ್ತಿರುವ ಸೋಂಕಿತರ ಸಂಖ್ಯೆ ಹಿನ್ನೆಲೆಯಲ್ಲಿ ಪರಿಷ್ಕರಣೆಗೊಳಿಸಲಾಗಿದೆ. ಹೊಸದಾಗಿ ಎಷ್ಟು ಪ್ರಕರಣಗಳು ದಾಖಲಾಗುತ್ತಿದೆ? ಎಷ್ಟು ದಿನಕ್ಕೆ ಪ್ರಕರಣ ದ್ವಿಗುಣವಾಗುತ್ತಿದೆ? ಎಷ್ಟು ರೋಗಿಗಳು ಗುಣಮುಖರಾಗುತ್ತಿದ್ದಾರೆ? ಎಷ್ಟು ಪರೀಕ್ಷೆ ನಡೆಯುತ್ತಿದೆ? ಪ್ರಸ್ತುತ ಜಿಲ್ಲೆಯಲ್ಲಿ ಕೋವಿಡ್ -19 ನಿಯಂತ್ರಣಕ್ಕೆ ಕೈಗೊಂಡ ಕ್ರಮ ಹೇಗಿದೆ? ಈ ಮಾನದಂಡಗಳನ್ನು ಆಧಾರಿಸಿ ಪರಿಷ್ಕೃತ ಜಿಲ್ಲೆಗಳ ವಲಯವಾರು ಪಟ್ಟಿಯನ್ನು ಬಿಡುಗಡೆ ಮಾಡಲಾಗಿದೆ ಎಂದು ಕೇಂದ್ರ ಆರೋಗ್ಯ ಇಲಾಖೆಯ ಕಾರ್ಯದರ್ಶಿ ಪ್ರೀತಿ ಸುದನ್ ಎಲ್ಲ ರಾಜ್ಯಗಳ ಕಾರ್ಯದರ್ಶಿಗಳಿಗೆ ಪತ್ರ ಬರೆದು ತಿಳಿಸಿದ್ದಾರೆ.

Liquor Shops 1 copy

ಪ್ರತಿ ವಾರಕ್ಕೊಮ್ಮೆ ಈ ಪಟ್ಟಿ ಬದಲಾಗುತ್ತದೆ. ಪ್ರಸ್ತುತ ದೇಶದಲ್ಲಿ 130 ಕೆಂಪು ವಲಯ, 284 ಕಿತ್ತಳೆ, 319 ಜಿಲ್ಲೆಗಳು ಹಸಿರು ವಲಯದಲ್ಲಿ ಸ್ಥಾನ ಪಡೆದಿದೆ. ಪರಿಷ್ಕರಣೆಯಿಂದಾಗಿ ಕರ್ನಾಟಕದಲ್ಲಿ 3 ಜಿಲ್ಲೆಗಳು ಕೆಂಪು ವಲಯದಲ್ಲಿ, 13 ಜಿಲ್ಲೆಗಳು ಕಿತ್ತಳೆ ವಲಯದಲ್ಲಿ, 14 ಜಿಲ್ಲೆಗಳು ಹಸಿರು ವಲಯದಲ್ಲಿ ಸ್ಥಾನ ಪಡೆದಿದೆ. ದಕ್ಷಿಣ ಕನ್ನಡ, ಬೆಳಗಾವಿ, ಕಲಬುರಗಿ, ಚಿಕ್ಕಬಳ್ಳಾಪುರವನ್ನು ಕೆಂಪು ವಲಯದಿಂದ ಕೈಬಿಟ್ಟಿದೆ.

ಯಾವ ಜಿಲ್ಲೆ ಯಾವ ವಲಯದಲ್ಲಿದೆ?
ಕೆಂಪು ವಲಯ: ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಮೈಸೂರು

ಕಿತ್ತಳೆ ವಲಯ: ಬೆಳಗಾವಿ, ವಿಜಯಪುರ, ಕಲಬುರಗಿ, ಬಾಗಲಕೋಟೆ, ಮಂಡ್ಯ, ಬಳ್ಳಾರಿ, ಧಾರವಾಡ, ದಕ್ಷಿಣ ಕನ್ನಡ, ಬೀದರ್, ಚಿಕ್ಕಬಳ್ಳಾಪುರ, ಗದಗ್, ಉತ್ತರ ಕನ್ನಡ, ತುಮಕೂರು.

LOCKDOWN 22

ಹಸಿರು ವಲಯ: ದಾವಣಗೆರೆ, ಉಡುಪಿ, ಚಾಮರಾಜನಗರ, ಚಿಕ್ಕಮಗಳೂರು, ಚಿತ್ರದುರ್ಗ, ಹಾಸನ, ಹಾವೇರಿ, ಕೊಡಗು, ಕೋಲಾರ, ಕೊಪ್ಪಳ, ರಾಯಚೂರು, ಶಿವಮೊಗ್ಗ, ರಾಮನಗರ, ಯಾದಗಿರಿ.

TAGGED:alcoholCoronaCorona VirusCovid 19karnatakaಕರ್ನಾಟಕಕೊರೊನಾಕೊರೊನಾ ವೈರಸ್ಕೋವಿಡ್ 19ಮದ್ಯ
Share This Article
Facebook Whatsapp Whatsapp Telegram

Cinema news

Ranbir Kapoor Yash Sai Pallavi
ಟೀಸರ್‌ ರಿಲೀಸ್‌ ಬೆನ್ನಲ್ಲೇ ‘ರಾಮಾಯಣ’ ನಟರ ಸಂಭಾವನೆ ಬಹಿರಂಗ – ರಣಬೀರ್‌ಗೆ 150 ಕೋಟಿ, ಯಶ್‌ಗೆ ಎಷ್ಟು?
Bollywood Cinema Latest Top Stories
Parliament House witnessed Azad Bharat screening in honor of Netaji Subhas Chandra Bose 1
ನೇತಾಜಿ ಗೌರವಾರ್ಥ ಆಜಾದ್ ಭಾರತ್ ಚಿತ್ರ ಪ್ರದರ್ಶನಕ್ಕೆ ಸಂಸತ್ ಭವನ ಸಾಕ್ಷಿ
Cinema Latest National Top Stories
Ramayana
`ರಾಮಾಯಣ’ ಟೀಸರ್ ರಿಲೀಸ್ – ಮರ್ಯಾದಾ ಪುರುಷೋತ್ತಮನ ಗೆಟಪ್‌ನಲ್ಲಿ ಕಂಗೊಳಿಸಿದ ರಣಬೀರ್
Bollywood Cinema Latest Top Stories
Malayalam director Ranjith
ನಟಿ ಮೇಲೆ ಲೈಂಗಿಕ ದೌರ್ಜನ್ಯ ಆರೋಪ – ಮಲಯಾಳಂ ನಿರ್ದೇಶಕ ರಂಜಿತ್ ಅರೆಸ್ಟ್
Cinema Latest Main Post National South cinema

You Might Also Like

Punjab Kings
Cricket

ತವರಲ್ಲಿ ಚೊಚ್ಚಲ ಗೆಲುವಿನ ನಿರೀಕ್ಷೆಯಲ್ಲಿದ್ದ ಚೆನ್ನೈಗೆ ಮುಖಭಂಗ – ಪಂಜಾಬ್‌ಗೆ 5 ವಿಕೆಟ್‌ಗಳ ಜಯ

Public TV
By Public TV
1 hour ago
HE x TIaUAE4IKr
Bengaluru City

ಬೆಂಗಳೂರಿಗೆ ಕೇಂದ್ರ ಗೃಹ ಸಚಿವ ಅಮಿತ್‌ ಶಾ ಆಗಮನ

Public TV
By Public TV
2 hours ago
Earthquake
Latest

ಅಫ್ಘಾನಿಸ್ತಾನದಲ್ಲಿ 5.9 ತೀವ್ರತೆಯ ಭೂಕಂಪ; ದೆಹಲಿ-ಎನ್‌ಸಿಆರ್‌ನಲ್ಲೂ ಕಂಪನದ ಅನುಭವ

Public TV
By Public TV
2 hours ago
AI Image
Latest

ಅಮೆರಿಕದ ಎಫ್-35 ಸೇರಿ ಜೆಟ್, ಕಾಪ್ಟರ್ ಉಡೀಸ್ – ಓರ್ವ ಪೈಲಟ್ ಸೆರೆ ಅಂತಿದೆ ಇರಾನ್

Public TV
By Public TV
2 hours ago
Shwetha
Crime

ಅತ್ತೆ, ಮಾವನ ಕಿರುಕುಳಕ್ಕೆ ಬೇಸತ್ತು ಗರ್ಭಿಣಿ ನರ್ಸ್‌ ಆತ್ಮಹತ್ಯೆ – ನಾಲ್ವರು ಅರೆಸ್ಟ್‌

Public TV
By Public TV
3 hours ago
CRIME
Crime

ನೀರು ಕೇಳುವ ನೆಪದಲ್ಲಿ ಮನೆಗೆ ನುಗ್ಗಿ ಚಾಕು ತೋರಿಸಿ ಮಹಿಳೆಯ ಅತ್ಯಾಚಾರ

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?