Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Corona

ರಾಜ್ಯದ ಮೂರು ಜಿಲ್ಲೆ ಹೊರತುಪಡಿಸಿ ಎಲ್ಲ ಕಡೆ ಎಣ್ಣೆ ಸಿಗುತ್ತೆ- ಆದ್ರೆ ಷರತ್ತು ಅನ್ವಯ

Public TV
Last updated: May 1, 2020 8:17 pm
Public TV
Share
3 Min Read
Liquor Shops 2 copy
SHARE

ನವದೆಹಲಿ: ಹಸಿರು, ಕಿತ್ತಳೆ ವಲಯದ ಜಿಲ್ಲೆಯಲ್ಲಿರುವ ಮದ್ಯಪ್ರಿಯರಿಗೆ ಗುಡ್‍ನ್ಯೂಸ್. ಕೊರೊನಾ ಲಾಕ್‍ಡೌನ್‍ನಿಂದ ಕಂಗೆಟ್ಟಿದ್ದ ಮದ್ಯಪ್ರಿಯರಿಗೆ ಮೇ 4 ರಿಂದ ಎಣ್ಣೆ ಸಿಗಲಿದೆ.

ಕೇಂದ್ರ ಸರ್ಕಾರ ಮತ್ತೆ ಮೂರು ವಾರಗಳ ಕಾಲ ಲಾಕ್‍ಡೌನ್ ವಿಸ್ತರಿಸಿದ್ದು, ಮೇ 17ರವರೆಗೆ ಲಾಕ್‍ಡೌನ್ ಮುಂದುವರಿಯಲಿದೆ. ಈ ಅವಧಿಯಲ್ಲಿ ಕಿತ್ತಾಳೆ, ಹಸಿರು ವಲಯದ ಜಿಲ್ಲೆಗಳಲ್ಲಿ ಮದ್ಯ ಮಾರಾಟದ ಜೊತೆ ಪಾನ್ ಅಂಗಡಿ ತೆರೆಯಲು ಅನುಮತಿ ನೀಡಿದೆ.

Liquor Shops 7 copy

ಮದ್ಯ ಮಾರಾಟಕ್ಕೆ ಅನುಮತಿ ಸಿಕ್ಕಿದರೂ ಷರತ್ತು ವಿಧಿಸಿದೆ. ಅಂಗಡಿಯಲ್ಲಿ ಕುಡಿಯುವಂತಿಲ್ಲ. ಪಾರ್ಸೆಲ್ ಗೆ ಮಾತ್ರ ಅನುಮತಿ. ಅಂಗಡಿಗಳಲ್ಲಿ ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕು. ಒಂದು ಬಾರಿ 5 ಜನ ಅಂಗಡಿಯ ಮುಂದೆ ನಿಲ್ಲಬಹುದು. ವ್ಯಕ್ತಿಗಳು ಕನಿಷ್ಟ 6 ಅಡಿ ಅಂತರದಲ್ಲಿ ನಿಲ್ಲಬೇಕು ಎಂದು ಷರತ್ತು ವಿಧಿಸಿದೆ. ಹಸಿರು ವಲಯಲ್ಲಿ ಮಾತ್ರ ಅನುಮತಿ ನೀಡಿದ್ದು, ಕೆಂಪು ವಲಯ ಮತ್ತು ಕಿತ್ತಳೆ ವಲಯದಲ್ಲಿ ಮದ್ಯ ಮಾರಾಟಕ್ಕೆ ಅನುಮತಿ ನೀಡಿಲ್ಲ. ಕರ್ನಾಟಕದ ಕೆಂಪು ವಲಯದ ಜಿಲ್ಲೆಗಳಾದ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ ಮತ್ತು ಮೈಸೂರಿನಲ್ಲಿ ಮದ್ಯ ಮಾರಾಟಕ್ಕೆ ಅನುಮತಿ ಸಿಕ್ಕಿಲ್ಲ.

Liquor stores & paan shops will be allowed to function in green zones while ensuring minimum six feet distance (2 gaz ki doori) from each other & ensuring that not more 5 persons are present at one time at the shop: MHA on the extension of #lockdown for two weeks from May 4

— ANI (@ANI) May 1, 2020

ಕೇಂದ್ರ ಸರ್ಕಾರ ಕೊರೊನಾ ಪೀಡಿತ ಜಿಲ್ಲೆಗಳ ವಲಯವಾರು ಪಟ್ಟಿಯನ್ನು ಇಂದು ಪರಿಷ್ಕರಿಸಿದೆ. ಕಿತ್ತಳೆ ವಲಯದಲ್ಲಿದ್ದ ಜಿಲ್ಲೆಗಳನ್ನು ಹಸಿರು ವಲಯಕ್ಕೂ, ಕೆಂಪು ವಲಯದಲ್ಲಿದ್ದ ಜಿಲ್ಲೆಗಳು ಕಿತ್ತಳೆ ವಲಯದಲ್ಲಿ ಸ್ಥಾನ ಪಡೆದಿದೆ. ಈ ಮೊದಲು ಕೊರೊನಾ ಪ್ರಕರಣ ದಾಖಲಾಗದ ಜಿಲ್ಲೆಗಳು ಹಸಿರು ವಲಯದಲ್ಲೂ, ಕಡಿಮೆ ಪ್ರಕರಣ ದಾಖಲಾದ ಜಿಲ್ಲೆಗಳು ಕಿತ್ತಳೆ ವಲಯಕ್ಕೂ, ಅತಿ ಹೆಚ್ಚು ಪ್ರಕರಣ ದಾಖಲಾದ ಜಿಲ್ಲೆಗಳು ಕೆಂಪು ವಲಯದಲ್ಲಿ ಸ್ಥಾನ ಪಡೆಯುತ್ತಿತ್ತು.

rcr no liquor sale 1

14 ದಿನಗಳಿಂದ ಯಾವುದೇ ಪ್ರಕರಣ ಬೆಳಕಿಗೆ ಬಾರದೇ ಇದ್ದಲ್ಲಿ ಕಿತ್ತಳೆ ವಲಯದಲ್ಲಿದ್ದ ಜಿಲ್ಲೆ ಹಸಿರು ಜಿಲ್ಲೆಯಾಗುತ್ತಿತ್ತು. ಕೆಂಪು ವಲಯಲ್ಲಿದ್ದ ಜಿಲ್ಲೆಯಲ್ಲಿ 14 ದಿನಗಳ ಕಾಲ ಕೊರೊನಾ ಬಾರದೇ ಇದ್ದಲ್ಲಿ ಕಿತ್ತಳೆ ವಲಯದಲ್ಲಿ, ಬಳಿಕ 14 ದಿನಗಳ ಕಾಲ ಯಾವುದೇ ಪ್ರಕರಣ ಬಾರದೇ ಇದ್ದಲ್ಲಿ ಹಸಿರು ವಲಯದಲ್ಲಿ ಸ್ಥಾನ ಪಡೆಯುತ್ತಿತ್ತು.

delhi lockdown

ಹೊಸ ಮಾನದಂಡ ಏನು?
ಈ ಮೊದಲು ಪ್ರಕರಣಗಳು ದ್ವಿಗುಣವಾಗುವುದರ ಮೇಲೆ ಕೆಂಪು, ಕಿತ್ತಳೆ, ಹಸಿರು ವಲಯಗಳನ್ನು ಪ್ರಕಟಿಸಲಾಗುತ್ತಿತ್ತು. ಈಗ ಗುಣಮುಖರಾಗುತ್ತಿರುವ ಸೋಂಕಿತರ ಸಂಖ್ಯೆ ಹಿನ್ನೆಲೆಯಲ್ಲಿ ಪರಿಷ್ಕರಣೆಗೊಳಿಸಲಾಗಿದೆ. ಹೊಸದಾಗಿ ಎಷ್ಟು ಪ್ರಕರಣಗಳು ದಾಖಲಾಗುತ್ತಿದೆ? ಎಷ್ಟು ದಿನಕ್ಕೆ ಪ್ರಕರಣ ದ್ವಿಗುಣವಾಗುತ್ತಿದೆ? ಎಷ್ಟು ರೋಗಿಗಳು ಗುಣಮುಖರಾಗುತ್ತಿದ್ದಾರೆ? ಎಷ್ಟು ಪರೀಕ್ಷೆ ನಡೆಯುತ್ತಿದೆ? ಪ್ರಸ್ತುತ ಜಿಲ್ಲೆಯಲ್ಲಿ ಕೋವಿಡ್ -19 ನಿಯಂತ್ರಣಕ್ಕೆ ಕೈಗೊಂಡ ಕ್ರಮ ಹೇಗಿದೆ? ಈ ಮಾನದಂಡಗಳನ್ನು ಆಧಾರಿಸಿ ಪರಿಷ್ಕೃತ ಜಿಲ್ಲೆಗಳ ವಲಯವಾರು ಪಟ್ಟಿಯನ್ನು ಬಿಡುಗಡೆ ಮಾಡಲಾಗಿದೆ ಎಂದು ಕೇಂದ್ರ ಆರೋಗ್ಯ ಇಲಾಖೆಯ ಕಾರ್ಯದರ್ಶಿ ಪ್ರೀತಿ ಸುದನ್ ಎಲ್ಲ ರಾಜ್ಯಗಳ ಕಾರ್ಯದರ್ಶಿಗಳಿಗೆ ಪತ್ರ ಬರೆದು ತಿಳಿಸಿದ್ದಾರೆ.

Liquor Shops 1 copy

ಪ್ರತಿ ವಾರಕ್ಕೊಮ್ಮೆ ಈ ಪಟ್ಟಿ ಬದಲಾಗುತ್ತದೆ. ಪ್ರಸ್ತುತ ದೇಶದಲ್ಲಿ 130 ಕೆಂಪು ವಲಯ, 284 ಕಿತ್ತಳೆ, 319 ಜಿಲ್ಲೆಗಳು ಹಸಿರು ವಲಯದಲ್ಲಿ ಸ್ಥಾನ ಪಡೆದಿದೆ. ಪರಿಷ್ಕರಣೆಯಿಂದಾಗಿ ಕರ್ನಾಟಕದಲ್ಲಿ 3 ಜಿಲ್ಲೆಗಳು ಕೆಂಪು ವಲಯದಲ್ಲಿ, 13 ಜಿಲ್ಲೆಗಳು ಕಿತ್ತಳೆ ವಲಯದಲ್ಲಿ, 14 ಜಿಲ್ಲೆಗಳು ಹಸಿರು ವಲಯದಲ್ಲಿ ಸ್ಥಾನ ಪಡೆದಿದೆ. ದಕ್ಷಿಣ ಕನ್ನಡ, ಬೆಳಗಾವಿ, ಕಲಬುರಗಿ, ಚಿಕ್ಕಬಳ್ಳಾಪುರವನ್ನು ಕೆಂಪು ವಲಯದಿಂದ ಕೈಬಿಟ್ಟಿದೆ.

ಯಾವ ಜಿಲ್ಲೆ ಯಾವ ವಲಯದಲ್ಲಿದೆ?
ಕೆಂಪು ವಲಯ: ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಮೈಸೂರು

ಕಿತ್ತಳೆ ವಲಯ: ಬೆಳಗಾವಿ, ವಿಜಯಪುರ, ಕಲಬುರಗಿ, ಬಾಗಲಕೋಟೆ, ಮಂಡ್ಯ, ಬಳ್ಳಾರಿ, ಧಾರವಾಡ, ದಕ್ಷಿಣ ಕನ್ನಡ, ಬೀದರ್, ಚಿಕ್ಕಬಳ್ಳಾಪುರ, ಗದಗ್, ಉತ್ತರ ಕನ್ನಡ, ತುಮಕೂರು.

LOCKDOWN 22

ಹಸಿರು ವಲಯ: ದಾವಣಗೆರೆ, ಉಡುಪಿ, ಚಾಮರಾಜನಗರ, ಚಿಕ್ಕಮಗಳೂರು, ಚಿತ್ರದುರ್ಗ, ಹಾಸನ, ಹಾವೇರಿ, ಕೊಡಗು, ಕೋಲಾರ, ಕೊಪ್ಪಳ, ರಾಯಚೂರು, ಶಿವಮೊಗ್ಗ, ರಾಮನಗರ, ಯಾದಗಿರಿ.

TAGGED:alcoholCoronaCorona VirusCovid 19karnatakaಕರ್ನಾಟಕಕೊರೊನಾಕೊರೊನಾ ವೈರಸ್ಕೋವಿಡ್ 19ಮದ್ಯ
Share This Article
Facebook Whatsapp Whatsapp Telegram
Leave a Comment

Leave a Reply

Your email address will not be published. Required fields are marked *

Cinema News

Ramya Prajwal Devaraj
ರಮ್ಯಾಗೆ ಅಶ್ಲೀಲ ಮೆಸೇಜ್ ಕೇಸ್: ಪ್ರಜ್ವಲ್ ಕಿಡಿ
Cinema Latest Sandalwood Top Stories
Ramya Case 2 arrested by ccb police
ನಟಿ ರಮ್ಯಾಗೆ ಅಶ್ಲೀಲ ಕಾಮೆಂಟ್ – ಸಿಸಿಬಿ ಪೊಲೀಸರಿಂದ ಇನ್ನಿಬ್ಬರು ಅರೆಸ್ಟ್
Cinema Latest Sandalwood Top Stories
Kantara 2 1
ಕಾಂತಾರದಲ್ಲಿ ಕಾಣಿಸಲಿದ್ದಾರೆ ಸೂಪರ್‌ಸ್ಟಾರ್!
Cinema Latest
Coolie 2
ಸೂಪರ್‌ಸ್ಟಾರ್ ರಜನಿಕಾಂತ್ ಕೂಲಿಗೆ ಭಾರಿ ಡಿಮ್ಯಾಂಡ್
Bollywood Cinema Latest South cinema Top Stories
dulquer salmaan dq41
ದುಲ್ಕರ್ ಸಲ್ಮಾನ್ ಹೊಸ ಚಿತ್ರಕ್ಕೆ ಚಾಲನೆ : ನಟ ನಾನಿ ಸಾಥ್
Cinema Latest Top Stories

You Might Also Like

team india
Cricket

1 ಜಯ, 12 ಅಂಕ ಪಡೆದು ಮೂರನೇ ಸ್ಥಾನಕ್ಕೆ ಭಾರತ ಹೈಜಂಪ್‌!

Public TV
By Public TV
6 hours ago
Narendra Modi Donald Trump
Latest

ನೀವು ರಷ್ಯಾದಿಂದ ಆಮದು ಮಾಡಬಹುದು, ನಾವು ಮಾಡಿದ್ರೆ ಯುದ್ಧಕ್ಕೆ ಫಂಡಿಂಗ್‌ ಹೇಗೆ: ಟ್ರಂಪ್‌ಗೆ ಭಾರತದ ಗುದ್ದು

Public TV
By Public TV
7 hours ago
Kolar Rain
Bidar

ಕೋಲಾರ ಜಿಲ್ಲೆಯಾದ್ಯಂತ ಉತ್ತಮ ಮಳೆ – ರೈತರ ಮೊಗದಲ್ಲಿ ಮಂದಹಾಸ

Public TV
By Public TV
7 hours ago
Yadagiri Arrest
Districts

11 ಲಕ್ಷದ ಚಿನ್ನ ಕದ್ದು ಪರಾರಿ – ನಾಲ್ಕು ಕೇಸ್‌ಲ್ಲಿ ಭಾಗಿಯಾಗಿದ್ದ ಕತರ್ನಾಕ್ ಕಳ್ಳ ಅರೆಸ್ಟ್

Public TV
By Public TV
7 hours ago
mahadevappa
Bengaluru City

ಟಿಪ್ಪು ಡ್ಯಾಂ ಕಟ್ಟಿದ್ದ ಅಂತ ನಾನು ಎಲ್ಲಿಯೂ ಕೂಡ ಹೇಳಿಲ್ಲ – ಮಹದೇವಪ್ಪ ಯೂಟರ್ನ್

Public TV
By Public TV
7 hours ago
Prahlad Joshi 1
Latest

ಮೈಸೂರು ಮಹಾರಾಜರ ಕೊಡುಗೆಗೆ ಕಾಂಗ್ರೆಸ್ ಅಪಸ್ವರ – ಮಹದೇವಪ್ಪ ಮೊದ್ಲು ಇತಿಹಾಸ ಅರಿಯಲಿ: ಜೋಶಿ ಕಿಡಿ

Public TV
By Public TV
8 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?