– ತುಮಕೂರಿನ ವ್ಯಕ್ತಿಗೆ ಯಶಸ್ವಿ ಹೃದಯ ಕಸಿ ಶಸ್ತ್ರಚಿಕಿತ್ಸೆ
ಬೆಂಗಳೂರು: ರಸ್ತೆ ಅಪಘಾತದಲ್ಲಿ ಮೆದುಳು ನಿಷ್ಕ್ರಿಯಗೊಂಡಿದ್ದ ಯುವಕನ ಹೃದಯವನ್ನು ಯಶಸ್ವಿಯಾಗಿ ಗ್ರೀನ್ ಕಾರಿಡಾರ್ ಮೂಲಕ ಮೈಸೂರಿನ ಅಪೋಲೋ ಆಸ್ಪತ್ರೆಯಿಂದ ಬೊಮ್ಮಸಂದ್ರದ ನಾರಾಯಣ ಹೃದಯಾಲಯ ಆಸ್ಪತ್ರೆಗೆ ಜೀವಂತ ಹೃದಯನ್ನು ಯಶಸ್ವಿಯಾಗಿ ರವಾನೆ ಮಾಡಲಾಗಿದೆ.
ಕಳೆದ ತಿಂಗಳು 9ರಂದು ಪಿರಿಯಾಪಟ್ಟಣದ ಕೊಪ್ಪ ಬಳಿ ಯುವಕ ಮದನ್ ರಾಜ್ (22)ಗೆ ರಸ್ತೆ ಅಪಘಾತದಲ್ಲಿ ಮೆದುಳು ನಿಷ್ಕ್ರಿಯಗೊಂಡಿತ್ತು. ಬಳಿಕ ಯುವಕನ ಕುಟುಂಬಸ್ಥರು ಅಂಗಾಂಗಗಳನ್ನು ದಾನ ಮಾಡಲು ನಿರ್ಧರಿಸಿದ್ದರು.
ಬೊಮ್ಮಸಂದ್ರ ಬಳಿಯ ನಾರಾಯಣ ಹೃದಯಾಲಯದಲ್ಲಿ ತುಮಕೂರು ಮೂಲದ ನವೀನ್ (39) ಎಂಬವರು ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದರು. ಇಂದು ಮೈಸೂರಿನ ಅಪೋಲೋ ಆಸ್ಪತ್ರೆಯಿಂದ ಹೊರಟು 2 ಗಂಟೆ 18 ನಿಮಿಷದಲ್ಲಿ ನಾರಾಯಣ ಹೃದಯಾಲಯಕ್ಕೆ ಯಶಸ್ವಿಯಾಗಿ ಗ್ರೀನ್ ಕಾರಿಡಾರ್ ಮೂಲಕ ಜೀವಂತ ಹೃದಯ ರವಾನೆಯಾಗಿದೆ.
ಸದ್ಯ ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದ ನವೀನ್ ಅವರಿಗೆ ವೈದ್ಯರು ಯಶಸ್ವಿ ಹೃದಯ ಕಸಿ ಶಸ್ತ್ರಚಿಕಿತ್ಸೆ ಮಾಡಿದ್ದಾರೆ. ಪೊಲೀಸ್ ಇಲಾಖೆ ಸಹಭಾಗಿತ್ವದಲ್ಲಿ ಗ್ರೀನ್ ಕಾರಿಡಾರ್ ಮಾಡಲಾಗಿತ್ತು. ಪೊಲೀಸ್ ಭದ್ರತೆಯೊಂದಿಗೆ ಝೀರೋ ಟ್ರಾಫಿಕ್ ಮೂಲಕ ಜೀವಂತ ಹೃದಯವನ್ನು ರವಾನಿಸಲಾಗಿತ್ತು.