ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನಿಂದ ಜೀವಂತ ಹೃದಯ ರವಾನೆಯಾಗಿದೆ. ಮೈಸೂರಿನ ಅಪೋಲೋ ಆಸ್ಪತ್ರೆಯಿಂದ ಬೆಂಗಳೂರಿನ ನಾರಾಯಣ ಹೃದಯಾಲಯಕ್ಕೆ ಇಂದು ಹೃದಯ ರವಾನೆಯಾಯಿತು.
ಮದನ್ ರಾಜ್(22) ಅಂಗಾಂಗವನ್ನು ಪೋಷಕರು ದಾನ ಮಾಡಿದ್ದಾರೆ. ಕಳೆದ ತಿಂಗಳು 9ರಂದು ಪಿರಿಯಾಪಟ್ಟಣದ ಕೊಪ್ಪ ಬಳಿ ಮದನ್ಗೆ ಅಪಘಾತವಾಗಿತ್ತು. ಈ ಅಪಘಾತದ ಬಳಿಕ ಮದನ್ ಮೆದಳು ನಿಷ್ಕ್ರಿಯಗೊಂಡಿತ್ತು.
ಇಂದು ಕುಟುಂಬಸ್ಥರ ಒಪ್ಪಿಗೆ ಮೆರೆಗೆ ಹೃದಯ ಸೇರಿ ಹಲವು ಅಂಗಾಂಗಗಳ ದಾನ ಮಾಡಲಾಗಿದೆ. ಗ್ರೀನ್ ಕಾರಿಡಾರ್ ಮೂಲಕ ಹೃದಯವನ್ನು ಬೆಂಗಳೂರಿನ ನಾರಾಯಣ ಹೃದಯಾಲಯಕ್ಕೆ ರವಾನೆ ಮಾಡಲಾಯಿತು.
ಪೊಲೀಸ್ ಇಲಾಖೆ ಸಹಭಾಗಿತ್ವದಲ್ಲಿ ಗ್ರೀನ್ ಕಾರಿಡಾರ್ ಮಾಡಲಾಗಿತ್ತು. ಪೊಲೀಸ್ ಭದ್ರತೆಯೊಂದಿಗೆ ಝೀರೋ ಟ್ರಾಫಿಕ್ ಮೂಲಕ ಹೃದಯವನ್ನು ರವಾನಿಸಲಾಯಿತು.