ಬಾಗಲಕೋಟೆ: ಬಿಸಿಯೂಟ ಸೇವಿಸಿದ ಪರಿಣಾಮ 40 ವಿದ್ಯಾರ್ಥಿಗಳು ಅಸ್ವಸ್ಥರಾಗಿರುವ ಘಟನೆ ಜಿಲ್ಲೆಯ ಹುನಗುಂದ ತಾಲೂಕಿನ ಚಿಕ್ಕಮಾಗಿ ಗ್ರಾಮದಲ್ಲಿ ನಡೆದಿದೆ.
ಹಲ್ಲಿ ಬಿದ್ದ ಸಾಂಬಾರ್ ಸೇವಿಸಿದ್ದೇ ಅವಘಡಕ್ಕೆ ಪ್ರಮುಖ ಕಾರಣ ಎನ್ನುವ ಪ್ರಾಥಮಿಕ ಮಾಹಿತಿ ಲಭಿಸಿದೆ. ಶಾಲೆಯಲ್ಲಿ ಊಟ ಸೇವಿಸಿದ ಮಕ್ಕಳು ವಾಂತಿ, ಬೇಧಿಯಿಂದ ಸಂಕಟ ಪಟ್ಟು ನರಳಾಡುತ್ತಿದ್ದರು. ಇದನ್ನು ಕಂಡ ಶಾಲೆಯ ಶಿಕ್ಷಕರು ಕೂಡಲೇ ಖಾಸಗಿ ವಾಹನದ ಮೂಲಕ ಮಕ್ಕಳನ್ನು ಸ್ಥಳೀಯ ಕಮತಗಿ ಆಸ್ಪತ್ರೆಗೆ ದಾಖಲು ಮಾಡಿದ್ದಾರೆ.
ಮುನ್ನೆಚ್ಚರಿಕಾ ಕ್ರಮವಾಗಿ ಶಾಲೆಯ ಎಲ್ಲ ವಿದ್ಯಾರ್ಥಿಗಳನ್ನು ಆಸ್ಪತ್ರೆಗೆ ಕರೆತರಲಾಗುತ್ತಿದೆ. ಘಟನೆಗೆ ಶಾಲೆಯ ಅಡುಗೆ ಸಿಬ್ಬಂದಿ ನಿರ್ಲಕ್ಷ್ಯವೇ ಕಾರಣ ಎನ್ನುವುದು ಮೇಲ್ನೋಟಕ್ಕೆ ಕಂಡು ಬಂದಿದೆ.
ಶಾಲೆಯಲ್ಲಿ 190 ಮಕ್ಕಳು ವಿದ್ಯಾಭ್ಯಾಸ ಮಾಡುತ್ತಿದ್ದು ಮಧ್ಯಾಹ್ನ ಅನ್ನ, ಸಾಂಬಾರ್ ಸೇವಿಸಿದ್ದ 50 ಮಕ್ಕಳು ವಾಂತಿ ಮಾಡತೊಡಗಿದರು. ಈ ವೇಳೆ ಸಾಂಬಾರ್ ಪರಿಶೀಲನೆ ನಡೆಸಿದಾಗ ಸತ್ತ ಹಲ್ಲಿ ಕಂಡು ಬಂದಿದೆ.
ಸದ್ಯ ಆಸ್ಪತ್ರೆಗೆ ಜಿಲ್ಲಾ ವೈದ್ಯಾಧಿಕಾರಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಹೆಚ್ಚಿನ ಚಿಕಿತ್ಸೆ ಬೇಕಿರುವ ಮಕ್ಕಳನ್ನು ಅಂಬುಲೆನ್ಸ್ ಮೂಲಕ ಜಿಲ್ಲಾ ಆಸ್ಪತ್ರೆಗೆ ರವಾನೆ ಮಾಡಲಾಗುತ್ತಿದೆ ಎಂದು ತಿಳಿಸಿದ್ದಾರೆ.
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್ಲೋಡ್ ಮಾಡಿ: play.google.com/publictv