ಶಿವಮೊಗ್ಗ: ನಾಲ್ಕನೇ ತರಗತಿ ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ ಕಾಮುಕನನ್ನ ಸ್ಥಳೀಯರು ಹಿಡಿದು ಥಳಿಸಿ, ಪೊಲೀಸರಿಗೆ ಒಪ್ಪಿಸಿದ ಘಟನೆ ಶಿವಮೊಗ್ಗದ ಬೊಮ್ಮನಕಟ್ಟೆ ಬಡಾವಣೆಯಲ್ಲಿ ನಡೆದಿದೆ.
ಮೂಲತಃ ಉಡುಪಿ ಜಿಲ್ಲೆಯವನಾದ ಜಾಕೀರ್ ಅತ್ಯಾಚಾರಕ್ಕೆ ಯತ್ನಿಸಿ, ಥಳಿತಕ್ಕೆ ಒಳಗಾದ ಯುವಕ. ಬಾಲಕಿಯ ತಂದೆ ಕೆಲ ತಿಂಗಳ ಹಿಂದೆ ತೀರಿಕೊಂಡಿದ್ದರು. ತಾಯಿ ತಿಂಡಿ ಅಂಗಡಿ ನಡೆಸುತ್ತಿದ್ದರು. ತಾಯಿ-ಮಗಳು ಮಾತ್ರ ಇರುವುದನ್ನು ಗಮನಿಸಿದ್ದ ಈತ ಕಳೆದ ಮೂರು ದಿನಗಳಿಂದ ಆಕೆಯ ಬೆನ್ನು ಬಿದ್ದಿದ್ದ.
ಸೋಮವಾರ ರಾತ್ರಿ ಬಾಲಕಿಯನ್ನು ಹಿಡಿದು ಎಳೆದೊಯ್ಯಲು ಯತ್ನಿಸಿದಾಗ ಬಾಲಕಿ ಕೂಗಿಕೊಂಡಿದ್ದಾಳೆ. ಅಷ್ಟರಲ್ಲಿ ಸ್ಥಳೀಯರು ಬಂದು ಬಾಲಕಿಯನ್ನು ರಕ್ಷಿಸಿದ್ದಾರೆ. ಜಾಕೀರ್ ಗೆ ತೀವ್ರವಾಗಿ ಥಳಿಸಿದ ನಂತರ ಪೊಲೀಸರಿಗೆ ಒಪ್ಪಿಸಿದ್ದಾರೆ.
ಪೋಕ್ಸೋ ಕಾಯ್ದೆಯಡಿ ಜಾಕೀರ್ ನನ್ನು ಬಂಧಿಸಿರುವ ಪೊಲೀಸರು ಬಾಲಕಿಯನ್ನು ಮೆಗ್ಗಾನ್ ಆಸ್ಪತ್ರೆಯಲ್ಲಿ ವೈದ್ಯಕೀಯ ಚಿಕಿತ್ಸೆ ಗೆ ಒಳಪಡಿಸಿದ್ದಾರೆ.