ಬೆಂಗಳೂರು: ಹೆಣ್ಣೂರಿನ ಎಚ್ಬಿಆರ್ ಲೇಔಟ್ (HBR Lay Out) ಬಳಿ ಮಂಗಳವಾರ ಮೆಟ್ರೋ ಪಿಲ್ಲರ್ ಬಿದ್ದು (Namma Metro Pillar Collapse) ಎರಡು ಅಮಾಯಕ ಜೀವಗಳು ಹೋದ ಬೆನ್ನಲ್ಲೇ ಪೊಲೀಸ್ ಇಲಾಖೆಯಿಂದ ತಪ್ಪಿತಸ್ಥರಿಗೆ ಬುಲಾವ್ ನೀಡಲಾಗಿದೆ.
ಸಮನ್ಸ್ ಕೊಟ್ಟು ವಿಚಾರಣೆಗೆ ಹಾಜರಾಗುವಂತೆ ಪೊಲೀಸರು ಸೂಚಿಸಿದ್ದಾರೆ. ಮೃತ ತೇಜಸ್ವಿನಿ ಪತಿ ಲೋಹಿತ್ (Lohith) ಕೊಟ್ಟ ದೂರಿನ ಮೇಲೆ ಐವರ ಮೇಲೆ ಗೋವಿಂದಪುರ ಠಾಣೆ ಪೊಲೀಸರು (Govindapura Police Station) ಎಫ್ಐಆರ್ (FIR) ದಾಖಲಿಸಿದ್ದಾರೆ. ಇದನ್ನೂ ಓದಿ: ಪತ್ನಿ, ಮಗನ ಸಾವಿಗೆ ಕಾರಣರಾದವ್ರ ವಿರುದ್ಧ ಕ್ರಮಕ್ಕೆ ಲೋಹಿತ್ ದೂರು- ಎಫ್ಐಆರ್
ಎ1 ಆರೋಪಿ ಸೈಟ್ ಎಂಜಿನಿಯರ್, ಎ2 ಆರೋಪಿ ಮೆಟ್ರೋ ಗುತ್ತಿಗೆದಾರರು, ಎ3 ಆರೋಪಿ ಸೈಟ್ ಇನ್ಚಾರ್ಜ್ ಅಧಿಕಾರಿ, ಎ4 ಆರೋಪಿ ಬಿಎಂಆರ್ಸಿಎಲ್ ಅಧಿಕಾರಿಗಳು, ಎ5 ಇತರರ ಮೇಲೆ ಐಪಿಸಿ ಸೆಕ್ಷನ್ 336, 337, 304ಎ, 427, 34 ಅಡಿಯಲ್ಲಿ ಕೇಸ್ ದಾಖಲಾಗಿದೆ. ಸದ್ಯ ಎಲ್ಲಾ ಆರೋಪಿಗಳಿಗೂ ನೋಟಿಸ್ ಕೊಟ್ಟು ವಿಚಾರಣೆ ನಡೆಸಲು ಸಿದ್ಧತೆ ನಡೆಸಲಾಗಿದೆ. ಬಿಎಂಆರ್ಸಿಎಲ್ ಹಾಗೂ ಗುತ್ತಿಗೆದಾರರಿಂದ ನಡೆದಿರುವ ಕೊಲೆ ಎಂದು ಮೃತರ ಕುಟುಂಬ ಆಕ್ರೋಶ ಹೊರಹಾಕಿದೆ. ತಪ್ಪಿತಸ್ಥ ಅಧಿಕಾರಿಗಳ ಮೇಲೆ ಕ್ರಿಮಿನಲ್ ಕೇಸ್ ದಾಖಲಿಸಿ ಸಸ್ಪೆಂಡ್ ಮಾಡುವಂತೆ ಸಿಎಂ ಬಸವರಾಜ ಬೊಮ್ಮಾಯಿ (Basavarj Bommai) ಕೂಡ ಸೂಚನೆ ನೀಡಿದ್ದಾರೆ. ಇದನ್ನೂ ಓದಿ: ಡೆಡ್ಲಿ ಮೆಟ್ರೋಗೆ ಇಬ್ಬರು ಬಲಿ – ಪಿಲ್ಲರ್ ದುರಂತಕ್ಕೆ ಕಾರಣಗಳೇನು?
Live Tv
[brid partner=56869869 player=32851 video=960834 autoplay=true]
Join our Whatsapp group by clicking the below link
https://chat.whatsapp.com/E6YVEDajTzH06LOh77r25k