ಯುವಕರು ಏನಾದ್ರೂ ಮೋದಿ ಮೋದಿ ಅಂದ್ರೆ ಕಪಾಳಕ್ಕೆ ಹೊಡಿಯಬೇಕು: ಶಿವರಾಜ್‌ ತಂಗಡಗಿ

Public TV
1 Min Read
Shivaraj Tangadagi 1

ಕೊಪ್ಪಳ: ಪ್ರಧಾನಿ ನರೇಂದ್ರ ಮೋದಿ (PM Narendra Modi) ವಿರುದ್ಧ ವಾಗ್ದಾಳಿ ನಡೆಸುವ ಭರದಲ್ಲಿ ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ್ ತಂಗಡಗಿ (Shivraj Tangadagi) ನೀಡಿದ ಹೇಳಿಕೆ ಈಗ ಚರ್ಚೆಗೆ ಗ್ರಾಸವಾಗಿದೆ.

ಕಾರಟಗಿಯಲ್ಲಿ ನಡೆದ ಕಾಂಗ್ರೆಸ್ (Congress) ಅಭ್ಯರ್ಥಿ ರಾಜಶೇಖರ್ ಹಿಟ್ನಾಳ (Rajashekar Hitnal) ಪರ ಮತಯಾಚನೆ ಸಭೆಯಲ್ಲಿ ಮಾತನಾಡಿದ ಶಿವರಾಜ್ ತಂಗಡಗಿ, ಯುವಕರು ಏನಾದರೂ ಮೋದಿ ಮೋದಿ ಅಂದರೆ ಅವರ ಕಪಾಳಕ್ಕೆ ಬಾರಿಸಬೇಕು ಎಂದು ಕರೆ ನೀಡಿದ್ದಾರೆ. ಇದನ್ನೂ ಓದಿ: ಭಾರತದಲ್ಲೇ ಐಪಿಎಲ್‌ – ಪೂರ್ಣ ವೇಳಾಪಟ್ಟಿ ಪ್ರಕಟ, ಯಾವ ದಿನ ಯಾವ ಮ್ಯಾಚ್‌?

 

ಮೋದಿಯವರು ಕೇವಲ ಸುಳ್ಳು ಹೇಳುತ್ತಿದ್ದಾರೆ. ಇದುವರೆಗೂ ಯಾವುದೇ ಅಭಿವೃದ್ಧಿ ಕೆಲಸ ಮಾಡಿಲ್ಲ. ಯುವ ಜನರು ಉದ್ಯೋಗ ಕೇಳಿದರೆ ಪಕೋಡಾ ಮಾರಲು ಹೋಗಿ ಎನ್ನುತ್ತಾರೆ. ಈಗ ಮತ್ತೆ ಚುನಾವಣೆ ಬಂತು ಅಂತ ಬರುತ್ತಾರೆ. ಯುವಕರು ಮೋದಿ ಮೋದಿ ಅಂದರೆ ಅವರ ಕಪಾಳಕ್ಕೆ ಬಡಿಯಬೇಕು ಎಂದು ಹೇಳಿದ್ದಾರೆ. ಇದನ್ನೂ ಓದಿ: ಹಾಸನದಲ್ಲಿ ಯಾವುದೇ ಬಂಡಾಯ ಇಲ್ಲ, ಜನಾರ್ದನ ರೆಡ್ಡಿ ಪಕ್ಷ ಸೇರ್ಪಡೆ ಸ್ವಾಗತ ಮಾಡ್ತೀನಿ: ತೇಜಸ್ವಿಸೂರ್ಯ

Share This Article