ನಾನು ಆಕ್ಷೇಪಿಸಿದ್ದ ವಿಡಿಯೋಗೆ ಕತ್ತರಿ: ಮಂಡ್ಯ ಡಿಸಿ ವಿರುದ್ಧ ಗಂಭೀರ ಆರೋಪ

Public TV
1 Min Read
MND Madan kumar

ಬೆಂಗಳೂರು: ಕಾಂಗ್ರೆಸ್-ಜೆಡಿಎಸ್ ಮೈತ್ರಿ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ನಾಮಪತ್ರ ಪರಿಶೀಲನೆ ವೇಳೆ ಲಿಖಿತ ಆಕ್ಷೇಪಣೆ ಸಲ್ಲಿಸಿದ್ದೆ. ಆದರೆ ಜಿಲ್ಲಾಧಿಕಾರಿ ಮಂಜುಶ್ರೀ ಅವರು, ನೀವು ಯಾವುದೇ ಆಕ್ಷೇಪಣೆ ಪತ್ರ ನೀಡಿಲ್ಲ ಅಂತ ಹಿಂಬರಹ ನೀಡಿದ್ದಾರೆ ಎಂದು ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಶ್ ಚುನಾವಣಾ ಏಜೆಂಟ್ ಮದನ್ ಕುಮಾರ್ ಆರೋಪಿಸಿದ್ದಾರೆ.

ನಗರದಲ್ಲಿ ಇಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಆಕ್ಷೇಪ ಸಲ್ಲಿಸಿದ್ದಕ್ಕೆ ಸಂಜೆಯವರೆಗೂ ಜಿಲ್ಲಾಧಿಕಾರಿಗಳು ಉತ್ತರ ನೀಡಲಿಲ್ಲ. ಹೀಗಾಗಿ ಖುದ್ದಾಗಿ ನಾನೇ ಡಿಸಿ ಕಚೇರಿಗೆ ತೆರಳಿ ಮಾಹಿತಿ ಕೇಳಿದಾಗ ನಾಮಪತ್ರ ಅಂಗೀಕರಿಸಿದ್ದೇವೆ ಎಂದು ಚುನಾವಣಾಧಿಕಾರಿಗಳು ತಿಳಿಸಿದರು. ಇದರಿಂದಾಗಿ ನಾಮಪತ್ರ ಪರಿಶೀಲನೆಯ ವಿಡಿಯೋ ರೆಕಾರ್ಡಿಂಗ್ ಕೊಡುವಂತೆ ಮನವಿ ಸಲ್ಲಿಸಿದ್ದೆ ಎಂದರು. ಇದನ್ನು ಓದಿ: ಒಂದು ವಿಡಿಯೋ ನೋಡ್ಕೊಳ್ಳಕ್ಕಾಗದವರು ಅನ್ಯಾಯ ಹೇಗೆ ತಡೀತಾರೆ: ಡಿಸಿ ವಿರುದ್ಧ ಸುಮಲತಾ ಕಿಡಿ 

MND Madan kumar A

ಜಿಲ್ಲಾಧಿಕಾರಿಗಳು ವಿಡಿಯೋ ಕ್ಯಾಮೆರಾಮನ್ ಯಾವುದೋ ಮದುವೆ ಕಾರ್ಯಕ್ಕೆ ಕಳಿಸಿದ್ದೇವೆ. ಹೀಗಾಗಿ ವಿಡಿಯೋ ಫುಟೇಜ್ ನೀಡಲು ಎರಡ್ಮೂರು ದಿನ ಸಮಯ ಬೇಕಾಗುತ್ತದೆ ಅಂತ ಹೇಳಿದರು. ಆದರೆ ಮರುದಿನ ನಮಗೆ ಅರ್ಧ ವಿಡಿಯೋ ಮಾತ್ರ ಕೊಟ್ಟಿದ್ದಾರೆ. ಅದರಲ್ಲಿ ನಾನು ಆಕ್ಷೇಪ ವ್ಯಕ್ತಪಡಿಸಿದ ದೃಶ್ಯವನ್ನೇ ಕತ್ತರಿಸಲಾಗಿದೆ. ಇದರಿಂದಾಗಿ ಸಂಪೂರ್ಣ ವಿಡಿಯೋ ನೀಡುವಂತೆ ಕೇಳಿದಾಗ, ವಿಡಿಯೋಗ್ರಾಫರ್ ಟ್ಯಾಂಪರ್ ಮಾಡಿದ್ದಾನೆ ಎಂಬ ಸಂಶಯ ಬರುತ್ತಿದೆ. ಈ ಸಂಬಂಧ ಆತನ ಮೇಲೆ ಪ್ರಕರಣ ದಾಖಲಿಸಲಾಗುವುದು ಎಂದು ಜಿಲ್ಲಾಧಿಕಾರಿಗಳು ಹೇಳಿದರು. ಆದರೆ ಇಲ್ಲಿಯವರೆಗೂ ಪ್ರಕರಣ ದಾಖಲಾಗಿಲ್ಲ ಎಂದು ದೂರಿದರು.

ಚುನಾವಣಾ ಆಯುಕ್ತರು ಮತ್ತು ಸ್ಪೆಷಲ್ ಅಬ್ಸರ್ವರ್ ಮಧು ಮಹಾಜನ್ ಅವರನ್ನು ಭೇಟಿ ಮಾಡಿದ್ದೇನೆ. ವಿಚಾರಣೆ ನಡೆಸಿ ಸೂಕ್ತ ನ್ಯಾಯ ಕೊಡಿಸುವುದಾಗಿ ಭರವಸೆ ನೀಡಿದ್ದಾರೆ. ಜೊತೆಗೆ ವಿಡಿಯೋಗ್ರಾಫರ್ ಮೇಲೆ ಕಾನೂನು ಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿಸಿದ್ದಾರೆ. ಜಿಲ್ಲಾಧಿಕಾರಿ ಮಂಜುಶ್ರೀ ಅವರು ಕೂಡ ಪ್ರಕರಣದ ಕುರಿತು ವಿಚಾರಣೆಗಾಗಿ ಇಂದು ಬರುವಂತೆ ಸೂಚಿಸಿದ್ದಾರೆ ಎಂದು ಮದನ್ ಕುಮಾರ್ ಹೇಳಿದರು.

Share This Article
Leave a Comment

Leave a Reply

Your email address will not be published. Required fields are marked *