Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಬೆಂಗಳೂರು ಉತ್ತರದಲ್ಲಿ ಜೆಡಿಎಸ್‍ಗೆ ಸಂಕಷ್ಟ – ಷರತ್ತು ಒಪ್ಪಿದ್ರೆ ಸ್ಪರ್ಧೆಗೆ ಸಿದ್ಧ ಎಂದ ಶಂಕರ್!
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಬೆಂಗಳೂರು ಉತ್ತರದಲ್ಲಿ ಜೆಡಿಎಸ್‍ಗೆ ಸಂಕಷ್ಟ – ಷರತ್ತು ಒಪ್ಪಿದ್ರೆ ಸ್ಪರ್ಧೆಗೆ ಸಿದ್ಧ ಎಂದ ಶಂಕರ್!

Bengaluru City

ಬೆಂಗಳೂರು ಉತ್ತರದಲ್ಲಿ ಜೆಡಿಎಸ್‍ಗೆ ಸಂಕಷ್ಟ – ಷರತ್ತು ಒಪ್ಪಿದ್ರೆ ಸ್ಪರ್ಧೆಗೆ ಸಿದ್ಧ ಎಂದ ಶಂಕರ್!

Public TV
Last updated: March 24, 2019 3:01 pm
Public TV
Share
2 Min Read
bl shankar JDS
SHARE

ಬೆಂಗಳೂರು: ಬೆಂಗಳೂರು ಉತ್ತರ ಕ್ಷೇತ್ರದ ಅಭ್ಯರ್ಥಿ ಇಲ್ಲದೆ ಜೆಡಿಎಸ್ ಪರದಾಡುವಂತಾಗಿದ್ದು, ಭಾರೀ ಸಂಕಷ್ಟಕ್ಕೆ ಸಿಲುಕಿಕೊಂಡಿದೆ.

ಮಾಜಿ ಶಿಷ್ಯ, ಕಾಂಗ್ರೆಸ್‍ನ ಬಿ.ಎಲ್.ಶಂಕರ್ ಅವರನ್ನು ಬೆಂಗಳೂರು ಉತ್ತರ ಕ್ಷೇತ್ರದಿಂದ ಕಣಕ್ಕೆ ಇಳಿಸಲು ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಪ್ಲಾನ್ ರೂಪಿಸಿದ್ದರು. ಬಿ.ಎಲ್.ಶಂಕರ್ ಅವರು ಸ್ಪರ್ಧೆಗೆ ಒಪ್ಪಿಗೆ ಸೂಚಿಸಿದ್ದಾರೆ. ಆದರೆ ಜೆಡಿಎಸ್ ಚಿಹ್ನೆ ಅಡಿ ಸ್ಪರ್ಧಿಸಲು ಹಿಂದೇಟು ಹಾಕಿದ್ದಾರೆ ಎನ್ನುವ ವಿಚಾರ ಮೂಲಗಳಿಂದ ಪಬ್ಲಿಕ್ ಟಿವಿಗೆ ಸಿಕ್ಕಿದೆ.

ನಾನು ಚುನಾವಣೆಗೆ ಸ್ಪರ್ಧಿಸಲು ಸಿದ್ಧ. ಆದರೆ ಜೆಡಿಎಸ್ ಚಿಹ್ನೆಯ ಅಡಿ ಸ್ಪರ್ಧಿಸುವುದಿಲ್ಲ. ಸ್ಪರ್ಧೆ ಮಾಡಿದರೆ ನಾನು ಕಾಂಗ್ರೆಸ್ ಚಿಹ್ನೆಯ ಅಡಿಯಲ್ಲಿ ಕಣಕ್ಕೆ ಇಳಿಯುತ್ತೇನೆ ಎಂದು ದೋಸ್ತಿ ನಾಯಕರಿಗೆ ಶಂಕರ್ ತಮ್ಮ ಅಭಿಪ್ರಾಯವನ್ನು ತಿಳಿಸಿದ್ದಾರೆ.

HDD

ಶಂಕರ್ ಜೆಡಿಎಸ್ ಅಡಿಯಿಂದ ಸ್ಪರ್ಧೆ ಮಾಡದ ಹಿನ್ನೆಲೆಯಲ್ಲಿ ದೇವೇಗೌಡರನ್ನು ಕಣಕ್ಕೆ ಇಳಿಸಿದರೆ ಹೇಗೆ ಎನ್ನುವ ಚರ್ಚೆಯನ್ನು ದಳ ನಾಯಕರು ಮಾಡಿದ್ದಾರೆ. ಆದರೆ ದೇವೇಗೌಡರು ಎರಡು ಕಡೆಯಿಂದ ನಿಲ್ಲುವ ಪ್ರಸ್ತಾಪವನ್ನು ನಿರಾಕರಿಸಿದ್ದಾರೆ. ಹೀಗಾಗಿ ಕೊನೆ ಕ್ಷಣದಲ್ಲಿ ಜೆಡಿಎಸ್ ಕ್ಷೇತ್ರವನ್ನು ಬಿಟ್ಟು ಕೊಡುವ ಸಾಧ್ಯತೆ ಇದೆ ಎಂದು ಮೈತ್ರಿ ಪಕ್ಷಗಳ ಮೂಲಗಳು ತಿಳಿಸಿವೆ.

ಈಗಾಗಲೇ ನಮ್ಮ ವಿರುದ್ಧ ಕುಟುಂಬ ರಾಜಕೀಯದ ಆರೋಪವಿದೆ. ನಾನು ಎರಡು ಕ್ಷೇತ್ರದಿಂದ ಸ್ಪರ್ಧಿಸಿದರೆ ತಪ್ಪು ಸಂದೇಶ ರವಾನೆಯಾಗುತ್ತದೆ. ಅಷ್ಟೇ ಅಲ್ಲದೇ ತುಮಕೂರಿನಲ್ಲಿ ಹಿನ್ನಡೆ ಆಗಬಹುದು. ಇತ್ತ ಬೆಂಗಳೂರಿನ ಕಾಂಗ್ರೆಸ್ ಶಾಸಕರು ಮಾಜಿ ಸಿಎಂ ಸಿದ್ದರಾಮಯ್ಯ ಅವರ ಶಿಷ್ಯರಾಗಿದ್ದಾರೆ. ಹೀಗಾಗಿ ಎರಡೂ ಕ್ಷೇತ್ರಗಳಲ್ಲಿ ಪ್ರಚಾರ ಮಾಡುವುದು ಕಷ್ಟವಾಗುತ್ತದೆ ಎಂದು ಎಚ್.ಡಿ.ದೇವೇಗೌಡ ಅವರು ತಮ್ಮ ಅಭಿಪ್ರಾಯವನ್ನು ಇತರ ನಾಯಕರಿಗೆ ತಿಳಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

Muddahanumegowda

ತುಮಕೂರು ಕ್ಷೇತ್ರದಿಂದ ಸ್ಪರ್ಧಿಸುವ ವಿಚಾರವನ್ನು ಕೈಬಿಟ್ಟರೆ ಮುದ್ದಹನುಮೇಗೌಡರ ವಿರುದ್ಧ ಸ್ಪರ್ಧಿಸಲು ಆಗದೇ ಹೆದರಿದರು ಎಂಬ ಸಂದೇಶ ಹೋಗತ್ತದೆ. ಹೀಗಾಗಿ ಜೆಡಿಎಸ್ ಚಿಹ್ನೆಯ ಅಡಿಯಲ್ಲೇ ಬಿ.ಎಸ್.ಶಂಕರ್ ಕಣಕ್ಕೆ ಇಳಿಸುವಂತೆ ಕಾಂಗ್ರೆಸ್ ನಾಯಕರ ಮನವೊಲಿಕೆ ಕಸರತ್ತು ನಡೆಯುತ್ತಿದೆ.

ಮಂಡ್ಯದಿಂದ ನಿಖಿಲ್ ಕುಮಾರಸ್ವಾಮಿ ಹಾಗೂ ತುಮಕೂರು ಕ್ಷೇತ್ರದಿಂದ ಎಚ್.ಡಿ.ದೇವೇಗೌಡ ಅವರು ಸೋಮವಾರ ನಾಮಪತ್ರ ಸಲ್ಲಿಸಲಿದ್ದಾರೆ. ಇದಾದ ಬಳಿಕ ಸಂಜೆ ಚರ್ಚೆ ನಡೆಸಿ ಬೆಂಗಳೂರು ಉತ್ತರ ಕ್ಷೇತ್ರದ ಕುರಿತು ಅಂತಿಮ ನಿರ್ಧಾರ ಪ್ರಕಟಿಸಲು ದೋಸ್ತಿ ಪಕ್ಷಗಳ ನಾಯಕರು ಮುಂದಾಗಿದ್ದಾರೆ ಎನ್ನುವ ವಿಚಾರ ಈಗ ಸಿಕ್ಕಿದೆ.

DV sadananda gowda 1 1

ಜೆಡಿಎಸ್‍ಗೆ ಭಯ ಯಾಕೆ?
ಬೆಂಗಳೂರು ಉತ್ತರ ಕ್ಷೇತ್ರದ ಹಾಲಿ ಸಂಸದ, ಕೇಂದ್ರ ಸಚಿವ ಸದಾನಂದ ಗೌಡ ಅವರು ಈ ಬಾರಿಯೂ ಈ ಕ್ಷೇತ್ರದಿಂದಲೇ ಕಣಕ್ಕೆ ಇಳಿಯಲಿದ್ದಾರೆ. ಕಳೆದ ಚುನಾವಣೆಯಲ್ಲಿ ಡಿವಿಎಸ್ 2.29 ಲಕ್ಷ ಮತಗಳ ಅಂತರದಿಂದ ಕಾಂಗ್ರೆಸ್ ಅಭ್ಯರ್ಥಿ ವಿರುದ್ಧ ಜಯಗಳಿಸಿದ್ದರು. ಡಿವಿಎಸ್ 7,18,326 ಮತಗಳನ್ನು ಪಡೆದರೆ ಕಾಂಗ್ರೆಸ್ ಅಭ್ಯರ್ಥಿ ಸಿ.ನಾರಾಯಣ ಸ್ವಾಮಿ 4,88,562 ಮತಗಳನ್ನು ಪಡೆದಿದ್ದರು. ಜೆಡಿಎಸ್ ನಿಂದ ಸ್ಪರ್ಧಿಸಿದ್ದ ಅಬ್ದುಲ್ ನಜೀಂ ಕೇವಲ 92,681 ಮತಗಳನ್ನು ಪಡೆದಿದ್ದರು. 1996ರ ಚುನಾವಣೆಯಲ್ಲಿ ಜೆಡಿಎಸ್‍ನಿಂದ ಸ್ಪರ್ಧಿಸಿದ್ದ ನಾರಾಯಣ ಸ್ವಾಮಿ ಗೆಲುವು ಪಡೆದಿದಿದ್ದರು. ನಂತರ ನಡೆದ ಎರಡು ಚುನಾವಣೆಯಲ್ಲಿ ಕಾಂಗ್ರೆಸ್ಸಿನ ಜಾಫರ್ ಷರೀಫ್ ಆಯ್ಕೆ ಆಗಿದ್ದರು. 2004, 2009, 2014ರವರೆಗೆ ನಡೆದ ಚುನಾವಣೆಯಲ್ಲಿ ಗೆಲ್ಲುವ ಮೂಲಕ ಮೊದಲ ಬಾರಿಗೆ ಬಿಜೆಪಿ ಈ ಕ್ಷೇತ್ರದಲ್ಲಿ ಹ್ಯಾಟ್ರಿಕ್ ಸಾಧನೆ ಮಾಡಿತ್ತು.

TAGGED:B.L shankarBengaluru NorthcongressHD Deve GowdajdsLok Sabha Election 2019Public TVಎಚ್.ಡಿ. ದೇವೇಗೌಡಕಾಂಗ್ರೆಸ್ಜೆಡಿಎಸ್ಪಬ್ಲಿಕ್ ಟಿವಿಬಿ.ಎಲ್.ಶಂಕರ್ಬೆಂಗಳೂರು ಉತ್ತರಲೋಕಸಭಾ ಚುನಾವಣೆ 2019
Share This Article
Facebook Whatsapp Whatsapp Telegram

Cinema news

The trailer of the movie Love Mocktail 3 released Darling Krishna Milana Nagaraj 1
ಬಿಡುಗಡೆಯಾಯ್ತು ಲವ್‌ಮಾಕ್ಟೇಲ್ 3 ಚಿತ್ರದ ಟ್ರೈಲರ್!
Cinema Latest Top Stories
Kamal Haasan Donald Trump
ನಿಮ್ಮ ಕೆಲಸ ಎಷ್ಟಿದೆ ಅದನ್ನಷ್ಟೇ ನೋಡಿಕೊಳ್ಳಿ – ಟ್ರಂಪ್‌ ವಿರುದ್ಧ ಕಮಲ್‌ ಹಾಸನ್‌ ಕಿಡಿ
Cinema Latest National South cinema Top Stories
Jr NTR
ಬೆಂಗ್ಳೂರಲ್ಲಿ ಜ್ಯೂ.ಎನ್‍ಟಿಆರ್ ನೋಡಲು ಮುಗಿಬಿದ್ದ ಫ್ಯಾನ್ಸ್ – ಪೊಲೀಸರಿಂದ ಲಾಠಿಚಾರ್ಜ್‌
Bengaluru City Cinema Latest Top Stories
Dhurandhar 2 Trailer
ದುರಂಧರ್ 2 ಟ್ರೈಲರ್‌ ರಿಲೀಸ್ – ರಿವೆಂಜ್ ಮೋಡ್‌ನಲ್ಲಿ ರಣವೀರ್ ಸಿಂಗ್
Bollywood Cinema Latest Top Stories

You Might Also Like

Yogesh Doshi Dubai
Latest

ದುಬೈನಲ್ಲಿ ಸಂಕಷ್ಟಕ್ಕೆ ಸಿಲುಕಿರೋ ಭಾರತೀಯರ ನೆರವಿಗೆ ನಿಂತ ಉದ್ಯಮಿ – 64 ಯೂನಿಟ್‌ ಅಪಾರ್ಟ್‌ಮೆಂಟ್‌ ತೆರೆದು ಸಹಾಯ

Public TV
By Public TV
22 minutes ago
lovers attempt suicide by jumping into tungabhadra river rescued
Crime

ತುಂಗಾಭದ್ರ ನದಿಗೆ ಹಾರಿ ಅತ್ಮಹತ್ಯೆಗೆ ಯತ್ನಿಸಿದ ಪ್ರೇಮಿಗಳು – ಅಗ್ನಿಶಾಮಕ ಸಿಬ್ಬಂದಿಯಿಂದ ರಕ್ಷಣೆ

Public TV
By Public TV
50 minutes ago
TB Dam
Bellary

ತುಂಗಭದ್ರಾ ಜಲಾಶಯದ 15 ಕ್ರಸ್ಟ್ ಗೇಟ್‌ಗಳ ಅಳವಡಿಕೆ ಕಾರ್ಯ ಪೂರ್ಣ

Public TV
By Public TV
55 minutes ago
T20 India Team India champion
Cricket

ಟಿ20 ವಿಶ್ವಕಪ್‌ ಗೆದ್ದ ಟೀಂ ಇಂಡಿಯಾಗೆ ಬಂಪರ್‌; 131 ಕೋಟಿ ಬಹುಮಾನ ಘೋಷಿಸಿದ BCCI

Public TV
By Public TV
1 hour ago
Donald Trump 1
Latest

ಇರಾನ್ ಹಡಗುಗಳನ್ನು ವಶಪಡಿಸಿಕೊಳ್ಳೋದಕ್ಕಿಂತ ಮುಳುಗಿಸೋದೆ ನಮ್ಮ ಸೇನೆಗೆ ಮಜಾ: ಟ್ರಂಪ್‌

Public TV
By Public TV
1 hour ago
United Airlines flight
Bengaluru City

ಇರಾನ್-ಇಸ್ರೇಲ್ ಯುದ್ಧ: ಬೆಂಗಳೂರು ಏರ್‌ಪೋರ್ಟ್‌ನಲ್ಲಿ 17 ವಿಮಾನಗಳ ಹಾರಾಟ ರದ್ದು

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?