Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಜಾತಿ ವಿಚಾರಕ್ಕೆ ಕೈಹಾಕಿದ್ದಕ್ಕೆ ಜನ್ರು ನಮ್ಮ ಕಪಾಳಕ್ಕೆ ಬಾರಿಸಿದ್ರು: ಡಿಕೆಶಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bellary | ಜಾತಿ ವಿಚಾರಕ್ಕೆ ಕೈಹಾಕಿದ್ದಕ್ಕೆ ಜನ್ರು ನಮ್ಮ ಕಪಾಳಕ್ಕೆ ಬಾರಿಸಿದ್ರು: ಡಿಕೆಶಿ

Bellary

ಜಾತಿ ವಿಚಾರಕ್ಕೆ ಕೈಹಾಕಿದ್ದಕ್ಕೆ ಜನ್ರು ನಮ್ಮ ಕಪಾಳಕ್ಕೆ ಬಾರಿಸಿದ್ರು: ಡಿಕೆಶಿ

Public TV
Last updated: April 8, 2019 6:53 pm
Public TV
Share
3 Min Read
BLY DKShi
SHARE

– ಬಹಿರಂಗವಾಗಿ ಕ್ಷಮೆಯಾಚಿಸಿದ ಸಚಿವರು
– ಇನ್ನು ಯಾವುದೇ ಕಾರಣಕ್ಕೆ ಜಾತಿ ವಿಚಾರದಲ್ಲಿ ಕೈ ಹಾಕಲ್ಲ

ಬಳ್ಳಾರಿ: ಪ್ರತ್ಯೇಕ ಲಿಂಗಾಯತ ಧರ್ಮ ವಿಚಾರಕ್ಕೆ ಕೈಹಾಕಿದ್ವಿ. ಆದರೆ ಜನರು ನಮ್ಮ ಕಪಾಳಕ್ಕೆ ಬಾರಿಸಿದರು ಎಂದು ಬೃಹತ್ ನೀರಾವರಿ ಹಾಗೂ ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.

ಹೂವಿನಹಡಗಲಿಯಲ್ಲಿ ನಡೆದ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶದಲ್ಲಿ ಮಾತನಾಡಿದ ಸಚಿವರು, ಬಿಜೆಪಿಯವರು ಒಂದು ಧರ್ಮದ ಮೇಲೆ ರಾಜಕೀಯ ಮಾಡುತ್ತಿದ್ದಾರೆ. ಯಾರೋ ಏನೋ ಹೇಳಿದರೂ ಅಂತ ನನ್ನ ಸೇರಿದಂತೆ ನಮ್ಮ ಪಕ್ಷದ ಕೆಲವರು ವೀರಶೈವರ ವಿಚಾರಕ್ಕೆ ಕೈ ಹಾಕಿದ್ವಿ. ಈ ಮೂಲಕ ಪ್ರತ್ಯೇಕ ಧರ್ಮ ಮಾಡಲು ತೀರ್ಮಾನ ಮಾಡಿದ್ವಿ. ಅದಕ್ಕೆ ಜನ ನಮ್ಮ ಕಪಾಳಕ್ಕೆ ಹೊಡೆದರು. ಹೀಗಾಗಿ ನಿಮಗೂ ಹಾಗೂ ರಾಜ್ಯದ ಜನರಲ್ಲಿ ಕ್ಷಮೆ ಕೇಳುತ್ತೇನೆ ಎಂದು ಹೇಳುವ ಮೂಲಕ ಮತ್ತೊಮ್ಮೆ ಕ್ಷಮೆಯಾಚಿಸಿದರು.

BLY DKShi A

ಇನ್ನೆಂದೂ ಕಾಂಗ್ರೆಸ್ ಜಾತಿ, ಧರ್ಮದ ವಿಚಾರದಲ್ಲಿ ಕೈಹಾಕುವುದಿಲ್ಲ. ನಿಮ್ಮ ಕ್ಷಮೆ ಇರಲಿ. ರಾಜಕೀಯದಲ್ಲಿ ಧರ್ಮ ಇರಬೇಕು. ಧರ್ಮದಲ್ಲಿ ರಾಜಕಾರಣ ಇರಬಾರದು ಎಂಬ ನಿರ್ಧಾರವನ್ನು ಕೈಗೊಂಡಿದ್ದೇನೆ. ಹೀಗಾಗಿ ಈ ಹಿಂದೆ ಆಗಿರುವುದನ್ನು ಮರೆತು ಎಲ್ಲರೂ ಒಟ್ಟಾಗಿ ಹೋಗಬೇಕು ಎಂದು ಕಾರ್ಯಕರ್ತರಲ್ಲಿ ಮನವಿ ಮಾಡಿಕೊಂಡರು.

ಕಾಂಗ್ರೆಸ್ ಇತಿಹಾಸ ದೇಶದ ಇತಿಹಾಸ, ಕಾಂಗ್ರೆಸ್ ಶಕ್ತಿ ಈ ದೇಶದ ಶಕ್ತಿಯಾಗಿದೆ. ದೇಶದಲ್ಲಿ ಜಾತ್ಯಾತೀತತೆ ತತ್ವ ಉಳಿಸಲು ರಾಜ್ಯದಲ್ಲಿ ಜೆಡಿಎಸ್ ಜೊತೆಗೆ ಸೇರಿ ಮೈತ್ರಿ ಸರ್ಕಾರ ರಚನೆ ಮಾಡಿದ್ದೇವೆ. ನಾನು ಹೋಗಿ ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಅವರ ಜೊತೆಗೆ ಮಾತನಾಡಿ ಬಿಜೆಪಿಯನ್ನು ಅಧಿಕಾರದಿಂದ ದೂರ ಇಟ್ಟೆ. ಲೋಕಸಭಾ ಚುನಾವಣೆಯಲ್ಲಿ ರಾಜ್ಯದ 22ಕ್ಕೂ ಹೆಚ್ಚು ಕ್ಷೇತ್ರದಲ್ಲಿ ಮೈತ್ರಿ ಅಭ್ಯರ್ಥಿಗಳು ಗೆಲುವು ಸಾಧಿಸುತ್ತಾರೆ. ಈ ಮೂಲಕ ಬಿಜೆಪಿ ಒಂದು ಅಂಕಿ ದಾಟದಂತೆ ಕಟ್ಟಿ ಹಾಕುತ್ತೇವೆ ಎಂದು ಹೇಳಿದರು.

hdk dkshi

ಈಶ್ವರಪ್ಪ ಅಂತ ಒಬ್ಬರಿದ್ದಾರೆ. ಅವರು ವಿರೋಧ ಪಕ್ಷ ನಾಯಕರಾಗಿದ್ದು, ರಾಜ್ಯದ ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ಚುನಾವಣೆಯ ನಂತರ ನೆಗೆದು ಬೀಳುತ್ತಾರೆ ಎಂದು ಹೇಳಿಕೆ ನೀಡಿದ್ದಾರೆ. ಅವರಿಗೆ ಸಂಸ್ಕಾರ, ಸಂಸ್ಕೃತಿ ಇದೆಯಾ ಎಂದು ಪ್ರಶ್ನಿಸಿ ಕೆ.ಎಸ್.ಈಶ್ವರಪ್ಪ ವಿರುದ್ಧ ವಾಗ್ದಾಳಿ ನಡೆಸಿದರು.

ಬಳ್ಳಾರಿ ಜನರು ಬಿಜೆಪಿ ಶಾಸಕರಾದ ಶ್ರೀರಾಮುಲು, ಕರುಣಾಕರ ರೆಡ್ಡಿ, ಜೆ.ಶಾಂತಾ ಅವರನ್ನು ಮೂರು ಬಾರಿ ಗೆಲ್ಲಿಸಿ ಕಳಿಸಿದಿರಿ. ಅವರು ಜಿಲ್ಲೆಗೆ ಯಾವ ಕೊಡುಗೆ ನೀಡಿದ್ದಾರೆ? ಈಗ ಶ್ರೀರಾಮುಲು ಅವರು ಕುಸ್ತಿ ಆಡುವುದನ್ನು ಬಿಟ್ಟು ದೇವೇಂದ್ರಪ್ಪ ಅವರನ್ನು ಕಣಕ್ಕೆ ಇಳಿಸಿದ್ದಾರೆ ಎಂದು ವ್ಯಂಗ್ಯವಾಡಿದರು.

dvg bsy

ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣ ಮಾಡಲು ಹೊರಾಟ ಮಾಡಿದ ಬಿಜೆಪಿ ಹಿರಿಯ ಮುಖಂಡ ಎಲ್.ಕೆ.ಅಡ್ವಾಣಿ, ಮುರುಳಿ ಮನೋಹರ್ ಜೋಷಿ ಅವರಿಗೆ ರೆಸ್ಟ್ ನೀಡಿದ್ದಾರೆ. ಅವರಂತೆ ಈಗ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರಿಗೂ ರೆಸ್ಟ್ ನೀಡಿದ್ದಾರೆ. ಅವರು ಮುಖ್ಯಮಂತ್ರಿಯಾಗುತ್ತೇನೆ ಅಂತ ಕನಸು ಕಾಣುತ್ತಿದ್ದಾರೆ. ನಾವೇನು ಕಡ್ಲೆಕಾಯಿ ತಿನ್ನುತ್ತೇವಾ? ಈ ರಾಜ್ಯದಲ್ಲಿ ಇನ್ನೂ ಐದು ವರ್ಷ ಕುಮಾರಸ್ವಾಮಿ ಮುಖ್ಯಮಂತ್ರಿಯಾಗಿರುತ್ತಾರೆ ಎಂದು ಹೇಳಿದರು.

BJP 1

ಡಿಕೆ ಶಿವಕುಮಾರ್ ಹೇಳಿದ್ದು ಏನು?
2018ರ ಬಳ್ಳಾರಿ ಲೋಕಸಭಾ ಉಪಚುನಾವಣೆಯ ಸಮಯದಲ್ಲಿ ಗದಗ ಜಿಲ್ಲೆಯ ಲಕ್ಷ್ಮೇಶ್ವರ ಪಟ್ಟಣದಲ್ಲಿ ಶರನ್ನವರಾತ್ರಿ ಅಂಗವಾಗಿ ರಂಭಾಪುರಿ ಶ್ರೀಗಳ ನೇತೃತ್ವದಲ್ಲಿ ನಡೆದ ಧರ್ಮಸಮ್ಮೇಳನ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಡಿಕೆ ಶಿವಕುಮಾರ್ ಸಾರ್ವಜನಿಕವಾಗಿ ಕ್ಷಮೆಯಾಚಿಸಿದ್ದರು. ನಮ್ಮ ಸರ್ಕಾರದಲ್ಲಿ ನಾವು ದೊಡ್ಡ ತಪ್ಪನ್ನು ಮಾಡಿದ್ದೇವೆ. ಸರ್ಕಾರದವರು, ರಾಜಕೀಯದವರು ಧರ್ಮದ ವಿಚಾರದಲ್ಲಿ ಜಾತಿಯ ವಿಚಾರದಲ್ಲಿ ಕೈ ಹಾಕಬಾರದು. ನಮ್ಮ ಸರ್ಕಾರದಿಂದ ದೊಡ್ಡ ಅಪರಾಧವಾಗಿದೆ. ನಾನೂ ಸಹ ಆ ಸರ್ಕಾರದಲ್ಲಿ ಮಂತ್ರಿಯಾಗಿದ್ದೆ. ನಮ್ಮ ಬೇರೆ ಸಚಿವರು ವಿಭಿನ್ನವಾಗಿ ಮಾತನಾಡಿದರು. ಆದ್ರೆ ಸರ್ಕಾರದ ತೀರ್ಮಾನ ಆ ಸಂದರ್ಭದಲ್ಲಿ ಬೇಕಾದಷ್ಟು ಅಲ್ಲೋಲ ಕಲ್ಲೋಲ ಸೃಷ್ಟಿಯಾಯ್ತು. ರಾಜಕೀಯದಲ್ಲಿ ಅನೇಕ ವಿಭಿನ್ನವಾದ ಹೇಳಿಕೆಗಳನ್ನು ನಾವು ನೋಡಿದ್ದೇವೆ. ಯಾವುದೇ ಸರ್ಕಾರ ಧರ್ಮದಲ್ಲಿ ಕೈ ಹಾಕಬಾರದು ಎನ್ನೋದಕ್ಕೆ ವಿಧಾನಸಭಾ ಚುನಾವಣೆಯಲ್ಲಿ ನಡೆದ ಜನಾಭಿಪ್ರಾಯವೇ ಸಾಕ್ಷಿ ಎಂದಿದ್ದರು.

TAGGED:bellarycongressDK ShivakumarLingayat separate religionLok Sabha electionPublic TVಕಾಂಗ್ರೆಸ್ಪಬ್ಲಿಕ್ ಟಿವಿಪ್ರತ್ಯೇಕ ಲಿಂಗಾಯತ ಧರ್ಮಬಳ್ಳಾರಿಬಿ.ಎಸ್.ಯಡಿಯೂರಪ್ಪಬಿಜೆಪಿಸಚಿವ ಡಿ ಕೆ ಶಿವಕುಮಾರ್
Share This Article
Facebook Whatsapp Whatsapp Telegram

Cinema news

Monalisa
ಕುಂಭಮೇಳದ ವೈರಲ್ ಹುಡುಗಿ ಮೊನಾಲಿಸಾ ಈಗ ಗರ್ಭಿಣಿ
Cinema Latest Main Post National
Ranya Rao
ಇಂದಿಗೆ ಕಾಫಿಫೋಸಾ ಅವಧಿ ಅಂತ್ಯ – ಜೈಲಿನಿಂದ ರನ್ಯಾರಾವ್‌ ಬಿಡುಗಡೆ
Cinema Crime Karnataka Latest Main Post
ranya rao 2 1
ಗೋಲ್ಡ್ ಸ್ಮಗ್ಲಿಂಗ್ ಕೇಸ್ – ಇಂದು ರನ್ಯಾ ರಾವ್ ಜೈಲಿನಿಂದ ರಿಲೀಸ್
Bengaluru City Cinema Districts Karnataka Latest Top Stories
Duniya Vijay 1
ಝಾಂಬಿ ಡ್ರಗ್ಸ್ ಕೇಸಲ್ಲಿ ನಟ ದುನಿಯಾ ವಿಜಯ್‌ಗೆ ಸಂಕಷ್ಟ – ಡಿಲೀಟ್ ವಿಡಿಯೋ ರಿಟ್ರೀವ್‌ಗಾಗಿ ಇನ್‌ಸ್ಟಾಗೆ ಪೊಲೀಸರ ಪತ್ರ
Bengaluru City Cinema Districts Karnataka Latest Sandalwood Top Stories

You Might Also Like

John Phelan
Latest

ಹಾರ್ಮುಜ್‌ಗೆ ದಿಗ್ಬಂಧನ ವಿಧಿಸಿರೋ ಅಮೆರಿಕ ಸೇನೆಗೆ ದೊಡ್ಡ ಹೊಡೆತ – ನೌಕಾಪಡೆ ಕಾರ್ಯದರ್ಶಿ ರಾಜೀನಾಮೆ

Public TV
By Public TV
8 minutes ago
sslc result
Bengaluru City

ಇಂದು SSLC ಪರೀಕ್ಷೆ- 1ರ ಫಲಿತಾಂಶ ಪ್ರಕಟ

Public TV
By Public TV
32 minutes ago
Elephant
Chamarajanagar

ನೀರು ಕುಡಿಯಲು ಬಂದು ಕೆಸರಿನಲ್ಲಿ ಸಿಲುಕಿದ್ದ ಕಾಡಾನೆ 3 ದಿನಗಳ ನಂತ್ರ ಸಾವು

Public TV
By Public TV
1 hour ago
Voting
Latest

Tamil Nadu Elections | 234 ಕ್ಷೇತ್ರಗಳಲ್ಲಿ ಮತದಾನ ಶುರು – 4.59 ಲಕ್ಷ ಫಸ್ಟ್‌ ಟೈಂ ವೋಟರ್ಸ್‌ ಹಕ್ಕು ಚಲಾವಣೆ

Public TV
By Public TV
2 hours ago
Ballari Hotel Cylinder Blast
Bellary

ಏಕಾಏಕಿ 2 ಸಿಲಿಂಡರ್ ಬ್ಲಾಸ್ಟ್ – ಹೊತ್ತಿ ಉರಿದ ಹೋಟೆಲ್, ಬಾಲಕನಿಗೆ ಗಂಭೀರ ಗಾಯ

Public TV
By Public TV
2 hours ago
Election vote ink
Latest

ಇಂದು ತಮಿಳುನಾಡು, ಪಶ್ಚಿಮ ಬಂಗಾಳದಲ್ಲಿ ಚುನಾವಣೆ

Public TV
By Public TV
2 hours ago

Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?