ಇಂದು ಐದನೇ ಹಂತದ ಮತದಾನ-ಹೈ ವೋಲ್ಟೇಜ್ ಕ್ಷೇತ್ರಗಳಲ್ಲಿ ಚುನಾವಣೆ

Public TV
2 Min Read
voting ink

ನವದೆಹಲಿ: ಸೋಮವಾರ ಐದನೇ ಹಂತದ ಚುನಾವಣೆಗೆ ಮತದಾನ ನಡೆಯಲಿದೆ. ಹೈವೊಲ್ಟೇಜ್ ಕ್ಷೇತ್ರಗಳಲ್ಲಿ ವೋಟಿಂಗ್ ನಡೆಯಲಿದ್ದು ಇಂದು ಘಟಾನುಘಟಿ ನಾಯಕರ ಭವಿಷ್ಯವನ್ನು ಮತದಾರರು ನಿರ್ಧರಿಸಲಿದ್ದಾರೆ. ಇದಕ್ಕಾಗಿ ಚುನಾವಣಾ ಆಯೋಗ ಎಲ್ಲ ಸಿದ್ಧತೆಗಳನ್ನು ಮಾಡಿಕೊಂಡಿದೆ. ಒಟ್ಟು 51 ಕ್ಷೇತ್ರಗಳಲ್ಲಿ ಮತದಾನ ನಡೆಯಲಿದ್ದು 674 ಅಭ್ಯರ್ಥಿಗಳ ಭವಿಷ್ಯವನ್ನು ಮತದಾರರು ನಿರ್ಧರಿಸಿಲಿದ್ದಾರೆ.

ಉತ್ತರ ಪ್ರದೇಶದ 14 ಕ್ಷೇತ್ರ, ರಾಜಸ್ತಾನದ 12, ಪಶ್ಚಿಮ ಬಂಗಾಳ, ಮಧ್ಯಪ್ರದೇಶದಲ್ಲಿ ತಲಾ ಏಳು ಹಾಗೂ ಬಿಹಾರದಲ್ಲಿನ 5, ಜಾರ್ಖಂಡ್ ನಲ್ಲಿನ 4 ಹಾಗೂ ಜಮ್ಮು ಮತ್ತು ಕಾಶ್ಮೀರದ ಅನಂತ್ ನಾಗ್ ಹಾಗೂ ಲಡಾಖ್ ಸೇರಿ ಒಟ್ಟು 7 ರಾಜ್ಯಗಳ 51 ಲೋಕಸಭಾ ಸ್ಥಾನಗಳಿಗೆ ಮತದಾನ ನಡೆಯಲಿದೆ. ಐದನೇ ಹಂತದ ಚುನಾವಣೆಯಲ್ಲಿ ಸುಮಾರು 8.75 ಕೋಟಿ ಮತದಾರರು ಮತ ಚಲಾಯಿಸುವ ಮೂಲಕ 674 ಅಭ್ಯರ್ಥಿಗಳ ಭವಿಷ್ಯ ನಿರ್ಧರಿಸಲಿದ್ದಾರೆ. 51 ಲೋಕಸಭಾ ಕ್ಷೇತ್ರಗಳಲ್ಲಿ 96 ಸಾವಿರ ಮತಗಟ್ಟೆಗಳನ್ನು ಸ್ಥಾಪಿಸಲಾಗಿದ್ದು, ಯಾವುದೇ ಅಹಿತಕರ ಘಟನೆ ನಡೆಯದಂತೆ ಮುನ್ನೆಚ್ಚರಿಕಾ ಕ್ರಮವಾಗಿ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ.

rahul smriti

ಐದನೇ ಹಂತದ ಮತದಾನದಲ್ಲಿ ದೇಶದ ರಾಜಕೀಯ ಘಟಾನುಘಟಿಗಳು ಕಣದಲ್ಲಿದ್ದಾರೆ. ವಯನಾಡ್ ನಿಂದ ಸ್ವರ್ಧೆ ಎದುರಿಸಿರುವ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಅವರಿಗೆ ಮತ್ತೊಂದು ಅಗ್ನಿ ಪರೀಕ್ಷೆ. ಈಗಾಗಲೇ ಮೂರು ಬಾರಿ ಅಮೇಥಿಯಿಂದ ಆಯ್ಕೆಯಾಗಿರುವ ರಾಹುಲ್ ಗಾಂಧಿ ಮತ್ತೊಮ್ಮೆ ಆಯ್ಕೆ ಬಯಸಿದ್ದಾರೆ. ರಾಹುಲ್ ಗಾಂಧಿ ಗೆ ಟಕ್ಕರ್ ಕೊಡಲು ಕೇಂದ್ರ ಸಚಿವೆ ಸ್ಮೃತಿ ಇರಾನಿ ಸಹ ಸಾಕಷ್ಟು ಬೆವರು ಹರಿಸಿದ್ದಾರೆ. ಅಲ್ಲದೇ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಸೇರಿ ಹಲವು ನಾಯಕರು ಅಮೇಥಿಯಲ್ಲಿ ಶಕ್ತಿ ಪ್ರದರ್ಶನ ಮಾಡಿದ್ದಾರೆ. ಈಗಾಗಲೇ ಆಡಳಿತ ವಿರೋಧಿ ಅಲೆ ಎದುರಿಸುತ್ತಿರುವ ರಾಹುಲ್ ಗಾಂಧಿಗೆ ತಮ್ಮ ನಂಬಿಕಸ್ಥ ಕ್ಷೇತ್ರದಲ್ಲಿ ಇಂದು ನಡೆಯಲಿರುವ ಮತದಾನ ಅತಿ ಮುಖ್ಯವಾಗಿದೆ.

ಕಾಂಗ್ರೆಸ್ ಅಧಿನಾಯಕಿ ಯುಪಿಎ ಒಕ್ಕೂಟದ ಅಧ್ಯಕ್ಷೆ ಸೋನಿಯಾ ಗಾಂಧಿಗೂ ಸಂಕಷ್ಟ ತಪ್ಪಿದಲ್ಲ. ನಾಲ್ಕು ಬಾರಿ ರಾಯ್ ಬರೇಲಿಯಿಂದ ಸಂಸದೆಯಾಗಿರುವ ಸೋನಿಯಾಗಾಂಧಿಗೆ ಈ ಬಾರಿ ಬಿಜೆಪಿ ಪ್ರಬಲ ಪೈಪೊಟಿ ನೀಡಿದೆ. ಬಿಜೆಪಿಯ ಪರಿಷತ್ ಸದಸ್ಯ ದಿನೇಶ್ ಪ್ರತಾಪ್ ಸಿಂಗ್ ಸೋನಿಯಾಗಾಂಧಿ ವಿರುದ್ಧ ಸೆಣಸಲಿದ್ದಾರೆ.

sonia

ಅದೃಷ್ಟದ ಕ್ಷೇತ್ರ ಲಕ್ನೊದಲ್ಲಿ ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್, ಇತ್ತೀಚೆಗೆ ಬಿಜೆಪಿ ತೊರೆದು ಕಾಂಗ್ರೆಸ್ ಸೇರಿದ ಶತುಘ್ನ ಸಿನ್ಹಾ ಪತ್ನಿ ಪೂನಂ ಸಿನ್ಹಾ ಮಹಾಘಟಬಂಧನ್ ಅಭ್ಯರ್ಥಿಯಾಗಿ ಸ್ವರ್ಧೆ ಮಾಡಿದ್ದಾರೆ. ಅಲ್ಲದೇ ಕೇಂದ್ರ ಸಚಿವ ರಾಜವರ್ಧನ್ ಸಿಂಗ್ ರಾಥೋಡ್ ಸೇರಿ ಇತರ ಘಟಾನುಘಟಿ ಅಭ್ಯರ್ಥಿಗಳು ಸ್ಪರ್ಧಿಸುತ್ತಿದ್ದಾರೆ.

ವಿವಾದಿತ ರಾಮ ಜನ್ಮಭೂಮಿ ಸ್ಥಳ ಅಯೋಧ್ಯೆ ಒಳಗೊಂಡ ಫೈಜಬಾದ್ ನಲ್ಲಿ ಮತದಾನ ನಡೆಯಲಿದ್ದು ಕುತೂಹಲ ಮೂಡಿಸಿದ್ದು ಉತ್ತರ ಪ್ರದೇಶದಲ್ಲಿ ಐದನೇ ಹಂತದಲ್ಲಿ ನಡೆಯುತ್ತಿರುವ ಈ 14 ಕ್ಷೇತ್ರಗಳಲ್ಲಿ ರಾಯ್‍ಬರೇಲಿ, ಅಮೇಠಿ ಹೊರತುಪಡಿಸಿ ಬಿಜೆಪಿ 12 ಕ್ಷೇತ್ರಗಳಲ್ಲಿ ಕ್ಲೀನ್ ಸ್ವೀಪ್ ಮಾಡಿತ್ತು. ಆದರೆ ಈ ಬಾರಿ ಮಹಾಘಟಬಂಧನ್ ತೀವ್ರ ಪೈಪೋಟಿ ನೀಡಿದ್ದು ಇಂದಿನ ಮತದಾನದ ಮೇಲೆ ಎಲ್ಲರ ಕುತೂಹಲ ಕಣ್ಣಿದೆ.

Share This Article
Leave a Comment

Leave a Reply

Your email address will not be published. Required fields are marked *