Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಬಿಜೆಪಿ ನೀಡಿದ ಭರವಸೆಗಳಲ್ಲಿ ಎಷ್ಟು ಪೂರ್ಣಗೊಂಡಿದೆ? ಎಷ್ಟು ಪೂರ್ಣಗೊಂಡಿಲ್ಲ?
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Election News | ಬಿಜೆಪಿ ನೀಡಿದ ಭರವಸೆಗಳಲ್ಲಿ ಎಷ್ಟು ಪೂರ್ಣಗೊಂಡಿದೆ? ಎಷ್ಟು ಪೂರ್ಣಗೊಂಡಿಲ್ಲ?

Election News

ಬಿಜೆಪಿ ನೀಡಿದ ಭರವಸೆಗಳಲ್ಲಿ ಎಷ್ಟು ಪೂರ್ಣಗೊಂಡಿದೆ? ಎಷ್ಟು ಪೂರ್ಣಗೊಂಡಿಲ್ಲ?

Public TV
Last updated: April 24, 2024 2:21 pm
Public TV
Share
5 Min Read
modi road show
SHARE

ಪ್ರತಿ ಚುನಾವಣೆಯಲ್ಲಿ (Election) ರಾಜಕೀಯ ಪಕ್ಷಗಳು ಬಹಳಷ್ಟು ಭರವಸೆಗಳನ್ನು ನೀಡುತ್ತದೆ. ಈ ಪೈಕಿ ಎಲ್ಲಾ ಭರವಸೆಗಳನ್ನು ಯಾವುದೇ ಪಕ್ಷ ಈಡೇರಿಸುವುದಿಲ್ಲ. ಈ ಭರವಸೆ ಈಡೇರಿಸಲು ಕ್ರಮ ಕೈಗೊಳ್ಳುತ್ತದೆ. ಹೀಗಾಗಿ ಇಲ್ಲಿ ಮೋದಿ ಸರ್ಕಾರ (Modi Government) ಈ ಹಿಂದೆ ನೀಡಿದ ಭರವಸೆಗಳ ಪೈಕಿ ಪ್ರಮುಖವಾಗಿ ಈಡೇರಿದ ಮತ್ತು ಈಡೇರದ ಭರವಸೆಗಳ ಮಾಹಿತಿಯನ್ನು ನೀಡಲಾಗಿದೆ.

ರಾಮ ಮಂದಿರ:
ಬಿಜೆಪಿ ದೇಶವ್ಯಾಪಿ ಬೇರೂರಲು ಕಾರಣವಾಗಿದ್ದೇ ರಾಮ ಮಂದಿರ (Ram Mandir) ಆಂದೋಲನ. ಪ್ರತಿ ಲೋಕಸಭಾ ಚುನಾವಣೆಯ ಪ್ರಣಾಳಿಕೆಯಲ್ಲಿ  ಬಿಜೆಪಿ ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣ ಮಾಡುತ್ತೇವೆ ಎಂದು ಹೇಳುತ್ತಾ ಬಂದಿತ್ತು. ಈ ಬಾರಿ ಈ ಭರವಸೆಯನ್ನು ಈಡೇರಿಸಿದ್ದು ಜನವರಿ 22 ರಂದು ಪ್ರಧಾನಿ ನರೇಂದ್ರ ಮೋದಿ ರಾಮ ಮಂದಿರವನ್ನು ಲೋಕಾರ್ಪಣೆ ಮಾಡಿದ್ದಾರೆ.

ram mandir 1

ಮಹಿಳೆಯರಿಗೆ ಮೀಸಲಾತಿ:
ಕೇಂದ್ರ ಸರ್ಕಾರ ಹೊಸ ಸಂಸತ್‌ ಕಟ್ಟಡದ ಮೊದಲ ವಿಶೇಷ ಅಧಿವೇಶನ ಸಮಯದಲ್ಲಿ ಲೋಕಸಭೆ ಮತ್ತು ರಾಜ್ಯಗಳ ವಿಧಾನಸಭೆಯಲ್ಲಿ ಮಹಿಳೆಯರಿಗೆ 33% ಮೀಸಲಾತಿ (Women Reservation) ನೀಡುವ ಮಸೂದೆಯನ್ನು ಪಾಸ್‌ ಮಾಡಿದೆ. 1989 ರಿಂದ ಈ ವಿಚಾರ ಸಂಸತ್ತಿನಲ್ಲಿ ಚರ್ಚೆ ಆಗುತ್ತಲೇ ಇತ್ತು. ಆದರೆ 2023ರ ಸೆಪ್ಟೆಂಬರ್‌ನಲ್ಲಿ ಮಸೂದೆಯನ್ನು ಪಾಸ್‌ ಮಾಡಲಾಗಿದೆ.   ಇದನ್ನೂ ಓದಿ: ಪಿತ್ರಾರ್ಜಿತ ಆಸ್ತಿಗೆ 55% ತೆರಿಗೆ – ಅಮೆರಿಕ ಉದಾಹರಿಸಿ ಸಂಪತ್ತಿನ ಮರು ಹಂಚಿಕೆಯನ್ನು ಸಮರ್ಥಿಸಿಕೊಂಡ ಸ್ಯಾಮ್‌ ಪಿತ್ರೋಡಾ

ಜಮ್ಮು ಕಾಶ್ಮೀರಕ್ಕೆ ನೀಡಲಾದ ವಿಶೇಷ ಸ್ಥಾನಮಾನ ರದ್ದು:
ಜಮ್ಮು ಕಾಶ್ಮೀರಕ್ಕೆ ನೀಡಿದ ವಿಶೇಷ ಸ್ಥಾನಮಾನ (Jammu Kashmir Special Status) ರದ್ದಾದರೆ ಕಾಶ್ಮೀರ ಕಣಿವೆಯಲ್ಲಿ ಉಗ್ರ ಚಟುವಟಿಕೆಗಳು ಬಂದ್‌ ಆಗುತ್ತವೆ ಎಂದು ಬಿಜೆಪಿ ಹೇಳುತ್ತಲೇ ಬಂದಿತ್ತು. 2019ರ ಆಗಸ್ಟ್‌ 5 ರಂದು ಸರ್ಕಾರ ಮಸೂದೆ ಮಂಡಿಸಿ ಕಾಶ್ಮೀರ ರಾಜ್ಯಕ್ಕೆ ವಿಶೇಷ ಹಕ್ಕುಗಳನ್ನು ನೀಡುವ ಎರಡು ಆರ್ಟಿಕಲ್ 370 ಮತ್ತು ಆರ್ಟಿಕಲ್ 35 ರದ್ದು ಮಾಡಿತ್ತು. ರಾಜ್ಯಸಭೆಯಲ್ಲಿ ಎನ್‌ಡಿಎಗೆ ಬೆಂಬಲ ಇಲ್ಲದೇ ಇದ್ದರೂ ಹಲವು ಪಕ್ಷಗಳು ಬೆಂಬಲಿಸಿದ್ದರಿಂದ ವಿಶೇಷ ಸ್ಥಾನಮಾನ ರದ್ದಾಗಿದೆ.

jammu kashmir army

ಭಯೋತ್ಪಾದಕ ಚಟುವಟಿಕೆಗಳಿಗೆ ಶೂನ್ಯ ಸಹಿಷ್ಣುತೆ:
ಮೋದಿ ಸರ್ಕಾರ ಬರುವ ಮೊದಲು ದೇಶದ ಹಲವೆಡೆ ಬಾಂಬ್‌ ಸ್ಫೋಟಗಳು ನಡೆಯುತ್ತಿದ್ದವು. ಆದರೆ ಈಗ ಎನ್‌ಐಎ (NIA) ಹಲವು ಕಡೆ ದಾಳಿ ಮಾಡುತ್ತಿರುವುದರಿಂದ ಉಗ್ರ ಕೃತ್ಯಗಳಿಗೆ ಬಹಳಷ್ಟು ಕಡಿವಾಣ ಹಾಕಲಾಗಿದೆ. ಹಿಂದೆ ಜನರು ಉಗ್ರರ ದಾಳಿಗೆ ತುತ್ತಾಗುತ್ತಿದ್ದರು. ಆದರೆ ಈಗ ಸೈನಿಕರನ್ನು ಗುರಿಯಾಗಿಸಿಕೊಂಡು ಉಗ್ರರು ದಾಳಿ ನಡೆಸುತ್ತಿದ್ದಾರೆ.

ಏಕರೂಪ ನಾಗರಿಕ ಸಂಹಿತೆ:
ಸಂವಿಧಾನದ ಮುಂದೆ ದೇಶದ ಎಲ್ಲಾ ಪ್ರಜೆಗಳು ಸಮಾನ ಎಂದು ಸಾರಲು ಏಕರೂಪದ ನಾಗರಿಕ ಸಂಹಿತೆ (Uniform Civil Code) ಜಾರಿಗೆ ತರಲಾಗುವುದಾಗಿ ಬಿಜೆಪಿ ಹೇಳಿತ್ತು. ಆದರೆ ಕೇಂದ್ರ ಸರ್ಕಾರ ಇದನ್ನು ಜಾರಿಗೆ ತಂದಿಲ್ಲ. ಉತ್ತರಾಖಂಡ ಬಿಜೆಪಿ ಸರ್ಕಾರ ವಿಧಾನಸಭೆಯು ಏಕರೂಪ ನಾಗರಿಕ ಸಂಹಿತೆಯನ್ನು ಅಂಗಿಕರಿಸಿದೆ. ಇದನ್ನೂ ಓದಿ: ಸುಣ್ಣ ಬಣ್ಣ ಬಳಿದು ಮನೆ ಸ್ವಚ್ಛ – ಈ ಬಾರಿಯೂ ಅಮೇಠಿಯಿಂದ ರಾಹುಲ್‌ ಸ್ಪರ್ಧೆ?

uniform civil code uttarakhand

ಪೌರತ್ವ ತಿದ್ದುಪಡಿ ಮಸೂದೆ ಅಂಗೀಕಾರ:
ಪೌರತ್ವ ತಿದ್ದುಪಡಿ ಮಸೂದೆಯನ್ನು (CAA) 2019ರ ಡಿಸೆಂಬರ್ 11 ರಂದು ಅಂಗೀಕರಿಸಲಾಗಿದ್ದರೂ ಈ ವರ್ಷದ ಮಾರ್ಚ್‌ನಲ್ಲಿ ಗೃಹ ಸಚಿವಾಲಯ ನೋಟಿಫಿಕೇಶನ್‌ ಹೊರಡಿಸಿದೆ. ಈ ಕಾಯ್ದೆಯ ಪ್ರಕಾರ ಅಫ್ಘಾನಿಸ್ತಾನ, ಬಾಂಗ್ಲಾದೇಶ ಮತ್ತು ಪಾಕಿಸ್ತಾನದಿಂದ 2014ರ ಡಿಸೆಂಬರ್‌ 31ರ ಒಳಗಡೆ ಭಾರತಕ್ಕೆ ಆಗಮಿಸಿದ ಹಿಂದೂ, ಸಿಖ್, ಬೌದ್ಧ, ಜೈನ್, ಪಾರ್ಸಿ, ಕ್ರೈಸ್ತರಿಗೆ ಪೌರತ್ವ ನೀಡಲಾಗುತ್ತದೆ.

ಚುನಾವಣೆ ಸಮಯದಲ್ಲಿ ಹಲವು ಭರವಸೆಗಳನ್ನು ಬಿಜೆಪಿ ನೀಡಿತ್ತು. ಈ ಪೈಕಿ ಜನರ ಬಾಯಲ್ಲಿ ಹೆಚ್ಚು ಚರ್ಚೆಯಾಗಿ ಈಡೇರದ ಕೆಲ ಭರವಸೆಗಳನ್ನು ಇಲ್ಲಿ ನೀಡಲಾಗಿದೆ. ಭರವಸೆ ಈಡೇರಿಸುವ ನಿಟ್ಟಿನಲ್ಲಿ ಸರ್ಕಾರ ಏನು ಕ್ರಮ ಕೈಗೊಂಡಿದೆ ಮತ್ತು ಅದು ಎಲ್ಲಿಯವರೆಗೆ ಬಂದಿದೆ ಎಂಬುದರ ಬಗ್ಗೆ ವಿವರಣೆ ನೀಡಲಾಗಿದೆ.

2 ಕೋಟಿ ಉದ್ಯೋಗ:
ಪ್ರತಿ ವರ್ಷ 2 ಕೋಟಿ ಉದ್ಯೋಗವನ್ನು (Job) ನಾವು ನೀಡುತ್ತೇವೆ ಎಂದು ಬಿಜೆಪಿ ಹೇಳಿತ್ತು. ಆದರೆ ಈ ಭರವಸೆ ಈಡೇರಿಸಿಲ್ಲ ಎಂದು ಹೇಳಿ ವಿಪಕ್ಷಗಳು ವಾಗ್ದಾಳಿ ನಡೆಸುತ್ತಿವೆ. ಆದರೆ ಸರ್ಕಾರ ಬೇರೆಯೇ ವಿಚಾರವನ್ನು ಮುಂದಿಟ್ಟಿದೆ. ವಿದೇಶಿ ಹೂಡಿಕೆಗಳು ಭಾರತಕ್ಕೆ ಬಂದಿವೆ. ಹೂಡಿಕೆಯಿಂದಾಗಿ ಉದ್ಯೋಗ ಸೃಷ್ಟಿಯಾಗಿದೆ ಮತ್ತು ಮುಂದೆ ಆಗಲಿದೆ. ವರ್ಷಕ್ಕೆ ಇಷ್ಟು ಪ್ರಮಾಣದ ಉದ್ಯೋಗ ನೀಡಿದೆ ಎಂದು ಪತ್ತೆ ಹಚ್ಚುವುದು ಕಷ್ಟ. ಕೆಲವು ಕಂಪನಿಗೆ ಸೇರಿದರೆ ಕೆಲವರು ಸಂತ ಉದ್ಯಮ ಮಾಡುತ್ತಿದ್ದಾರೆ. ನೌಕರರ ಭವಿಷ್ಯ ನಿಧಿಯಲ್ಲಿ (EPF) 2023-24ರ ಹಣಕಾಸು ವರ್ಷದಲ್ಲಿ1.65 ಕೋಟಿ ಹೊಸ ಸಬ್‌ಸ್ಕ್ರೈಬರ್‌ ಆಗಿದ್ದಾರೆ ಎಂಬ ವರದಿ ಪ್ರಕಟವಾಗಿದೆ.

despite good price for paddy Raichuru farmers are disappointed 1

ರೈತರ ಆದಾಯ ದುಪ್ಪಟ್ಟು:
ರೈತರ ಆದಾಯವನ್ನು ದುಪ್ಪಟ್ಟು (Farmers Income Double) ಮಾಡಲಾಗುವುದು ಸರ್ಕಾರ ಹೇಳಿತ್ತು. ಈ ನಿಟ್ಟಿನಲ್ಲಿ ಕೃಷಿ ಕಾಯ್ದೆಯನ್ನು ಸರ್ಕಾರ ಜಾರಿಗೆ ತಂದಿತ್ತು. ಈ ಕಾಯ್ದೆಗೆ ಭಾರೀ ವಿರೋಧ ವ್ಯಕ್ತವಾದ ಬೆನ್ನಲ್ಲೇ ಈ ಕಾಯ್ದೆಯನ್ನು ಹಿಂದಕ್ಕೆ ತೆಗೆದುಕೊಂಡಿತ್ತು. ಮಧ್ಯವರ್ತಿಗಳಿಂದ ರೈತರಿಗೆ ಆಗುತ್ತಿರುವ ಅನ್ಯಾಯವನ್ನು ಸರಿಪಡಿಸಲು ಈ ಕಾಯ್ದೆಯನ್ನು ತರಲಾಗಿದೆ ಎಂದು ಸರ್ಕಾರ ಸಮರ್ಥಿಸಿಕೊಂಡಿತ್ತು.

100 ಸ್ಮಾರ್ಟ್‌ ಸಿಟಿ:
ರಾಜ್ಯಗಳಲ್ಲಿರುವ ಪ್ರಮುಖ ನಗರಗಳನ್ನು ಸ್ಮಾರ್ಟ್‌ ಸಿಟಿ (Smart City) ಯೋಜನೆ ಅಡಿ ಅಭಿವೃದ್ಧಿ ಪಡಿಸಲಾಗುವುದು ಎಂದು ಸರ್ಕಾರ ಹೇಳಿತ್ತು. ಆದರೆ ಈ ಯೋಜನೆ ನಡೆಯುತ್ತಲೇ ಇದೆ. ಈ ಯೋಜನೆ ಕೇಂದ್ರದ್ದೆ ಆದರೂ ಜ್ಯ ಸರ್ಕಾರದ ಸಹಯೋಗದಲ್ಲಿ ನಡೆಯುವ ಯೋಜನೆ ಆಗಿದ್ದು ಎರಡು ಕಡೆಯ ಸಹಕಾರ ಇದ್ದರೆ ಮಾತ್ರ ಮುಂದೆ ಪೂರ್ಣಗೊಳ್ಳಬಹುದು.

smart city

ಕಪ್ಪುಹಣ ವಾಪಸ್‌:
2014ರ ಲೋಕಸಭಾ ಚುನಾವಣೆಯ ಸಮಯದಲ್ಲಿ ವಿದೇಶದಲ್ಲಿರುವ ಕಪ್ಪು ಹಣವನ್ನು (Black Money) ಭಾರತಕ್ಕೆ ತರಲಾಗುವುದು ಮತ್ತು ಭ್ರಷ್ಟಾಚಾರಿಗಳ ವಿರುದ್ಧ ಸಮರ ಸರಲಾಗುವುದು ಎಂದು ಮೋದಿ ಭರವಸೆ ನೀಡಿದ್ದರು. ಪ್ರತಿ ಚುನಾವಣೆಯಲ್ಲಿ ವಿರೋಧ ಪಕ್ಷಗಳು ಈ ವಿಷಯವನ್ನು ಇಟ್ಟುಕೊಂಡು ಪ್ರಶ್ನಿಸುತ್ತಿವೆ.

ಇಲ್ಲಿಯವರೆಗೆ ವಿದೇಶದಿಂದ ಎಷ್ಟು ಕೋಟಿ ಕಪ್ಪುಹಣ ಬಂದಿದೆ ಎಂಬುದಕ್ಕೆ ಸರ್ಕಾರದಿಂದ ಸರಿಯಾದ ಉತ್ತರ ಬಂದಿಲ್ಲ. ಆದರೆ ಪ್ರಧಾನಿ ಮೋದಿ ಮಾಧ್ಯಮಕ್ಕೆ ನೀಡಿದ ಸಂದರ್ಶನದಲ್ಲಿ ಯುಪಿಎ ಅವಧಿಯಲ್ಲಿ ಜಾರಿ ನಿರ್ದೇಶನಾಲಯ 35 ಲಕ್ಷ ರೂ. ಕಪ್ಪು ಹಣವನ್ನು ಜಪ್ತಿ ಮಾಡಿದ್ದರೆ 2014ರ ನಂತರ ನಮ್ಮ ಅವಧಿಯಲ್ಲಿ 2,200 ಕೋಟಿ ರೂ. ಹಣವನ್ನು ಜಪ್ತಿ ಮಾಡಿದೆ ಎಂದು ಹೇಳಿದ್ದರು.

ಸ್ವಿಜರ್‌ಲೆಂಡ್‌ನಲ್ಲಿರುವ ಸ್ವಿಸ್‌ ಬ್ಯಾಂಕ್‌ನಲ್ಲಿ ಭಾರತೀಯರ ಬಂಡವಾಳದ ಪ್ರಮಾಣ 2021ಕ್ಕೆ ಹೋಲಿಸಿದರೆ ಶೇ.11ರಷ್ಟುಕುಸಿತ ಕಂಡಿದ್ದು, ಪ್ರಸ್ತುತ 30 ಸಾವಿರ ಕೋಟಿ ರೂ.ಗೆ ಇಳಿಕೆಯಾಗಿದೆ 2023ರಲ್ಲಿ ಸ್ವಿಸ್‌ ಬ್ಯಾಂಕ್‌ ಹೇಳಿತ್ತು.

modi bullet train

ಬುಲೆಟ್‌ ರೈಲು:
ಅಹಮದಾಬಾದ್‌-ಮುಂಬೈ ಮಧ್ಯೆ 2023ಕ್ಕೆ ಬುಲೆಟ್‌ ರೈಲು (Bullet Rail) ಭಾರತದಲ್ಲಿ ಸಂಚರಿಸಲಿದೆ ಎಂದು ಮೋದಿ ಹೇಳಿದ್ದರು. ಈಗ ಈ ಯೋಜನೆಯ ಡೆಡ್‌ಲೈನ್‌ ಮುಂದಕ್ಕೆ ಹೋಗಿದೆ. ಆರಂಭದಲ್ಲಿ ಭೂಸ್ವಾಧೀನ ವಿಳಂಬವಾಗಿತ್ತು. ನಂತರ ಮಹಾರಾಷ್ಟ್ರದಲ್ಲಿ ಮಹಾ ವಿಕಾಸ ಅಘಾಡಿ ಸರ್ಕಾರ ಅಸ್ವಿತ್ವಕ್ಕೆ ಬಂದಿತ್ತು. ಬುಲೆಟ್‌ ರೈಲು ಯೋಜನೆಗೆ ಎನ್‌ಸಿಪಿ ವಿರೋಧ ವ್ಯಕ್ತಪಡಿಸಿತ್ತು. ಕೋವಿಡ್‌ ಕಾರಣದಿಂದ ಮತ್ತಷ್ಟು ವಿಳಂಬವಾಯಿತು. ಮಹಾರಾಷ್ಟ್ರದಲ್ಲಿ ಹೊಸ ಸರ್ಕಾರ ಬಂದ ನಂತರ ಬುಲೆಟ್‌ ರೈಲು ಯೋಜನೆ ಕೆಲಸ ಚುರುಕು ಪಡೆದಿದೆ.

TAGGED:bjpcongressLok Sabha electionnarendra modiಕಾಂಗ್ರೆಸ್ನರೇಂದ್ರ ಮೋದಿಪ್ರಣಾಳಿಕೆಬಿಜೆಪಿಭಾರತಲೋಕಸಭಾ ಚುನಾವಣೆ
Share This Article
Facebook Whatsapp Whatsapp Telegram

Cinema news

Mobile video recording
ಬೆಂಗಳೂರು | ನಟಿಯ ಖಾಸಗಿ ವಿಡಿಯೋ ಮಾಡಿ ಬ್ಲ್ಯಾಕ್‌ಮೇಲ್‌ – ಸ್ನೇಹಿತೆಗೆ ಕಳಿಸಿ ಹಣಕ್ಕೆ ಡಿಮ್ಯಾಂಡ್‌
Cinema Crime Karnataka Latest Sandalwood Top Stories
JC Movie Surya Prakyath
ಫ್ಯಾನ್ಸ್ ಮಧ್ಯೆ ಲಾಂಗ್ ಹಿಡಿದು ಪೋಸ್ – ಜೆಸಿ ಸಿನಿಮಾ ನಟನ ವಿರುದ್ಧ ಸುಮೋಟೊ ಕೇಸ್ ದಾಖಲು
Bengaluru City Cinema Districts Karnataka Latest Sandalwood Top Stories
rohit shetty 1 e1573969461253
ರೋಹಿತ್ ಶೆಟ್ಟಿ ಮನೆ ಮೇಲೆ ಫೈರಿಂಗ್ – ಮತ್ತೆ ಆರು ಜನ ಅರೆಸ್ಟ್, ಈವರೆಗೂ ಒಟ್ಟು 11 ಮಂದಿ ಬಂಧನ
Cinema Crime Latest National Top Stories
yash mother pushpa compound demolition 1
ಯಶ್‌ ತಾಯಿ ಸೈಟ್‌ ವಿವಾದ – ಏಕಪಕ್ಷೀಯ ತೀರ್ಪಿಗೆ ಕೋರ್ಟ್ ತಾತ್ಕಾಲಿಕ ತಡೆ
Cinema Court Districts Hassan Karnataka Latest States Top Stories

You Might Also Like

araga jnanendra
Latest

ಬಜೆಟ್ ಸಮಯದಲ್ಲಿ ಕಾಂಗ್ರೆಸ್ ಬಣ ಬಡಿದಾಟ ಜಾಸ್ತಿ ಆಗಲಿದೆ – ಆರಗ ಜ್ಞಾನೇಂದ್ರ

Public TV
By Public TV
10 minutes ago
Doddaballapura Police
Chikkaballapur

ಪ್ರತಿಷ್ಟಿತ ವಿವಿ ವಿದ್ಯಾರ್ಥಿನಿ ಹಾಸ್ಟೆಲ್‌ನ 14ನೇ ಮಹಡಿಯಿಂದ ಬಿದ್ದು ಸಾವು!

Public TV
By Public TV
24 minutes ago
indore murder
Crime

ಗರ್ಲ್‌ಫ್ರೆಂಡ್‌ ಕೊಂದು ಆತ್ಮದ ವಶೀಕರಣಕ್ಕೆ ಯತ್ನ – ಮಧ್ಯಪ್ರದೇಶದಲ್ಲೊಂದು ವಿಚಿತ್ರ ಘಟನೆ

Public TV
By Public TV
28 minutes ago
Stone Pelting Chikkamagaluru 1
Chikkamagaluru

ಚಿಕ್ಕಮಗಳೂರು | ಅನ್ಯಕೋಮಿನ ಯುವಕರಿಂದ ಹಿಂದೂಗಳ ಮನೆ ಮೇಲೆ ಕಲ್ಲು ತೂರಾಟ ಆರೋಪ

Public TV
By Public TV
29 minutes ago
Chhattisgarh Couple
Crime

ಅಪಘಾತದಲ್ಲಿ ಪುತ್ರ ಸಾವು – ಮನನೊಂದು ದಂಪತಿ ನೇಣಿಗೆ ಶರಣು

Public TV
By Public TV
2 hours ago
son kills father over property disputes in bengaluru
Bengaluru City

ಆಸ್ತಿಗಾಗಿ ವೃದ್ಧ ತಂದೆಯನ್ನು ಇರಿದು ಕೊಂದ ಪಾಪಿ ಮಗ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?