ಬೆಂಗಳೂರು: ಅಧಿಕೃತವಾಗಿ 2-3 ದಿನಗಳಲ್ಲಿ ನಾನು ರಾಜಕೀಯಕ್ಕೆ ಸೇರ್ಪಡೆ ಆಗುತ್ತೇನೆ ಎಂದು ಡಾ.ಮಂಜುನಾಥ್ (Dr. Manjunath) ಹೇಳಿದ್ದಾರೆ.
ಡಾಲರ್ಸ್ ಕಾಲೋನಿ ನಿವಾಸದಲ್ಲಿ ಯಡಿಯೂರಪ್ಪನವರನ್ನು (BS Yediyurappa) ಭೇಟಿ ಮಾಡಿದ ಬಳಿಕ ಮಧ್ಯಮಗಳ ಜೊತೆ ಮಾತನಾಡಿದ ಅವರು, ಮೋದಿ ಸರ್ಕಾರ (PM Narendra Modi Government) ಸಾಧಕರಿಗೆ, ಪರಿಣಿತರಿಗೆ ಪ್ರೊತ್ಸಾಹ ಕೊಡುತ್ತಿದ್ದಾರೆ. ಹೀಗಾಗಿ ನಾನು ಲೋಕಸಭೆ ಚುನಾವಣೆ ಎದುರಿಸುತ್ತಿದ್ದೇನೆ ಎಂದು ತಿಳಿಸಿದರು.
ಹೃದ್ರೋಗ ಕ್ಷೇತ್ರದಲ್ಲಿ ಕಾಂತ್ರಿಕಾರಕ ಕೆಲಸ ಮಾಡಿದ್ದೇವೆ. ಮೋದಿ ಅವರಿಗೆ ಹ್ರಾಟ್ರಿಕ್ ಎಲೆಕ್ಷನ್ ನಡೆಯುತ್ತಿದೆ. ಅವರ ನಾಯಕತ್ವದಲ್ಲಿ ದೇಶಕ್ಕೆ ಅಂತಾರಾಷ್ಟ್ರೀಯ ಮಟ್ಟದಲ್ಲಿ ಹೆಸರು ಮಾಡಿದೆ. ಯಡಿಯೂರಪ್ಪ ಅವರ ಜೊತೆ ಮಾತಾಡಿದ್ದೇನೆ. ರಾಜಕೀಯದಲ್ಲೂ ನಾನು ರಾಜಕೀಯ ಮಾಡುವುದಿಲ್ಲ ಎಂದು ತಿಳಿಸಿದರು.
ಯಡಿಯೂರಪ್ಪ ಮಾತನಾಡಿ, ಇಡೀ ನಾಡಿಗೆ ಗೊತ್ತಿರುವಂತೆ ಡಾ ಮಂಜುನಾಥ್ ಲಕ್ಷಾಂತರ ಜನರ ಪ್ರಾಣ ಉಳಿಸಿದ್ಧಾರೆ. ಅವರು ಬಿಜೆಪಿ ಸೇರ್ಪಡೆ ಆಗಲಿದ್ದು, ಇಂತಹವರನ್ನ ಅವಿರೋಧವಾಗಿ ಗೆಲ್ಲಿಸಿಕೊಡಬೇಕಿತ್ತು. ಆದರೆ ಚುನಾವಣಾ ರಾಜಕೀಯ ಅನಿವಾರ್ಯ. ಅವರ ಪಕ್ಷ ಸೇರ್ಪಡೆ ಬಗ್ಗೆ ಮೋದಿ ಅವರಿಗೂ ಮಾಹಿತಿ ನೀಡಿದ್ದೆವು. ಅವರು ಕೂಡ ಬಹಳ ಸಂತೋಷಪಟ್ಟರು ಎಂದು ತಿಳಿಸಿದರು.