Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಪಾಕ್ ಪರ ಘೋಷಣೆ ಕೂಗುವವರನ್ನು ರಾಜ್ಯದ ಜನತೆ ಕ್ಷಮಿಸುವುದಿಲ್ಲ: ಜೆ.ಪಿ.ನಡ್ಡಾ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Belgaum | ಪಾಕ್ ಪರ ಘೋಷಣೆ ಕೂಗುವವರನ್ನು ರಾಜ್ಯದ ಜನತೆ ಕ್ಷಮಿಸುವುದಿಲ್ಲ: ಜೆ.ಪಿ.ನಡ್ಡಾ

Belgaum

ಪಾಕ್ ಪರ ಘೋಷಣೆ ಕೂಗುವವರನ್ನು ರಾಜ್ಯದ ಜನತೆ ಕ್ಷಮಿಸುವುದಿಲ್ಲ: ಜೆ.ಪಿ.ನಡ್ಡಾ

Public TV
Last updated: March 5, 2024 3:39 pm
Public TV
Share
3 Min Read
BY vijayendra jp nadda 2
SHARE

ಬೆಳಗಾವಿ: ಅಯೋಧ್ಯೆಯಲ್ಲಿ ಶ್ರೀರಾಮಮಂದಿರ (Ram Mandir) ನಿರ್ಮಾಣ, ಜಮ್ಮು- ಕಾಶ್ಮೀರಕ್ಕೆ (Jammu Kashmir) ಸಂಬಂಧಿಸಿದ 370ನೇ ವಿಧಿ ರದ್ದು ಸೇರಿದಂತೆ ವಿವಿಧ ಭರವಸೆಗಳನ್ನು ಈಡೇರಿಸಿ ಬಿಜೆಪಿ ನುಡಿದಂತೆ ನಡೆದಿದೆ. ದೂರದೃಷ್ಟಿಯಿರುವ ಬಿಜೆಪಿಯನ್ನು (BJP) ಜನತೆ ಬೆಂಬಲಿಸುವ ವಿಶ್ವಾಸವಿದೆ ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ (JP Nadda) ಅವರು ತಿಳಿಸಿದರು.

ಚಿಕ್ಕೋಡಿಯಲ್ಲಿ ಇಂದು ಬಿಜೆಪಿ ಬೂತ್ ಸಮಾವೇಶದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಪಾಕಿಸ್ತಾನದ (Pakistan) ಪರ ಇರುವವರನ್ನು ಭಾರತಮಾತೆ ಎಂದೂ ಕ್ಷಮಿಸುವುದಿಲ್ಲ ಎಂದರು. ಪಾಕಿಸ್ತಾನ ಜಿಂದಾಬಾದ್ ಘೋಷಣೆ ಕೂಗುವ ರಾಜ್ಯಸಭಾ ಸದಸ್ಯರಿರುವ ಕಾಂಗ್ರೆಸ್ (Congress) ಪಕ್ಷದವರನ್ನು ರಾಜ್ಯದ ಜನತೆ ಬೆಂಬಲಿಸುವುದಿಲ್ಲ ಎಂದು ವಿಶ್ವಾಸ ವ್ಯಕ್ತಪಡಿಸಿದರು. ನಮ್ಮ ಸರ್ಕಾರ ಇದ್ದಾಗ ಶಾಂತ ಪರಿಸ್ಥಿತಿ ನೆಲೆಸಿತ್ತು. ಈಗ ಬಾಂಬ್ ಸ್ಫೋಟಿಸುತ್ತಿದೆ ಎಂದು ಅವರು ಗಮನ ಸೆಳೆದರು.

ಬಡವರು, ಮಹಿಳೆಯರು (ನಾರಿಶಕ್ತಿ), ರೈತರು, ಯುವಜನತೆಯ ಆಶಯಗಳನ್ನು ಈಡೇರಿಸಿದ ಪಕ್ಷವಾಗಿ ಬಿಜೆಪಿ ಬೆಳೆದಿದೆ. ಬಿಜೆಪಿ ಸಿದ್ಧಾಂತ ಆಧರಿಸಿದ ಪಕ್ಷ. ಮುಸ್ಲಿಮ್ ಮಹಿಳೆಯರಿಗೆ ಅನ್ಯಾಯ ಆಗಲು ಬಿಡುವುದಿಲ್ಲ ಎಂದು ನಾವು ಹೇಳಿದ್ದೆವು. ತ್ರಿವಳಿ ತಲಾಖ್ ಪದ್ಧತಿಯನ್ನು ನಾವು ರದ್ದು ಮಾಡಿದ್ದೇವೆ. ಆದರೆ, ಕಾಂಗ್ರೆಸ್ ಪಕ್ಷ ತುಷ್ಠೀಕರಣ ಕಾರಣಕ್ಕಾಗಿ ಈ ಕಡೆ ಗಮನ ಹರಿಸಿರಲಿಲ್ಲ ಎಂದು ವಿವರಿಸಿದರು.

BY vijayendra JP Nadda

ವಿಶ್ವದ ಅತ್ಯಂತ ದೊಡ್ಡ ರಾಜಕೀಯ ಪಕ್ಷ ನಮ್ಮದು. ಅಣ್ಣಾಸಾಹೇಬ್ ಜೊಲ್ಲೆಯವರು ಸೇರಿ 303 ಸಂಸದರು ನಮ್ಮ ಪಕ್ಷದವರು ಲೋಕಸಭೆಯಲ್ಲಿದ್ದಾರೆ. ನಮ್ಮ ಯುವಜನರಿಗೆ ತರಬೇತಿ ನೀಡಿ ಪ್ರಧಾನಿ ಮೋದಿಯವರು (PM Narendra Modi) ಆತ್ಮನಿರ್ಭರರನ್ನಾಗಿ ಮಾಡಿದ್ದಾರೆ ಎಂದು ತಿಳಿಸಿದರು.  ಇದನ್ನೂ ಓದಿ: ಮಮತಾ ಸವಾಲು ಸ್ವೀಕಾರ – ಕೋಲ್ಕತ್ತಾ ಹೈಕೋರ್ಟ್ ಜಡ್ಜ್ ರಾಜೀನಾಮೆ, ಮಾ.7 ರಂದು ಬಿಜೆಪಿ ಸೇರ್ಪಡೆ

ವಿಕಸಿತ ಭಾರತ ಸಂಕಲ್ಪದಲ್ಲಿ ತಮ್ಮನ್ನು ತೊಡಗಿಕೊಳ್ಳುವಂತೆ ಮೋದಿಜೀ ಅವರು ಯುವಜನರಿಗೆ ಪ್ರೋತ್ಸಾಹ ಕೊಟ್ಟಿದ್ದಾರೆ ಎಂದ ಅವರು, ಕಾಂಗ್ರೆಸ್ ಭ್ರಷ್ಟಾಚಾರ, ಕಮಿಷನ್, ಕೌಟುಂಬಿಕವಾದದ ಪಕ್ಷ. 10 ವರ್ಷಗಳ ಹಿಂದೆ ಭಾರತವನ್ನು ಅಸಮರ್ಪಕ ನೀತಿಯುಳ್ಳ ದೇಶವಾಗಿ ನೋಡಲಾಗುತ್ತಿತ್ತು. ಸಮರ್ಥ ನಿರ್ಧಾರ ತೆಗೆದುಕೊಳ್ಳಲಾಗದ ದೇಶ ಎಂದೇ ಭಾರತವನ್ನು ಬಿಂಬಿಸುವ ಸ್ಥಿತಿ ಹಿಂದೆ ಇತ್ತು. 2014ರ ಬಳಿಕ ಮೋದಿಯವರ ನೇತೃತ್ವದಲ್ಲಿ ಭಾರತವು ಆತ್ಮವಿಶ್ವಾಸ ಹೊಂದಿದ ವಿಶ್ವಕ್ಕೇ ದೂರದೃಷ್ಟಿ ಕೊಡುವ ದೇಶವಾಗಿ ಬೆಳೆದುನಿಂತಿದೆ ಎಂದು ನುಡಿದರು.

ಸ್ವಾವಲಂಬಿ, ವಿಶ್ವಾಸಯುಕ್ತ ಜನರಿರುವ ದೇಶವನ್ನಾಗಿ ಭಾರತವನ್ನು ಮೋದಿಯವರು ಪರಿವರ್ತಿಸಿದ್ದಾರೆ. ಆತ್ಮನಿರ್ಭರ ದೇಶವಾಗಿ ಅದು ಬದಲಾಗುತ್ತಿದೆ. ಪ್ರಧಾನಿಯವರು ದೇಶವನ್ನು ಆತ್ಮವಿಶ್ವಾಸವುಳ್ಳ ರಾಷ್ಟ್ರವಾಗಿ ಪರಿವರ್ತಿಸಿದ್ದನ್ನು ನಾವು ಜನತೆಯ ಮುಂದಿಡಬೇಕು ಎಂದು ಮನವಿ ಮಾಡಿದರು.

BY vijayendra

ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ (BY vijayendra) ಅವರು ಮಾತನಾಡಿ, ಲೋಕಸಭಾ ಚುನಾವಣೆಗೆ ಕೇವಲ 50-60 ದಿನಗಳು ಮಾತ್ರ ಬಾಕಿ ಇದೆ. ಬಿಜೆಪಿ- ಜೆಡಿಎಸ್ ಒಂದಾಗಿ ರಾಜ್ಯದ ಎಲ್ಲ 28 ಕ್ಷೇತ್ರಗಳನ್ನು ಗೆಲ್ಲಲು ಶಪಥ ಮಾಡಿ ಹೊರಟಿದ್ದೇನೆ. ಚಿಕ್ಕೋಡಿ ಲೋಕಸಭಾ ಕ್ಷೇತ್ರದಲ್ಲೂ ದೊಡ್ಡ ಅಂತರದಲ್ಲಿ ಬಿಜೆಪಿ ಗೆಲ್ಲಿಸಲು ಮನವಿ ಮಾಡಿದರು. 28ಕ್ಕೆ 28 ಕ್ಷೇತ್ರಗಳನ್ನು ಗೆಲ್ಲಿಸಿಕೊಡುವ ಭರವಸೆಯನ್ನು ನಡ್ಡಾಜೀ ಅವರಿಗೆ ನೀಡುವುದಾಗಿ ವಿಶ್ವಾಸದಿಂದ ನುಡಿದರು.

ರೈತರ ಸಂಕಷ್ಟಕ್ಕೆ ರಾಜ್ಯ ಸರಕಾರ ಸ್ಪಂದಿಸುತ್ತಿಲ್ಲ. ಆದರೆ, ಅಲ್ಪಸಂಖ್ಯಾತರ ಅಭಿವೃದ್ಧಿ ಕಾರ್ಯಕ್ಕೆ ಮುಖ್ಯಮಂತ್ರಿಗಳು 10 ಸಾವಿರ ಕೋಟಿ ರೂ. ಅನುದಾನವನ್ನು ಪ್ರಕಟಿಸಿದ್ದಾರೆ. ರೈತರಿಗೆ ಪರಿಹಾರ ನೀಡಲು ಕಾಂಗ್ರೆಸ್ ಸರಕಾರದ ಬಳಿ ಹಣ ಇಲ್ಲ. ಆದರೆ, ಅಲ್ಪಸಂಖ್ಯಾತರ ತುಷ್ಟೀಕರಣಕ್ಕೆ ಅದು ಮುಂದಾಗಿದೆ ಎಂದು ಟೀಕಿಸಿದರು. ಇದನ್ನೂ ಓದಿ: ಜೆಡಿಎಸ್ ಪಕ್ಷ ಯಾವುದೇ ಕಾರಣಕ್ಕೂ ವಿಲೀನ ಇಲ್ಲ: ಸಿದ್ದರಾಮಯ್ಯಗೆ ದೇವೇಗೌಡ ತಿರುಗೇಟು

ಹಿಂದೂಗಳು ದಾನವಾಗಿ ಕೊಟ್ಟ 2 ಎಕರೆ ಜಾಗದಲ್ಲಿ ಆರಂಭಿಸಿದ್ದ ಪಶು ಆಸ್ಪತ್ರೆಯನ್ನು ಜಮೀರ್ ಅಹ್ಮದ್ ಅವರು ಕಿತ್ತುಕೊಂಡು ಅಲ್ಪಸಂಖ್ಯಾತರಿಗೆ ಕೊಡುತ್ತಿದ್ದಾರೆ. ಅಲ್ಪಸಂಖ್ಯಾತರ ಓಲೈಕೆ ರಾಜಕೀಯಕ್ಕೆ ತಕ್ಕ ಉತ್ತರವನ್ನು ಮುಂದಿನ ಲೋಕಸಭಾ ಚುನಾವಣೆಯಲ್ಲಿ ನಾವು ಕೊಡಬೇಕಿದೆ ಎಂದು ಮನವಿ ಮಾಡಿದರು.

ರಾಜ್ಯಸಭಾ ಚುನಾವಣೆಯ ಬಳಿಕ ಗೆದ್ದ ಕಾಂಗ್ರೆಸ್ ಅಭ್ಯರ್ಥಿ ನಾಸೀರ್ ಹುಸೇನ್ ಬೆಂಬಲಿಗರು ವಿಧಾನಸೌಧದಲ್ಲಿ ಪಾಕಿಸ್ತಾನ್ ಜಿಂದಾಬಾದ್ ಘೋಷಣೆ ಕೂಗಿದ್ದಾರೆ. ಬಿಜೆಪಿ ಹೋರಾಟದ ಬಳಿಕ ನಿನ್ನೆ ಮೂವರನ್ನು ಬಂಧಿಸಿದ್ದಾರೆ. ಕಾಂಗ್ರೆಸ್ ಸರಕಾರ, ಮುಖ್ಯಮಂತ್ರಿಗಳಿಗೆ ಕಿಂಚಿತ್ತಾದರೂ ದೇಶಪ್ರೇಮ ಇದ್ದರೆ ಪಾಕಿಸ್ತಾನ್ ಜಿಂದಾಬಾದ್ ಘೋಷಣೆ ಕೂಗಿದವರಿಗೆ ಶಕ್ತಿ ನೀಡಿದ ರಾಜ್ಯಸಭಾ ಎಂ.ಪಿ. ನಾಸೀರ್ ಹುಸೇನ್ ವಿರುದ್ಧ ಕೂಡ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.

TAGGED:bjpchikkodicongressJP Naddapakistanಕಾಂಗ್ರೆಸ್ಚಿಕ್ಕೋಡಿಜೆಪಿ ನಡ್ಡಾಪಾಕಿಸ್ತಾನಬಿಜೆಪಿ
Share This Article
Facebook Whatsapp Whatsapp Telegram

Cinema news

Rashmika Mandanna
ಕೊಡಗಿನಲ್ಲಿ ರಶ್ಮಿಕಾ – ವಿಜಯ್‌ ಡಿನ್ನರ್‌ ಪಾರ್ಟಿ; ಕೊಡವ ಶೈಲಿಯ ಭರ್ಜರಿ ಆತಿಥ್ಯ!
Cinema Kodagu Latest Main Post Sandalwood South cinema
Rashmika Mandanna Father
ರಶ್ಮಿಕಾಗೆ ಮದುವೆಯ ಉಡುಗೊರೆಯಾಗಿ ತಮ್ಮ ಮನೆಯನ್ನೇ ನೀಡಿದ ತಂದೆ ಮದನ್‌ ಮಂದಣ್ಣ
Cinema Districts Karnataka Kodagu Latest South cinema Top Stories
DARSHAN RENUKASWAMY
ರೇಣುಕಾಸ್ವಾಮಿ ಕೊಲೆ ಕೇಸ್‌ ಆಧರಿತ ಸಿನಿಮಾ ‘ಬಾಸ್’‌ ರಿಲೀಸ್‌ಗೆ ಕೋರ್ಟ್‌ ತಡೆಯಾಜ್ಞೆ
Bengaluru City Cinema Court Latest Sandalwood Top Stories
Tamil Actress Subashini
ಪತಿಯೊಂದಿಗೆ ವಿಡಿಯೋ ಕಾಲ್‌ನಲ್ಲಿರುವಾಗಲೇ ನೇಣಿಗೆ ಶರಣು – ತಮಿಳು ನಟಿ ಸುಭಾಷಿಣಿ ಆತ್ಮಹತ್ಯೆ
Cinema Latest Main Post South cinema

You Might Also Like

uranium.jpg
Latest

ಇರಾನ್‌ನ ಯುರೇನಿಯಂ ಮೇಲೆ ಟ್ರಂಪ್‌ ಕಣ್ಣಿಟ್ಟಿದ್ದೇಕೆ? – 32 ವರ್ಷಗಳ ಹಿಂದಿನ ʻಸಫೈರ್ʼ ಸೀಕ್ರೆಟ್ ಆಪರೇಷನ್ ರಿಪೀಟ್ ಆಗುತ್ತಾ?

Public TV
By Public TV
13 minutes ago
Bidar Food Poison
Bidar

ಫುಡ್ ಪಾಯಿಸನ್ ಆಗಿ 40ಕ್ಕೂ ಅಧಿಕ ಮಂದಿ ಅಸ್ವಸ್ಥ

Public TV
By Public TV
16 minutes ago
Manipur Home Bomb Attack
Crime

ಮಣಿಪುರದಲ್ಲಿ ಮನೆ ಮೇಲೆ ಬಾಂಬ್ ದಾಳಿ – ಇಬ್ಬರು ಮಕ್ಕಳು ದುರ್ಮರಣ, ತಾಯಿಗೆ ಗಾಯ

Public TV
By Public TV
21 minutes ago
DK Suresh
Bengaluru City

ಡಿಕೆಶಿ ಸಿಎಂ ಆಗಬೇಕೆಂಬ ಆಸೆಯಿದೆ, ಇವತ್ತೇ ಆಗ್ತಾರೆ ಅಂತ ಹೇಳಿದ್ನಾ?: ಡಿಕೆಸು ತಿರುಗೇಟು

Public TV
By Public TV
24 minutes ago
2nd PUC Exam
Bagalkot

ಏಪ್ರಿಲ್‌ 9ಕ್ಕೆ ದ್ವಿತೀಯ ಪಿಯುಸಿ ಪರೀಕ್ಷೆ-1 ಫಲಿತಾಂಶ ಪ್ರಕಟ

Public TV
By Public TV
36 minutes ago
Chikkamagaluru Suicide 2
Chikkamagaluru

ಶಿವಮೊಗ್ಗದಲ್ಲಿ ನರ್ಸ್ ಆಗಿದ್ದ ಕಾಫಿನಾಡ ಮಹಿಳೆ ಹೊಳೆಗೆ ಹಾರಿ ಆತ್ಮಹತ್ಯೆ

Public TV
By Public TV
48 minutes ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?