Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಮೋದಿಗೆ ಜನರ ಸಂಕಷ್ಟದ ಅರಿವಿಲ್ಲ: ಪ್ರಿಯಾಂಕಾ ಗಾಂಧಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Chitradurga | ಮೋದಿಗೆ ಜನರ ಸಂಕಷ್ಟದ ಅರಿವಿಲ್ಲ: ಪ್ರಿಯಾಂಕಾ ಗಾಂಧಿ

Chitradurga

ಮೋದಿಗೆ ಜನರ ಸಂಕಷ್ಟದ ಅರಿವಿಲ್ಲ: ಪ್ರಿಯಾಂಕಾ ಗಾಂಧಿ

Public TV
Last updated: April 23, 2024 11:06 pm
Public TV
Share
3 Min Read
Priyanka Gandhi 2
SHARE

– ಸುಪ್ರೀಂ ಹೇಳಿದ ಮೇಲೆ ಮೋದಿ ಚಂದಾ ವಸೂಲಿ ಬಯಲಾಗಿದೆ

ಚಿತ್ರದುರ್ಗ: ಪ್ರಧಾನಿ ಮೋದಿಗೆ (Narendra Modi) ಜನರ ಸಂಕಷ್ಟಗಳ ಬಗ್ಗೆ ಅರಿವಿಲ್ಲ. ದೇಶದ ಪ್ರಧಾನಿ ಜನರ ಮಧ್ಯೆ ಬಂದು ಸಂಕಷ್ಟ ಆಲಿಸುವ ಕಾಲವೊಂದಿತ್ತು. ಅಂತಹ ಪಿಎಂಗಳನ್ನು ದೇಶ ಕಂಡಿದೆ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ (Priyanka Gandhi) ಹೇಳಿದ್ದಾರೆ.

ಚಿತ್ರದುರ್ಗದಲ್ಲಿ ಕಾಂಗ್ರೆಸ್ (Congress) ಸಮಾವೇಶದಲ್ಲಿ ಮಾತನಾಡಿದ ಅವರು, ಹಿಂದೆ ಓರ್ವ ರೈತ ದೇಶದ ಪ್ರಧಾನಿ ಗಮನ ಸೆಳೆಯಬಹುದಿತ್ತು. ಆಗ ಆ ಪ್ರಧಾನಿ ರೈತನ ಕೆಲಸ ಮಾಡಿ ಕೊಡುವ ಭರವಸೆ ನೀಡುತ್ತಿದ್ದರು. ನೈತಿಕತೆ ಇರುವ ವ್ಯಕ್ತಿಯನ್ನು ಆಯ್ಕೆ ಮಾಡಬೇಕಿದೆ. ದೇಶದ ಉನ್ನತ ಸ್ಥಾನದಲ್ಲಿರುವವರು ನಾಟಕ ಆಡ್ತಿದ್ದಾರೆ ಎಂದು ಅವರು ಪ್ರಧಾನಿ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ.

ಮೋದಿ ಸ್ನೇಹಿತರಾದ ಇಬ್ಬರು ಬಂಡವಾಳಶಾಹಿಗಳ ಆಸ್ತಿ ದುಪ್ಪಟ್ಟಾಗಿದೆ. ಇದನ್ನೇ ದೇಶ ಮುಂದುವರೆದಿದೆ, ಜಗತ್ತಿನಲ್ಲೇ ಉನ್ನತಿಗೇರಿದೆ ಎಂದು ಬಿಜೆಪಿ ಹೇಳುತ್ತಿದೆ. ಕೇಂದ್ರ ಸರ್ಕಾರದಿಂದ ಯಾರಿಗಾದರು ಏನಾದರು ಸಿಕ್ಕಿದಿಯೇ? ಇವರ ಅವಧಿಯಲ್ಲಿ ಏಮ್ಸ್, ಐಎಟಿಗಳ ನಿರ್ಮಾಣ ಆಗಿದಿಯೇ? ಏನಾದರು ಅಭಿವೃದ್ಧಿ ಮಾಡಿ ಮತ ಕೇಳಿ, ಧರ್ಮದ ಆಧಾರದ ಮೇಲೆ ಮತ ಕೇಳುತ್ತಿದ್ದೀರಿ ಎಂದು ಬಿಜೆಪಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ.

Priyanka Gandhi 1

ಬಹಳ ದೂರದಿಂದ ನನ್ನ ಮಾತುಗಳನ್ನ ಕೇಳಲು ಬಂದಿದ್ದೀರಿ, ನನಗೆ ಇದು ಹೆಮ್ಮೆಯ ವಿಷಯ, ನನ್ನ ಅಜ್ಜಿ ಇಂದಿರಾಗಾಂಧಿ ಇದೇ ವೇದಿಕೆ ಮೇಲೆ ನಿಂತು ಮಾತನಾಡಿದ್ದರು. ನೀವೆಲ್ಲ ಕಷ್ಟ ಜೀವಿಗಳು, ಮಕ್ಕಳನ್ನು ದೊಡ್ಡವರನ್ನಾಗಿಸಿ, ಉತ್ತಮ ಭವಿಷ್ಯ ನಿರ್ಮಾಣ ಮಾಡುವವರು. ನಿಮ್ಮೆಲ್ಲರ ಕಷ್ಟ ಅರ್ಥವಾಗಲಿದೆ. ದೇಶವನ್ನು ಬಲಪಡಿಸುವ ಕೆಲಸ ಸಹ ನಿಮ್ಮದು ಎಂದಿದ್ದಾರೆ.

ಹೊಲದಲ್ಲಿ ಕೆಲಸ ಮಾಡಿ, ಅನ್ನ ನೀಡುವ ಅನ್ನದಾತರು ನೀವು, ಎಲ್ಲರ ಜೀವನ ಸಂಘರ್ಷಮಯವಾದದ್ದು. ಈ ದೇಶದ ಉಜ್ವಲ ಭವಿಷ್ಯಕ್ಕೆ ಎಲ್ಲರ ಕೊಡುಗೆ ಮುಖ್ಯ ಇಂದು ಎಲ್ಲರು ಕಷ್ಟಪಟ್ಟು ದೇಶಕಟ್ಟುವ ಬಗ್ಗೆ ನಾನು ಮಾತನಾಡುತ್ತೇನೆ. ಈ ದೇಶದ ಭವಿಷ್ಯದ ಬಗ್ಗೆ ನಮಗೆಲ್ಲ ಚಿಂತೆ ಇದೆ. ದೇಶದಲ್ಲಿ ಬೆಲೆ ಏರಿಕೆಯಿಂದ ಜನರಿಗೆ ತೀವ್ರ ಸಮಸ್ಯೆ ಎದುರಾಗಿದೆ. ದೇಶದ ವೈಭೋಗದ ಬಗ್ಗೆ ಮಾತನಾಡುವ ಮಾತು ಮಾಧ್ಯಮಗಳಲ್ಲಿ ಬರುತ್ತಿದೆ. ನಿರುದ್ಯೋಗ ವ್ಯಾಪಕವಾಗಿದೆ. 70 ಕೋಟಿ ಜನರು ನಿರುದ್ಯೋಗಿಗಳಾಗಿದ್ದಾರೆ ಎಂದು ಅವರು ಹೇಳಿದ್ದಾರೆ.

ದೇಶದಲ್ಲಿ 30 ಕೋಟಿ ಉದ್ಯೋಗ ಖಾಲಿ ಇದೆ. ಪ್ರಧಾನಿ ನೀಡಿದ ರೈತರ ಆದಾಯ ದುಪ್ಪಟ್ಟು ಮಾಡುವ ಭರವಸೆ ಈಡೇರಿಲ್ಲ. ಬೆಲೆ ಏರಿಕೆಯಿಂದ ಜೀವನ ದುಸ್ತರವಾಗಿದೆ. ಹಬ್ಬ ಹರಿದಿನಗಳಲ್ಲಿ ಸಂಭ್ರಮಿಸಲು ಸಂಕಷ್ಟ ಎದುರಿಸುವಂತಾಗಿದೆ. ಪೆಟ್ರೋಲ್, ಚಿನ್ನ ಸೇರಿದಂತೆ ಎಲ್ಲಾ ಬೆಲೆ ಗಗನಕ್ಕೇರಿದೆ. ಜನರ ಸಮಸ್ಯೆ ಮಿತಿಮೀರಿದೆ. ರೈತರಿಗೆ ಬೆಂಬಲ ಬೆಲೆ ಸಿಗುತ್ತಿಲ್ಲ. ಜಿಎಸ್‍ಟಿ ಬರೆ ಎಳೆದಿದೆ. ದೇಶದ ಎಲ್ಲಾ ಆಸ್ತಿಗಳು ಬಂಡವಾಳ ಶಾಹಿಗಳ ಪಾಲಾಗುತ್ತಿದೆ. ರೈತರ ಸಾಲ ಮನ್ನಾ ಮಾಡಲು ಸರ್ಕಾರಕ್ಕೆ ಆಗುತ್ತಿಲ್ಲ ಎಂದು ಅವರು ಕೇಂದ್ರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಮೋದಿ ಯಾರ್ಯಾರ ಬಳಿ ಚಂದಾ ವಸೂಲಿ ಮಾಡಿದ್ದಾರೆ ಎಂದು ಸುಪ್ರಿಂ ಕೋರ್ಟ್ ಹೇಳಿದ ಬಳಿಕ ಗೊತ್ತಾಗಿದೆ. ದಾಳಿಯಾದ ಕಂಪನಿಗಳು ಬಿಜೆಪಿಗೆ ಚಂದಾ ನೀಡಿವೆ. ಭ್ರಷ್ಟ ಕಂಪನಿಗಳು ಬಿಜೆಪಿಗೆ ಚಂದಾ ನೀಡಿವೆ. ಈ ಪಟ್ಟಿ ಹೊರಬಂದ ಬಳಿಕ ಬಿಜೆಪಿಯ ಬಣ್ಣ ಬಯಲಾಗಿದೆ. ಇನ್ನೂ ನೋಟ್ ಬ್ಯಾನ್ ಮಾಡಿ ಎಲ್ಲಾ ಕಪ್ಪು ಹಣ ತುರುವುದಾಗಿ ಹೇಳಿದ್ದರು. ಆಗ ಜನ ಎಷ್ಟು ಕಷ್ಟ ಪಟ್ಟರು, ಆಗ ಹೇಳಿದಂತೆ ಕಪ್ಪು ಹಣ ತರಲಿಲ್ಲ. ಸರ್ಕಾರದ ಭ್ರಷ್ಟಾಚಾರ ಮುಚ್ಚಿಡಲು ವಿಪಕ್ಷದ ಎಲ್ಲಾ ನಾಯಕರನ್ನು ಭ್ರಷ್ಟರಂತೆ ಮೋದಿ ಸರ್ಕಾರ ಕಾಣುತ್ತಿದೆ ಎಂದು ಅವರು ಕಿಡಿ ಕಾರಿದ್ದಾರೆ.

ಅಂದಿನ ರಾಜಕಾರಣಿಗಳು ಸತ್ಯದ ಮೇಲೆ ನಡೆಯುವ ನಂಬಿಕೆಯಿತ್ತು. ಈಗ ಅಧಿಕಾರದ ದರ್ಪ, ವೈಭೋಗದ ಜೀವನ ಸಾಗಿಸ್ತಿದ್ದಾರೆ. ಸೇವಾ ಭಾವನೆ ಮರೆತು ಅಹಂನಿಂದ ನಡೆಯುತ್ತಿದ್ದಾರೆ. ಹಿಂದು ಪರಂಪರೆ, ರಾಜಪರಂಪರೆಯಲ್ಲಿ ರಾಜಸತ್ಯ ಹಾಗು ಸೇವಾ ಭಾವದಲ್ಲಿ ಸಾಗಬೇಕೆಂಬ ನಂಬಿಕೆ ಇದೆ. ಶ್ರೀರಾಮ ಸೇವಾ ಭಾವದಿಂದ ಸತ್ಯದ ದಾರಿಯಲ್ಲಿ ಸಾಗಿದ್ದರು. ಮೋದಿ ಸರ್ಕಾರ ಹತ್ತು ವರ್ಷದಲ್ಲಿ ಸುಳ್ಳಿನ ಸರಮಾಲೆ ಹಣೆದಿದ್ದಾರೆ ಎಂದು ಅವರು ಹೇಳಿದ್ದಾರೆ.

ತಪ್ಪು ದಾರಿಯಲ್ಲಿ ಅಧಿಕಾರ ಹಿಡಿಯೋದು ಬಿಜೆಪಿ ಕೆಲಸವಾಗಿದೆ. ಅದನ್ನು ಮೋದಿ ಮಾಸ್ಟರ್ ಸ್ಟ್ರೋಕ್ ಎಂದು ಮಾದ್ಯಮ ತೋರಿಸುತ್ತಿವೆ. ಅಸಂವಿಧಾನಾತ್ಮಕವಾಗಿ ಸರ್ಕಾರ ಬೀಳಿಸಿದ್ದಾರೆಂದು ಯಾರು ಪ್ರಶ್ನಿಸ್ತಿಲ್ಲ. ನೂರಾರು ಕೋಟಿ ಹಣ ಕೊಟ್ಟು ಶಾಸಕರನ್ನ ಖರೀಸಿದಿ ಸರ್ಕಾರ ಬೀಳಿಸೋದನ್ನು ಮೋದಿ ಸ್ಟ್ರೋಕ್ ಅಂತಾರೆ. ಧರ್ಮ, ಜಾತಿ ಎಂದು ಹೇಳಿಕೊಂಡು ರಾಜಕೀಯ ಬೇಳೆ ಬೇಯಿಸ್ತಿದ್ದಾರೆ. ಜಗತ್ತಿಗೆ ಮೋದಿ ಪ್ರಸಿದ್ಧ ಎಂದು ಹೊಗಳ್ತಾರೆ. ಅಹಂಕಾರದಿಂದ ಮೋದಿ ವೈಭೋಗ ಪ್ರದರ್ಶನ, ಮೋದಿ ಮನಸು ಮಾಡಿದ್ರೆ ಚಿಟಿಕೆ ಹೊಡೆಯೋದರಲ್ಲಿ ಯುದ್ಧ ನಿಲ್ಲಿಸುವ ಶಕ್ತಿ ಎಂದು ಪ್ರಚಾರ ನೀಡುತ್ತಾರೆ ಎಂದು ಅವರು ಕಿಡಿಕಾರಿದ್ದಾರೆ.

TAGGED:bjpcongressLok Sabha Election 2024narendra modipriyanka gandhi
Share This Article
Facebook Whatsapp Whatsapp Telegram

Cinema news

ChetanKumar Ahimsa
ರಾಜ್‌ಕುಮಾರ್‌ ಸಮಾಧಿ ಬಗ್ಗೆ ವಿವಾದಾತ್ಮಕ ಪೋಸ್ಟ್‌ – ಅಭಿಮಾನಿಗಳು ಮುತ್ತಿಗೆ ಹಾಕುತ್ತಿದ್ದಂತೆ ಕ್ಷಮೆಯಾಚಿಸಿದ ಚೇತನ್‌
Cinema Karnataka Latest Top Stories
chetan 13 5
ರಾಜ್‌ಕುಮಾರ್‌ ಸಮಾಧಿಗೆ 2.5 ಎಕರೆ ಜಾಗ ನೀಡಿದ್ದು ಸರಿಯೇ? – ನಟ‌ ಚೇತನ್ ವಿರುದ್ಧ ಡಾಕ್ಟರ್ ರಾಜ್‌ ಅಭಿಮಾನಿಗಳಿಂದ ದೂರು
Bengaluru City Cinema Latest Sandalwood Top Stories
Akshay Kumar 1
ನಟ ಅಕ್ಷಯ್ ಕುಮಾರ್ ಅಪ್ರಾಪ್ತ ಪುತ್ರಿಯ ಬೆತ್ತಲೆ ಫೋಟೋಗೆ ಬೇಡಿಕೆಯಿಟ್ಟಿದ್ದ ವ್ಯಕ್ತಿ ಅರೆಸ್ಟ್
Bollywood Cinema Crime Latest Top Stories
ranveer singh 2
ದೈವಕ್ಕೆ ಅಪಮಾನ – ಇನ್ಮುಂದೆ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತರಲ್ಲ: ಕ್ಷಮೆಯಾಚಿಸಿದ ರಣವೀರ್ ಸಿಂಗ್
Cinema Court Latest South cinema Top Stories

You Might Also Like

PM Modi 4
Latest

ಇದು ನನ್ನ ಕೊನೆಯ ರ‍್ಯಾಲಿ, ಫಲಿತಾಂಶದ ನಂತರ ಪ್ರಮಾಣವಚನ ಸಮಾರಂಭಕ್ಕೆ ಬರುತ್ತೇನೆ: ಪ್ರಧಾನಿ ಮೋದಿ

Public TV
By Public TV
7 minutes ago
ragging alleged in hassan veterinary college hostel
Crime

ಹಾಸನದ ಪಶು ವೈದ್ಯಕೀಯ ಕಾಲೇಜಿನ ಹಾಸ್ಟೆಲ್‍ನಲ್ಲಿ ರ‍್ಯಾಗಿಂಗ್‌ ಮಾರಾಮಾರಿ – ಹಲವರಿಗೆ ಗಾಯ

Public TV
By Public TV
19 minutes ago
Donald Trump 1
Latest

3 ದಿನಗಳ ಒಳಗಡೆ ಒಪ್ಪಿಕೊಳ್ಳಿ – ಇಲ್ಲದಿದ್ದರೆ ತೈಲ ಪೈಪ್‌ಲೈನ್‌ಗಳು ಸ್ಫೋಟಗೊಳ್ಳುತ್ತೆ: ಇರಾನಿಗೆ ಟ್ರಂಪ್‌ ವಾರ್ನಿಂಗ್‌

Public TV
By Public TV
1 hour ago
The Madhya Pradesh ministers brother abused and threatened the woman officer
Crime

ʻನಿನ್ನ ಹೂತು ಹಾಕ್ಬಿಡ್ತೀನಿʼ – ಸಚಿವರ ಸಹೋದರನಿಂದ ಮಹಿಳಾ ಅಧಿಕಾರಿಗೆ ಬೆದರಿಕೆ

Public TV
By Public TV
2 hours ago
Chinnaswamy Stadium 1
Bengaluru City

ಚಿನ್ನಸ್ವಾಮಿ ಭದ್ರತಾ ಲೋಪ ಕೇಸ್‌ಗೆ ಟ್ವಿಸ್ಟ್‌ – ಸಂಬಳ ನೀಡದ್ದಕ್ಕೆ ಆರ್‌ಸಿಬಿ ಮ್ಯಾಚ್ ದಿನವೇ ಸೇಡು ತೀರಿಸಿಕೊಂಡ ಸಿಬ್ಬಂದಿ!

Public TV
By Public TV
2 hours ago
Ashok Pattan
Bengaluru City

ಮೇ 2ನೇ ವಾರದಲ್ಲಿ ಸಿಹಿ ಸುದ್ದಿ ಕೊಡುವ ಭರವಸೆ ಹೈಕಮಾಂಡ್ ಕೊಟ್ಟಿದೆ: ಅಶೋಕ್ ಪಟ್ಟಣ್

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?