ಬಾಗಲಕೋಟೆ: ಬಾಲಾಕೋಟ್ ಮೇಲಿನ ಏರ್ಸ್ಟ್ರೈಕ್ಗೆ (Balakote Airstrike) ಸಂಬಂಧಿಸಿದಂತೆ ಪ್ರಧಾನಿ ಮೋದಿ (PM Narendra Modi) ಪಾಕಿಸ್ತಾನಕ್ಕೆ ಕರೆ ಮಾಡಿದ ವಿಚಾರವನ್ನು ಮೊದಲ ಬಾರಿಗೆ ಬಹಿರಂಗ ಪಡಿಸಿದ್ದಾರೆ.
ಬಾಗಲಕೋಟೆಯಲ್ಲಿ ಬಿಜೆಪಿ ಸಮಾವೇಶದಲ್ಲಿ (BJP Rally) ಮಾತನಾಡಿದ ಅವರು, ಈ ಮೋದಿ ಎದೆ ಉಬ್ಬಸಿ, ಕಣ್ಣಲ್ಲಿ ಕಣ್ಣಿಟ್ಟು ನಿಲ್ಲುತ್ತಾನೆ ಹೊರತು ಹಿಂದಿನಿಂದ ಮಾಡುವುದಿಲ್ಲ ಎಂದು ವಿರೋಧಿಗಳಿಗೆ ತಿವಿದರು. ಮುಖ್ಯವಾಗಿ ಬಾಲಾಕೋಟ್ ಏರ್ ಸ್ಟ್ರೈಕ್ ರಹಸ್ಯ ಬಿಚ್ವಿಟ್ಟ ಮೋದಿ, ಬಾಲಾಕೋಟ್ ಅಂದರೆ ಕೆಲವರು ಬಾಗಲಕೋಟೆ ಎಂದು ತಿಳಿದಿದ್ದರು ಎನ್ನುವ ಮೂಲಕ ವಿಪಕ್ಷಗಳನ್ನು ವ್ಯಂಗ್ಯವಾಡಿದರು.
- Advertisement 2
ತಂತ್ರಜ್ಞಾನವನ್ನು ಬಳಸಿ ನಕಲಿ ವಿಡಿಯೋಗಳನ್ನು ಮಾಡುತ್ತಿದ್ದಾರೆ. ಆರ್ಟಿಫಿಶಿಯಲ್ ಇಂಟಲಿಜೆನ್ಸ್ ತಂತ್ರಜ್ಞಾನವನ್ನು ದುರುಪಯೋಗಪಡಿಸಿಕೊಳ್ಳುತ್ತಿದ್ದಾರೆ. ನನ್ನದೇ ಧ್ವನಿ ಇರುವ ನಕಲಿ ವಿಡಿಯೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚುತ್ತಿದ್ದಾರೆ. ಅಂತಹ ಯಾವುದೇ ನಕಲಿ ವಿಡಿಯೋಗಳು ನಿಮಗೆ ಕಂಡು ಬಂದರೆ ಪೊಲೀಸ್ ಅಥವಾ ಪಕ್ಷದ ಗಮನಕ್ಕೆ ತನ್ನಿ.
— BJP Karnataka (@BJP4Karnataka) April 29, 2024
- Advertisement 3
ನಂತರ ಭಾಷಣ ಮುಂದುವರೆಸಿದ ಮೋದಿ, ನಾವು ಬಾಲಾಕೋಟ್ ಮೇಲೆ ಏರ್ ಸ್ಟ್ರೈಕ್ ಮಾಡಿದೆವು. ಈ ಬಗ್ಗೆ ನಾನು ಪಾಕಿಸ್ತಾನಕ್ಕೆ (Pakistan) ನಾನು ಮೊದಲೇ ಸೂಚನೆ ನೀಡುತ್ತೇನೆ ಅಂತ ಹೇಳಿದ್ದೆ. ಆದರೆ ಆ ಸಮಯದಲ್ಲಿ ಪಾಕಿಸ್ತಾನದವರು ನನ್ನ ಪೋನ್ ಸ್ವೀಕರಿಸಲಿಲ್ಲ. ಕೊನೆಗೆ ರಾತ್ರಿ 12 ಗಂಟೆಗೆ ಅವರು ನನ್ನ ಫೋನ್ ರಿಸೀವ್ ಮಾಡಿದರು. ಅವರಿಗೆ ಏರ್ ಸ್ಟ್ರೈಕ್ ಬಗ್ಗೆ ತಿಳಿಸಿದೆ. ನಂತರ ಆ ವಿಷಯ ಇಡಿ ಜಗತ್ತಿಗೆ ಬಹಿರಂಗವಾಯ್ತು ಎಂದು ಮೋದಿ ಬಾಲಾಕೋಟ್ ಏರ್ ಸ್ಟ್ರೈಕ್ ರಹಸ್ಯವನ್ನ ಬಹಿರಂಗ ಪಡಿಸಿದರು.
- Advertisement 4
ಇನ್ನು ಮುಂದೆ ನಮ್ಮ ಮೇಲೆ ದಾಳಿ ಮಾಡಿದರೆ ಈ ಹೊಸ ಭಾರತ ನಿಮ್ಮ ಮನೆಗೆ ನುಗ್ಗಿ ಹೊಡೆಯುತ್ತದೆ. ನಾವು ಯಾವುದಕ್ಕೂ ಹೆದರುವುದಿಲ್ಲ ಎನ್ನುವ ಮೂಲಕ ಪಾಕಿಸ್ತಾನಕ್ಕೆ ಖಡಕ್ ಎಚ್ಚರಿಕೆ ಸಂದೇಶವನ್ನು ರವಾನಿಸಿದರು. ಇದನ್ನೂ ಓದಿ: ಚುನಾವಣೆಯಿಂದ 6 ವರ್ಷ ಮೋದಿ ನಿಷೇಧ ಕೋರಿ ಸಲ್ಲಿಸಿದ್ದ ಅರ್ಜಿ ವಜಾ
ಕಾಂಗ್ರೆಸ್ ಯುವರಾಜ ರಾಹುಲ್ ಗಾಂಧಿ ಅವರು ಛತ್ರಪತಿ ಶಿವಾಜಿ ಮಹಾರಾಜ್, ಕಿತ್ತೂರು ರಾಣಿ ಚೆನ್ನಮ್ಮ ಅವರಂತಹ ಮಹಾನ್ ವ್ಯಕ್ತಿಗಳಿಗೆ ಅಪಮಾನ ಮಾಡುತ್ತಲೇ ಬರುತ್ತಿದ್ದಾರೆ.
– ಪ್ರಧಾನಿ ಶ್ರೀ @narendramodi#PhirEkBaarModiSarkar #AbkiBaar400Paar #ಮತ್ತೊಮ್ಮೆಮೋದಿಸರ್ಕಾರ pic.twitter.com/zO3j3kZ5vz
— BJP Karnataka (@BJP4Karnataka) April 29, 2024
ಪಕ್ಷದ ಅಭ್ಯರ್ಥಿಗಳಾದ ಬಾಗಲಕೋಟೆಯ ಪಿ.ಸಿ ಗದ್ದಿಗೌಡರ್ ಹಾಗೂ ವಿಜಯಪುರದ ಅಭ್ಯರ್ಥಿ ರಮೇಶ್ ಜಿಗಜಿಣಗಿ ಪರ ಮತಯಾಚನೆ ಮಾಡಿದ ಮೋದಿ, ಯಾರೆಲ್ಲಾ ಚುನಾವಣೆ ಸೋತಿದ್ದಾರೆ ಅವರೆಲ್ಲ ನನ್ನ ಧ್ವನಿಯಲ್ಲಿ ಸಂಭಾಷಣೆ ಮಾಡಿ ಸೋಶಿಯಲ್ ಮೀಡಿಯಾದಲ್ಲಿ ಹಾಕುತ್ತಿದ್ದಾರೆ. ಈ ರೀತಿ ನಿಮಗೆ ಯಾವುದಾದರೂ ವಿಷಯ ಗಮನಕ್ಕೆ ಬಂದರೆ ಹತ್ತಿರದ ಪೋಲಿಸ್ ಠಾಣೆಗೆ ಅಥವಾ ಸ್ಥಳೀಯ ಬಿಜೆಪಿ ನಾಯಕರಿಗೆ ತಿಳಿಸಿ. ಅದಕ್ಕಾಗಿ ನೀವು ಜಾಗೃತರಾಗಿರಿ ಎಂದು ಕಾರ್ಯಕರ್ತರನ್ನು ಎಚ್ಚರಿಸಿದರು.