ಮೈಸೂರು: ಬಿಜೆಪಿಯ ಲೋಕಸಭಾ ಅಭ್ಯರ್ಥಿ ಯದುವೀರ್ ಒಡೆಯರ್ (Yaduveer Wadiyar) ವಿಜಯ ಸಂಕಲ್ಪ (Vijay Sankalpa) ಸಮಾವೇಶ ನಡೆದ ಜಾಗದಲ್ಲಿ ಕಸ ತೆಗೆದಿದ್ದಾರೆ.
ಭಾನುವಾರ ಮಹಾರಾಜ ಕಾಲೇಜು ಮೈದಾನದಲ್ಲಿ ನಡೆದ ಸಮಾವೇಶದಲ್ಲಿ ಬಿಜೆಪಿ-ಜೆಡಿಎಸ್ನ (BJP-JDS) ಸುಮಾರು 60 ಸಾವಿರಕ್ಕೂ ಅಧಿಕ ಕಾರ್ಯಕರ್ತರು ಭಾಗವಹಿಸಿದ್ದರು. ಯದುವೀರ್ ಒಡೆಯರ್ ಪರವಾಗಿ ಪ್ರಧಾನಿ ನರೇಂದ್ರ ಮೋದಿ (PM Narendra Modi) ಮತ್ತು ಮಾಜಿ ಪ್ರಧಾನಿ ಹೆಚ್ಡಿ ದೇವೇಗೌಡ (HD Devegowda) ಪ್ರಚಾರ ನಡೆಸಿದ್ದರು.
ಇಂದು ಬೆಳಗ್ಗೆ ಮೈದಾನದಲ್ಲಿ ಸ್ವಚ್ಛತಾ ಕಾರ್ಯ ನಡೆಸುತ್ತಿದ್ದರು. ಈ ವೇಳೆ ಯದುವೀರ್ ಹಾಗೂ ಪತ್ನಿ ತ್ರಿಷಿಕಾ ಅವರು ಮಾಸ್ಕ್ ಧರಿಸಿ ಬಿದ್ದಿದ್ದ ಕಸವನ್ನು (Garbage) ತೆಗೆದಿದ್ದಾರೆ. ಈ ಮೂಲಕ ನಾನು ಮಹಾರಾಜ ಅಲ್ಲ ಸಾಮಾನ್ಯ ಪ್ರಜೆ ಎಂಬುದನ್ನು ಸಾಬೀತು ಪಡಿಸಿದರು. ಯದುವೀರ್ಗೆ ಸ್ಥಳೀಯರು ಸಾಥ್ ನೀಡಿದರು. ಇದನ್ನೂ ಓದಿ: ಇದನ್ನೂ ಓದಿ: ವ್ಹೀಲಿಂಗ್ ಮಾಡುತ್ತಾ ಜಲಮಂಡಳಿ ಗುಂಡಿಗೆ ಬಿದ್ದು ಯುವಕ ಸಾವು, ಇಬ್ಬರು ಗಂಭೀರ
ಸಂಕಲ್ಪ ಸಮಾವೇಶದಲ್ಲಿ ಪ್ರಧಾನಿ ಮೋದಿ, ಮಾಜಿ ಪ್ರಧಾನಿ ಹೆಚ್ಡಿ ದೇವೇಗೌಡ, ಯಡಿಯೂರಪ್ಪ, ಕುಮಾರಸ್ವಾಮಿ ಸೇರಿದಂತೆ ಬಿಜೆಪಿ, ಜೆಡಿಎಸ್ ನಾಯಕರು ಭಾಗವಹಿಸಿ ಕಾಂಗ್ರೆಸ್ ವಿರುದ್ಧ ಕಿಡಿಕಾರಿದ್ದರು.