Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: 2047 ರವರೆಗೆ 24×7 ಕೆಲಸ ಮಾಡಬೇಕೆಂದು ದೇವರು ನನಗೆ ಆದೇಶಿಸಿದ್ದಾನೆ ಎಂದು ನಂಬಿದ್ದೇನೆ: ಮೋದಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | 2047 ರವರೆಗೆ 24×7 ಕೆಲಸ ಮಾಡಬೇಕೆಂದು ದೇವರು ನನಗೆ ಆದೇಶಿಸಿದ್ದಾನೆ ಎಂದು ನಂಬಿದ್ದೇನೆ: ಮೋದಿ

Latest

2047 ರವರೆಗೆ 24×7 ಕೆಲಸ ಮಾಡಬೇಕೆಂದು ದೇವರು ನನಗೆ ಆದೇಶಿಸಿದ್ದಾನೆ ಎಂದು ನಂಬಿದ್ದೇನೆ: ಮೋದಿ

Public TV
Last updated: May 23, 2024 11:03 pm
Public TV
Share
3 Min Read
ಚಿತ್ರ ಕೃಪೆ : ಇಂಡಿಯಾ ಟಿವಿ
ಚಿತ್ರ ಕೃಪೆ : ಇಂಡಿಯಾ ಟಿವಿ
SHARE

– ವಿಕಸಿತ ಭಾರತದ ಗುರಿಯನ್ನು ಸಾಧಿಸಲು ಕಳುಹಿಸಿದ್ದಾನೆ
– ರಾಜೀವ್‌ ಗಾಂಧಿ ಮೃತಪಟ್ಟಾಗ 22 ದಿನ ಚುನಾವಣೆ ಮುಂದೂಡಲಾಗಿತ್ತು

ನವದೆಹಲಿ: ಅಭಿವೃದ್ಧಿ ಹೊಂದಿದ ಭಾರತದ (India) ಗುರಿಯನ್ನು ಸಾಧಿಸಲು ನಾನು 2047 ರವರೆಗೆ 24×7 ಕೆಲಸ ಮಾಡಬೇಕೆಂದು ದೇವರು ನನಗೆ ಆದೇಶಿಸಿದ್ದಾನೆ ಎಂದು ನಾನು ನಂಬುತ್ತೇನೆ. ಅದಕ್ಕಾಗಿ ನಾನು ಕೆಲಸ ಮಾಡುತ್ತೇನೆ ಎಂದು ಪ್ರಧಾನಿ ನರೇಂದ್ರ ಮೋದಿ (PM Narendra Modi) ಹೇಳಿದ್ದಾರೆ.

ಮಾಧ್ಯಮವೊಂದರ ಕಾರ್ಯಕ್ರಮದಲ್ಲಿ ಮಾತನಾಡಿದ 74 ವರ್ಷದ ಮೋದಿ, ಸರ್ವಶಕ್ತ ದೇವರು ನನ್ನನ್ನು ವಿಶೇಷ ಉದ್ದೇಶಕ್ಕಾಗಿ ಕಳುಹಿಸಿದ್ದಾನೆ ಎಂದು ನಾನು ಭಾವಿಸುತ್ತೇನೆ. ದೇವರು ನನ್ನನ್ನು 2047 ರ ವೇಳೆಗೆ ವಿಕಸಿತ ಭಾರತದ (Viksit Bharat) ಗುರಿಯನ್ನು ಸಾಧಿಸಲು ಕಳುಹಿಸಿದ್ದಾನೆ. ದೇವರು ನನಗೆ ಮಾರ್ಗವನ್ನು ತೋರಿಸುತ್ತಿದ್ದಾನೆ. ದೇವರು ನನಗೆ ಶಕ್ತಿಯನ್ನು ನೀಡುತ್ತಿದ್ದಾನೆ. ನಾನು ಈ ಗುರಿಯನ್ನು ಸಾಧಿಸುವ ಸಂಪೂರ್ಣ ವಿಶ್ವಾಸವಿದೆ. 2047 ರ ವೇಳೆಗೆ ಆ ಗುರಿಯನ್ನು ಸಾಧಿಸುವವರೆಗೆ ದೇವರು ನನ್ನನ್ನು ಮರಳಿ ಕರೆಯುವುದಿಲ್ಲ ಎಂದು ಹೇಳಿದರು.

#ModiWithRajatSharma | “हौले हौले हो जायेगा प्यार, अबकी बार 400 पार” से लेकर “चटनी के बिना ढोकला बेकार, अबकी बार 400 पार” तक, जब पीएम मोदी ने सुने मजेदार तुकबंदी..देखिए क्या बोले?#IndiaTV | #RajatSharma | #SalaamIndia | #NarendraModi@RajatSharmaLive | @narendramodi |… pic.twitter.com/8RyteDgf31

— India TV (@indiatvnews) May 23, 2024

400 ಪಾರ್ ಎಂಬುದು ಬಿಜೆಪಿ (BJP) ಸೃಷ್ಟಿ ಮಾಡಿದ ಘೋಷ ವಾಕ್ಯವಲ್ಲ. ಜನರಿಂದಲೇ ಬಂದ ಘೋಷಣೆಯಿದು. ಕಳೆದ ಐದು ವರ್ಷಗಳಲ್ಲಿ ನಾವು ಈಗಾಗಲೇ ಸಂಸತ್ತಿನಲ್ಲಿ 400 ಬಲ ಹೊಂದಿದ್ದೇವೆ. 95% ಅಂಕಗಳನ್ನು ಪಡೆದ ಯಾವುದೇ ಮಗು ಹೆಚ್ಚಿನ ಅಂಕ ಪಡೆಯಲು ಪ್ರಯತ್ನಿಸುವುದು ಸಹಜ ಎಂದರು.

ಈ ಚುನಾವಣೆಯಲ್ಲಿ ಕಾಂಗ್ರೆಸ್ (Congress) ಮತ್ತು ಇತರ ವಿರೋಧ ಪಕ್ಷಗಳು ಚುನಾವಣಾ ಆಯೋಗದ ಕಾರ್ಯವೈಖರಿಯ ಬಗ್ಗೆ ದೂರುತ್ತಿರುವ ಹಿನ್ನೆಲೆಯಲ್ಲಿ ಹಿಂದಿನ ಚುನಾವಣಾ ಆಯೋಗದ ಕೆಲಸವನ್ನು ಉಲ್ಲೇಖಿಸಿ ಮೋದಿ ತಿರುಗೇಟು ನೀಡಿದರು.

#ModiWithRajatSharma | ‘पहले दूरी बनाने की विदेश नीति थी..अब नज़दीकी बढ़ाने की नीति है’- पीएम मोदी#IndiaTV | #RajatSharma | #SalaamIndia | #NarendraModi@RajatSharmaLive | @narendramodi | @PMOIndia | @BJP4India pic.twitter.com/SlIybdprrX

— India TV (@indiatvnews) May 23, 2024

ಮೇ 21, 1991 ರಂದು ಶ್ರೀಪೆರಂಬದೂರಿನಲ್ಲಿ ಕಾಂಗ್ರೆಸ್ ನಾಯಕ ರಾಜೀವ್ ಗಾಂಧಿ (Rajiv Gandhi) ಹತ್ಯೆಯಾದ ನಂತರ 1991 ರಲ್ಲಿ ಅಂದಿನ ಮುಖ್ಯ ಚುನಾವಣಾ ಆಯೋಗದ ಆಯುಕ್ತರಾಗಿದ್ದ ಟಿಎನ್ ಶೇಷನ್ (T. N. Seshan) ಅವರು 22 ದಿನಗಳ ಕಾಲ ದೇಶಾದ್ಯಂತ ಮತದಾನವನ್ನು ಹೇಗೆ ಮುಂದೂಡಿದರು ಎಂಬುದನ್ನು ನೆನಪಿಸಿದ ಮೋದಿ ಅಂದು ಕೇವಲ ಒಂದು ಸುತ್ತಿನ ಮತದಾನ ಮುಗಿದಿತ್ತು. ಜೂನ್ ಮಧ್ಯಭಾಗದವರೆಗೆ ಚುನಾವಣೆಯನ್ನು ಮುಂದೂಡಲಾಯಿತು ಮತ್ತು ಅಂತಿಮವಾಗಿ ಜೂನ್ 12 ಮತ್ತು 15 ರಂದು ಮತದಾನ ನಡೆಯಿತು ಎಂಬುದನ್ನು ಪ್ರಸ್ತಾಪಿಸಿದರು.

ಈಗ ಯಾವ ರೀತಿ ಮಾತನಾಡುತ್ತಿದ್ದಾರೆ? ಸಾಮಾನ್ಯವಾಗಿ, ಅಭ್ಯರ್ಥಿ ಮೃತಪಟ್ಟಾಗ ಆ ಕ್ಷೇತ್ರದ ಚುನಾವಣೆಯನ್ನು ಮಾತ್ರ ನಿಲ್ಲಿಸಲಾಗುತ್ತದೆ. ಆದರೆ 1991 ರಲ್ಲಿ ದೇಶಾದ್ಯಂತ ಚುನಾವಣೆಯನ್ನು ಮುಂದೂಡಲಾಯಿತು ಮತ್ತು ಅಗಲಿದ ನಾಯಕನ ಅಂತ್ಯಕ್ರಿಯೆಗೆ ವ್ಯಾಪಕವಾಗಿ ಪ್ರಚಾರ ನೀಡಿದ ನಂತರವೇ ಮತದಾನ ನಡೆಯಿತು. ಅದೇ ಟಿಎನ್‌ ಶೇಷನ್‌ ನಿವೃತ್ತಿಯ ನಂತರ 1999 ರಲ್ಲಿ ಕಾಂಗ್ರೆಸ್‌ನಿಂದ ಟಿಕೆಟ್‌ ಪಡೆದು ಗಾಂಧಿನಗರದಲ್ಲಿ ನಮ್ಮ ಪಕ್ಷದ ಅಧ್ಯಕ್ಷ ಎಲ್‌ಕೆ ಅಡ್ವಾಣಿ ವಿರುದ್ಧ ಸ್ಪರ್ಧಿಸಿದರು ಎಂದು ತಿಳಿಸಿದರು.

#ModiWithRajatSharma | धारा 370 हटाने पर दुनिया के सभी इस्लामिक देश तो खामोश रहे लेकिन मेरे देश की कांग्रेस चूं-चूं करती रही, ये मेरे दिमाग में समझ नहीं आया- पीएम मोदी#RajatSharma | #SalaamIndia | #NarendraModi@RajatSharmaLive | @narendramodi | @PMOIndia | @BJP4India pic.twitter.com/8N77REOUzA

— India TV (@indiatvnews) May 23, 2024

ದೆಹಲಿ ಮತ್ತು ಜಾರ್ಖಂಡ್‌ ಸಿಎಂಗಳ ಬಂಧನಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು, ನಾವು ಅವರನ್ನು ಜೈಲಿಗೆ ಕಳುಹಿಸಲಿಲ್ಲ. ಕಳುಹಿಸುವ ಅಧಿಕಾರ ನಮಗಿಲ್ಲ, ನ್ಯಾಯಾಲಯಗಳು ಇಬ್ಬರು ಮುಖ್ಯಮಂತ್ರಿಗಳನ್ನು ಜೈಲಿಗೆ ಕಳುಹಿಸಿದವು ಎಂದರು.

ಪಾಕಿಸ್ತಾನದಲ್ಲಿ ನಡೆಯುತ್ತಿರುವ ಅಪರಿಚಿತ ಹಂತಕರ ಉದ್ದೇಶಿತ ಹತ್ಯೆಗಳ ಹಿಂದೆ ಭಾರತದ ಕೈವಾಡವಿದೆ ಎನ್ನುವ ಆರೋಪಕ್ಕೆ ಪ್ರತಿಕ್ರಿಯೆ ನೀಡಿ ಪಾಕಿಸ್ತಾನದ ಜನರು ಇತ್ತೀಚಿನ ದಿನಗಳಲ್ಲಿ ಚಿಂತಿತರಾಗಿದ್ದಾರೆ. ನನಗೂ ಗೊತ್ತು, ಇದಕ್ಕೆ ಮೂಲ ಕಾರಣ ನಾನು. ಅವರು ಅಳುವುದನ್ನು ನಾನು ಅರ್ಥಮಾಡಿಕೊಳ್ಳಬಲ್ಲೆ. ಆದರೆ ನಮ್ಮ ಜನರು ಏಕೆ ಅಳುತ್ತಾರೆ ಎಂದು ನನಗೆ ಅರ್ಥವಾಗುತ್ತಿಲ್ಲ ಎಂದು ವಿಪಕ್ಷಗಳಿಗೆ ಟಾಂಗ್‌ ನೀಡಿದರು.

 

TAGGED:bjpcongressLokSabha electionnarendra modiನರೇಂದ್ರ ಮೋದಿಬಿಜೆಪಿಭಾರತಲೋಕಸಭಾ ಚುನಾವಣೆ
Share This Article
Facebook Whatsapp Whatsapp Telegram

Cinema news

Yelahanka House Theft Arrest
ಸಿನಿಮೀಯ ಶೈಲಿಯಲ್ಲಿ ಮನೆ ಕಳ್ಳತನ – 3.5 ಕೋಟಿ ಮೌಲ್ಯದ ಚಿನ್ನಾಭರಣ ಸೀಜ್
Bengaluru City Cinema Crime Karnataka Latest Top Stories
The trailer of the movie Love Mocktail 3 released Darling Krishna Milana Nagaraj 1
ಬಿಡುಗಡೆಯಾಯ್ತು ಲವ್‌ಮಾಕ್ಟೇಲ್ 3 ಚಿತ್ರದ ಟ್ರೈಲರ್!
Cinema Latest Top Stories
Kamal Haasan Donald Trump
ನಿಮ್ಮ ಕೆಲಸ ಎಷ್ಟಿದೆ ಅದನ್ನಷ್ಟೇ ನೋಡಿಕೊಳ್ಳಿ – ಟ್ರಂಪ್‌ ವಿರುದ್ಧ ಕಮಲ್‌ ಹಾಸನ್‌ ಕಿಡಿ
Cinema Latest National South cinema Top Stories
Jr NTR
ಬೆಂಗ್ಳೂರಲ್ಲಿ ಜ್ಯೂ.ಎನ್‍ಟಿಆರ್ ನೋಡಲು ಮುಗಿಬಿದ್ದ ಫ್ಯಾನ್ಸ್ – ಪೊಲೀಸರಿಂದ ಲಾಠಿಚಾರ್ಜ್‌
Bengaluru City Cinema Latest Top Stories

You Might Also Like

Banashankari temple Bengaluru
Bengaluru City

ಬನಶಂಕರಿ ಅಮ್ಮನವರ ಪ್ರಸಾದಕ್ಕೂ ತಟ್ಟಿತು ಯುದ್ಧದ ಬಿಸಿ

Public TV
By Public TV
33 minutes ago
Vijayapura Fire Accident
Districts

ಶಾರ್ಟ್ ಸರ್ಕ್ಯೂಟ್‌ನಿಂದ ಹೋಟೆಲ್‌ನಲ್ಲಿ ಬೆಂಕಿ – ಹೊತ್ತಿಯುರಿದ ಲಕ್ಷಾಂತರ ರೂ. ಮೌಲ್ಯದ ವಸ್ತುಗಳು

Public TV
By Public TV
54 minutes ago
Mukesh Ambani Reliance Donald Trump
Latest

ಅಮೆರಿಕದಲ್ಲಿ ರಿಲಯನ್ಸ್‌ನಿಂದ ಹೊಸ ತೈಲ ಸಂಸ್ಕರಣಾ ಘಟಕ: ಟ್ರಂಪ್‌ ಘೋಷಣೆ

Public TV
By Public TV
2 hours ago
Mandya Crime
Crime

ಹೆಂಡತಿಯ ಕಾಮದಾಟಕ್ಕೆ ಅರ್ಚಕ ಬಲಿ – ಪತ್ನಿಯ ಪ್ಲ್ಯಾನ್‌ನಂತೆ ಪ್ರಿಯಕರನಿಂದ ಕೊಲೆ, ಲವ್ವರ್ಸ್‌ ಅರೆಸ್ಟ್

Public TV
By Public TV
2 hours ago
ಸಾಂದರ್ಭಿಕ ಚಿತ್ರ
Latest

ಇರಾನ್‌ನಿಂದ ಖಡಕ್‌ ಪ್ರತಿಕ್ರಿಯೆ – ತೈಲ ಟ್ಯಾಂಕರ್‌ ಕುರಿತ ಅಮೆರಿಕದ ಪೋಸ್ಟ್‌ ಡಿಲೀಟ್‌

Public TV
By Public TV
2 hours ago
Punjab Accident Foreign Womem
Latest

ರಸ್ತೆ ದಾಟುವಾಗ ಕಾರು ಡಿಕ್ಕಿ – 14 ಅಡಿ ಎತ್ತರದಿಂದ ಹಾರಿ ಬಿದ್ದ ವಿದೇಶಿ ಯುವತಿ, ಸ್ಥಳದಲ್ಲೇ ಸಾವು

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?