ಬೆಂಗಳೂರು: ಉಡುಪಿ, ಚಿಕ್ಕಮಗಳೂರು ಕ್ಷೇತ್ರದಲ್ಲಿ ಸ್ವಪಕ್ಷೀಯರಿಂದಲೇ ತೀವ್ರ ವಿರೋಧ ಎದುರಿಸಿದ ಬಳಿಕ ಬೆಂಗಳೂರು ಉತ್ತರ (Bengaluru North) ಕ್ಷೇತ್ರದಿಂದ ಕಣಕ್ಕಿಳಿದಿದ್ದ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ (Shobha Karandlaje)2,59,476 ಮತಗಳ ಅಂತರದಿಂದ ಭರ್ಜರಿ ಗೆಲುವು ಸಾಧಿಸಿದ್ದಾರೆ.
ಶೋಭಾ ಕರಂದ್ಲಾಜೆಯವರು 9,86,049 ಮತಗಳನ್ನು ಪಡೆದರೆ ಇವರ ಎದುರಾಳಿ ಕಾಂಗ್ರಸ್ (Congress) ಅಭ್ಯರ್ಥಿ ಪ್ರೊ.ಎಂ.ವಿ ರಾಜೀವ್ ಗೌಡ ಅವರು 7,26,573 ಮತಗಳನ್ನು ಗಳಿಸಿ ಸೋಲಿಗೆ ಶರಣಾದರು.
ಶೋಭಾ ಕರಂದ್ಲಾಜೆಯವರಿಗೆ ತಮ್ಮ ಕ್ಷೇತ್ರದಲ್ಲಿ ತೀವ್ರ ವಿರೋಧ ವ್ಯಕ್ತವಾದ ಬೆನ್ನಲ್ಲೇ ಬೆಂಗಳೂರು ಉತ್ತರ ಕ್ಷೇತ್ರದಿಂದ ಟಿಕೆಟ್ ನೀಡಲಾಗಿತ್ತು. ಈ ವೇಳೆ ಸಹ ಹೊರಗಿನವರಿಗೆ ಟಿಕೆಟ್ ನೀಡಿದ್ದಾರೆ ಎಂದು ಉತ್ತರ ಕ್ಷೇತ್ರದ ಬಿಜೆಪಿ ಕಾರ್ಯಕರ್ತರು ವಿರೋಧ ವ್ಯಕ್ತಪಡಿಸಿದ್ದರು. ವಿರೋಧದ ನಡುವೆಯು ಶೋಭಾ ಅವರು ಗೆದ್ದು ಬೀಗಿದ್ದಾರೆ.
ಕಳೆದ ಎರಡು ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಯಿಂದ ಮಾಜಿ ಸಿಎಂ ಡಿ.ವಿ ಸದಾನಂದ ಗೌಡ ಅವರು ಈ ಕ್ಷೇತ್ರದಿಮದ ಗೆಲುವು ಸಾಧಿಸಿದ್ದರು. 2014ರಲ್ಲಿ ಅವರು 7,18,326 ಹಾಗೂ 2019ರಲ್ಲಿ 8,24,500 ಮತಗಳನ್ನು ಗಳಿಸಿದ್ದರು.