ಬೆಂಗಳೂರು: ಕೆಲವು ಪ್ರಾಯೋಜಿತ ಗುಂಪು ತಮಗೆ ಟಿಕೆಟ್ ಬೇಕೆಂಬ ಕಾರಣಕ್ಕೆ ಏನೇನೋ ಮಾಡಿತ್ತು. ಆದರೆ ಅವರು ಯಶಸ್ವಿಯಾಗಿಲ್ಲ. ಅವರಿಂದಲೂ ಟಿಕೆಟ್ ತೆಗೆದುಕೊಂಡು ಬರಲು ಆಗಲಿಲ್ಲ ಎಂದು ಹೇಳುವ ಮೂಲಕ ಸಿಟಿ ರವಿಗೆ (CT Ravi) ಸಂಸದೆ ಶೋಭಾ ಕರಂದ್ಲಾಜೆ (Shobha karandlaje) ಟಾಂಗ್ ನೀಡಿದ್ದಾರೆ.
ಬೆಂಗಳೂರಿನ ಡಾಲರ್ಸ್ ಕಾಲೋನಿ ನಿವಾಸದಲ್ಲಿ ಯಡಿಯೂರಪ್ಪ (Yediyurappa) ಅವರನ್ನು ಭೇಟಿ ಮಾಡಿದ ಬಳಿಕ ಮಾತನಾಡಿದ ಅವರು, ಉಡುಪಿ- ಚಿಕ್ಕಮಗಳೂರಲ್ಲಿ (Udupi-Chikkamgaluru) ಬಹಳ ದೊಡ್ಡ ಅಭಿವೃದ್ಧಿ ಕೆಲಸ ಆಗಿದೆ. ಆದರೆ ಅದನ್ನು ಪರಿಗಣಿಸದೇ ಕೆಲವರು ವಿರೋಧ ಮಾಡಿದ್ದರು. ಪಕ್ಷ ವಿರೋಧಿ, ಗಲಭೆ, ಅವಮಾನ ಮಾಡಿದವರಿಗೆ ಟಿಕೆಟ್ ಸಿಗುವುದಿಲ್ಲ ಎನ್ನುವುದು ನನ್ನಿಂದ ಸಾಬೀತಾಗಿದೆ. ಇನ್ನಾದರೂ ಇವರು ಪಾಠ ಕಲಿಯಲಿ. ಬಿಜೆಪಿ ಒಂದು ಶಿಸ್ತಿನ ಪಕ್ಷ ಎಂದು ವಿರೋಧಿಗಳಿಗೆ ತಿರುಗೇಟು ನೀಡಿದರು. ಇದನ್ನೂ ಓದಿ: ಬಿಎಸ್ವೈ ವಿರುದ್ಧ ಈಶ್ವರಪ್ಪ ಗರಂ – ಶಿವಮೊಗ್ಗದಿಂದ ಕಾಂತೇಶ್ ಸ್ಪರ್ಧೆ?
- Advertisement -
- Advertisement -
ಪಕ್ಷಕ್ಕೆ ಅವಮಾನ ಮಾಡಿದವರಿಗೆ ಮಣೆ ಹಾಕುವುದಿಲ್ಲ ಎಂದು ವರಿಷ್ಠರು ತೋರಿಸಿಕೊಟಿದ್ದಾರೆ. ನಾನು ಬೆಂಗಳೂರಲ್ಲಿ (Bengaluru) ಶಾಸಕರಾಗಿ ಅಭಿವೃದ್ಧಿ ಕಾರ್ಯ ಮಾಡಿದ್ದೇನೆ. ನಾನು ಯಶವಂತಪುರ ಶಾಸಕಿಯಾಗಿ, ಸಚಿವೆಯಾಗಿ ಕೆಲಸ ಮಾಡಿದ್ದೆ. ಸೋಮಶೇಖರ್ ಅವರನ್ನು ಗೆಲ್ಲಿಸಿದ್ದೆವು. ಆದರೆ ಅವರು ಮೋಸ ಮಾಡಿದ್ದಾರೆ ಎಂದು ವಾಗ್ದಾಳಿ ನಡೆಸಿದರು. ಇದನ್ನೂ ಓದಿ: ನಿಮ್ಮನ್ನು ತುಂಡು ಮಾಡುತ್ತೇನೆ – ಮೋದಿಗೆ ಜೀವ ಬೆದರಿಕೆ ಹಾಕಿದ್ದ ತಮಿಳುನಾಡು ಸಚಿವನ ವಿರುದ್ಧ ಎಫ್ಐಆರ್
- Advertisement -
- Advertisement -
ಬೆಂಗಳೂರು ಉತ್ತರದಲ್ಲೂ ವಿರೋಧ ವಿಚಾರವಾಗಿಯೂ ಪ್ರತಿಕ್ರಿಯಿಸಿದ ಅವರು, ನೆಲಮಂಗಲದಲ್ಲಿ ವಿರೋಧ ಇದೆ. ಅವರಿಗೂ, ಇಲ್ಲಿಗೂ ಏನು ಸಂಬಂಧ? ಸಹಜವಾಗಿ ಉಡುಪಿ-ಚಿಕ್ಕಮಗಳೂರಿಗೆ ಕನೆಕ್ಟ್ ಆಗಿದ್ದೆ. ಅದಕ್ಕೆ ಉಡುಪಿಯವರು ಕಾರಣ ಅಂತಾ ಹೇಳಲ್ಲ. ನನ್ನನ್ನು ಬೆಂಗಳೂರಿಗೆ ತರಬೇಕು ಎನ್ನುವುದು ಹೈಕಮಾಂಡ್ ನಿರ್ಧಾರ ಆಗಿರಬಹುದು. ಚಿಕ್ಕಮಗಳೂರಿನಲ್ಲಿ ಸ್ಪರ್ಧಿಸಿದ್ದರೂ ನಾನು ಅಲ್ಲಿ ಗೆಲ್ಲುತ್ತಿದ್ದೆ. ಕಳೆದ ಬಾರಿ ಕೂಡ ಗೋ ಬ್ಯಾಕ್ ಕೂಗಿದ್ದರು. ಹಾಗಿದ್ದರೂ ಮೂರು ಲಕ್ಷ ಮತಗಳ ಅಂತರದಿಂದ ಗೆದ್ದಿದ್ದೆ. ಕೋಟಾ ಶ್ರೀನಿವಾಸ್ ಪೂಜಾರಿ ಕೂಡ ಈ ಬಾರಿ ಅಭೂತಪೂರ್ವವಾಗಿ ಗೆಲ್ಲುತ್ತಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ನಾನು ಸದಾನಂದಗೌಡರ (DV Sadananda Gowda) ಮನೆಗೆ ಹೋಗಿ ಬಂದಿದ್ದೇನೆ. ಎಲ್ಲರ ಆಶೀರ್ವಾದ ನನ್ನ ಮೇಲಿದೆ ಎಂದು ಹೇಳಿದರು.