Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ನಳಿನ್ ಅಹಂಕಾರ ಬಿಡಲಿ: ಬಿಜೆಪಿ ಕಾರ್ಯಕರ್ತರಿಂದ ಅಸಮಾಧಾನ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Dakshina Kannada | ನಳಿನ್ ಅಹಂಕಾರ ಬಿಡಲಿ: ಬಿಜೆಪಿ ಕಾರ್ಯಕರ್ತರಿಂದ ಅಸಮಾಧಾನ

Dakshina Kannada

ನಳಿನ್ ಅಹಂಕಾರ ಬಿಡಲಿ: ಬಿಜೆಪಿ ಕಾರ್ಯಕರ್ತರಿಂದ ಅಸಮಾಧಾನ

Public TV
Last updated: April 20, 2019 10:06 pm
Public TV
Share
2 Min Read
NALIN KUMAR KATEEL e1550023580419
SHARE

– ನೀವು ಗೆಲ್ಲುತ್ತೀರಿ, ಆದ್ರೆ ನಾವು ವಿಜಯೋತ್ಸವ ಆಚರಿಸಲ್ಲ

ಮಂಗಳೂರು: ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಮತದಾನ ಮುಗಿದು ಹೋಗಿದೆ. ಆದರೆ ಬಿಜೆಪಿ ಅಭ್ಯರ್ಥಿ, ಹಾಲಿ ಸಂಸದ ನಳಿನ್ ಕುಮಾರ್ ಕಟೀಲ್ ಅವರ ಮೇಲೆ ಪಕ್ಷದ ಕಾರ್ಯಕರ್ತರ ಅಸಮಾಧಾನ ಮಾತ್ರ ನಿಂತಿಲ್ಲ.

ಪ್ರಧಾನಿ ನರೇಂದ್ರ ಮೋದಿ ಅವರಿಂದಾಗಿ ನಳಿನ್ ಕುಮಾರ್ ಗೆಲ್ಲುತ್ತಾರೆ, ಗೆಲ್ಲಿಸುತ್ತೇವೆ. ಅವರು ಅಹಂಕಾರ ಬಿಡಲಿ. ತಮ್ಮನ್ನು ಬೆಳೆಸಿದ ಕಾರ್ಯಕರ್ತರ ಜೊತೆ ಅಹಂ ತೋರಿಸುವುದು ಬೇಡ ಎಂದು ಬಿಜೆಪಿ ಕಾರ್ಯಕರ್ತರು ಸಾಮಾಜಿಕ ಜಾಲತಾಣದಲ್ಲಿ ಆಕ್ರೋಶ ಹೊರಹಾಕುತ್ತಿದ್ದಾರೆ.

MNG Modi A

ಮೋದಿಗಾಗಿ ವೋಟ್, ನಿಮ್ಮ ಮೇಲಿನ ಪ್ರೀತಿಯಿಂದಲ್ಲ. ಕೇಂದ್ರದಲ್ಲಿ ಮೋದಿ ಮತ್ತೆ ಬರಬೇಕೆಂಬ ನೆಲೆಯಲ್ಲಿ ಬಿಜೆಪಿಗೆ ವೋಟ್ ಹಾಕುತ್ತೇವೆ. ನಳಿನ್ ಕುಮಾರ್ ಅವರಿಗೆ ಅಲ್ಲ ಎಂಬ ಪೋಸ್ಟ್ ಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿವೆ.

ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಘೋಷಣೆಗೂ ಮುನ್ನವೇ ನಳಿನ್ ಕುಮಾರ್ ಬದಲಾವಣೆಗಾಗಿ ಒತ್ತಡ ಕೇಳಿಬಂದಿತ್ತು. ಹೀಗಾಗಿ ಸಂಘ ಪರಿವಾರದಲ್ಲೂ ಕೆಲವು ಪ್ರಮುಖರು ಕೂಡ ಇದಕ್ಕೆ ಪಟ್ಟು ಹಿಡಿದಿದ್ದರು. ಆದರೆ ಕೊನೆ ಕ್ಷಣದಲ್ಲಿ ನಳಿನ್ ಕುಮಾರ್ ಅವರಿಗೆ ಟಿಕೆಟ್ ನೀಡಲಾಗಿತ್ತು. ಬಳಿಕ ಅಸಮಾಧಾನಗೊಂಡಿದ್ದ ಕಾರ್ಯಕರ್ತರು ಮೋದಿಗಾಗಿ ನಮ್ಮ ವೋಟ್ ಅನ್ನುತ್ತಾ ಭಿನ್ನರಾಗದಲ್ಲೇ ಪ್ರಚಾರದಲ್ಲಿ ತೊಡಗಿದ್ದರು.

Nalin Kumar Kateel

ಚುನಾವಣೆ ಮುಗಿದರೂ, ಕಾರ್ಯಕರ್ತರ ಆಕ್ರೋಶ ನಿಂತಿಲ್ಲ. ನಳಿನ್ ಕುಮಾರ್ ಅವರಿಗೆ ಬಹಿರಂಗ ಪತ್ರ ಬರೆದು, ನೀವು ಗೆಲ್ಲುತ್ತೀರಿ. ಹಾಗಂತ ನಾಡಿದ್ದು ಮತ ಎಣಿಕಾ ಕೇಂದ್ರಕ್ಕೆ ಬಂದು ವಿಜಯೋತ್ಸವ ಆಚರಿಸಲ್ಲ ಎಂಬುದಾಗಿ ಬರೆದಿದ್ದಾರೆ.

ಪತ್ರದಲ್ಲಿ ಏನಿದೆ?:
ಚುನಾವಣೆ ಮಗಿದಿದೆ. ನಾಡಿದ್ದು ನೀವು ಗೆದ್ದೇ ಗೆಲ್ಲುತ್ತೀರ. ಗೆಲ್ಲಲೇ ಬೇಕು ಕೂಡ. ಗೆಲುವಿಗಾಗಿ ಹಗಲು ರಾತ್ರಿ ಎನ್ನದೆ ಬೆವರು ಸುರಿಸಿ ದುಡಿದಿದ್ದೇವೆ. ಮೊನ್ನೆ ತಾನೆ ಮತಾದಾನ ಗುರುತಿನ ಕಾರ್ಡ್ ಮಾಡಿಸಿದ ಯುವ ಮತದಾರನಿಂದ ಹಿಡಿದು ಅಜ್ಜ- ಅಜ್ಜಿಯರನ್ನು ಕೂಡ ಮತಗಟ್ಟೆಗೆ ಕರೆತಂದು ಮತ ಹಾಕಿಸಿದ್ದೇವೆ. ಅದರರ್ಥ ನಿಮ್ಮ ಮೇಲಿನ ಪ್ರೀತಿಯಿಂದ ನಾವು ಮತ ಹಾಕಿದ್ದಲ್ಲ. ಮೋದಿ ಎನ್ನುವ ಮಹಾನ್ ವ್ಯಕ್ತಿ ನಮ್ಮಂತಹ ಸಾಮಾನ್ಯ ಕಾರ್ಯಕರ್ತನ ಹೃದಯ ಮಂದಿರದಲ್ಲಿ ಶಕ್ತಿಯಾಗಿ ರೂಪುಗೊಂಡಿದ್ದಾರೆ. ಅವರ ಗೆಲುವು ನಮಗೆ ಮುಖ್ಯ. ಮೋದಿ ಭಾರತದ ಅನಿವಾರ್ಯತೆ ಮತ್ತು ಅವಶ್ಯಕತೆ ಎಂಬುದರಲ್ಲಿ ಎರಡು ಮಾತಿಲ್ಲ. ಆದರೆ ಯಾವಾಗ ನಿಮ್ಮನ್ನು ಬೆಳೆಸಿದ ಸಂಘದ ಹಿರಿಯರನ್ನು ಕಡೆಗಣಿಸುವ ಮಟ್ಟಕ್ಕೆ ಬಂದುಬಿಟ್ಟಿರೋ, ಯಾವಾಗ ಸಂಘಟನೆಗಾಗಿ ಬದುಕನ್ನೇ ಮುಡುಪಾಗಿಟ್ಟವರನ್ನು ಬದಿಗಿರಿಸುವ ಪ್ರಯತ್ನ ಮಾಡಿದಿರೋ ಅವಾಗಲೇ ನಮ್ಮೆಲ್ಲರಿಂದ ದೂರವಾಗಿದ್ದೀರಿ ನಳಿನ್ ಜೀ.

MNG Modi D

ಒಂದು ನೆನಪಿಡಿ… ನಾಡಿದ್ದು ಮತ ಎಣಿಕೆಯಂದು ನೀವು ಗೆದ್ದಾಗ ನಮ್ಮ ಮನೆಯಲ್ಲಿ ಸಿಹಿ ಹಂಚುತ್ತೇವೆ. ಮನೆ ಪಕ್ಕ ಪಟಾಕಿ ಸಿಡಿಸಿ ಸಂಭ್ರಮಿಸುತ್ತೇವೆ. ಆದರೆ ಮತ ಎಣಿಕೆ ಕೇಂದ್ರದೆಡೆಗೆ ಬಂದು ಸಂಭ್ರಮಿಸಲಾರೆವು. ನಿಮ್ಮನ್ನು ಹೆಗಲ ಮೇಲೆ ಹೊತ್ತೊಯ್ದು ಸಂಭ್ರಮಿಸಲಾರೆವು, ನಮ್ಮೂರಿಗೆ ಕರೆದು ವಿಜಯೋತ್ಸವವನ್ನೂ ಮಾಡಲಾರೆವು.. ಕಾರಣ ನಿಮ್ಮ ಮೇಲೆ ಹೇಳಲಾರದಷ್ಟು ನೋವಿದೆ ನಳಿನ್ ಜೀ. ಈಗಲೂ ನೀವು ನಿಮ್ಮ ದುರಹಂಕಾರದ ವರ್ತನೆಯಿಂದ ಬದಲಾದರೆ ಮಾತ್ರ ನಿಮಗೆ ಶ್ರೇಯಸ್ಕರ. ಮತ್ತೊಮ್ಮೆ ಹೇಳುತ್ತೇವೆ. ನೀವು ಗೆಲ್ಲುತ್ತೀರ. ಖಂಡಿತಾ ಗೆಲ್ಲಿಸಿದ್ದೇವೆ ಕೂಡ. ಆದರೆ ನಿಮ್ಮ ಮೇಲಿನ ಪ್ರೀತಿಯಿಂದಲ್ಲ. ನವ ಭಾರತ ನಿರ್ಮಾಣದ ಕನಸು ಹೊತ್ತ ಮೋದಿಗಾಗಿ ನಿಮ್ಮನ್ನು ಗೆಲ್ಲಿಸುತ್ತಿದ್ದೇವೆ ಅಷ್ಟೆ. ನೀವು ಬದಲಾಗುವಿರಿ ಎನ್ನುವ ನಿರೀಕ್ಷೆಯೊಂದಿಗೆ.

Nalin Kumar Kateel A

TAGGED:bjpdakshina kannadaLok Sabha ElectionsNalin Kumar KateelParty WorkersPublic TVಕಾರ್ಯಕರ್ತರುದಕ್ಷಿಣ ಕನ್ನಡಪಬ್ಲಿಕ್ ಟಿವಿಪ್ರಧಾನಿ ನರೇಂದ್ರ ಮೋದಿಬಿಜೆಪಿಲೋಕಸಭಾ ಚುನಾವಣೆಸಂಸದ ನಳಿನ್ ಕುಮಾರ್ ಕಟೀಲ್
Share This Article
Facebook Whatsapp Whatsapp Telegram

Cinema news

Vijay Deverakonda
Rashmika-Vijay | ʻವಿರೋಶ್ʼ ಕಲ್ಯಾಣ – ಸತಿಪತಿಯಾದ ವಿಜಯ್, ರಶ್ಮಿಕಾ!
Cinema Latest Main Post Sandalwood
Rashmika Mandanna Vijay Devarakonda Wedding Decorated Kodagu Virajpet House
ರಶ್ಮಿಕಾ ಮಂದಣ್ಣ ಮದುವೆ – ಸಿಂಗಾರಗೊಂಡ ಕೊಡಗಿನ ಮನೆ
Cinema Districts Karnataka Kodagu Latest Sandalwood Top Stories
Ranveer Singh Rishab Shetty Kantara
ಸೂಪರ್ ಸ್ಟಾರ್ ಆದ ಮಾತ್ರಕ್ಕೆ ಹೇಗೆ ಬೇಕಾದ್ರೂ ವರ್ತಿಸಬಹುದಾ? – ರಣವೀರ್ ಸಿಂಗ್‌ಗೆ ಹೈಕೋರ್ಟ್ ಚಾಟಿ
Bengaluru City Cinema Court Karnataka Latest Top Stories
Zee Short Film Contest
ಹೊಸ ಪ್ರತಿಭೆಗಳ ಹುಡುಕಾಟಕ್ಕೆ ಜೀ ಕಿರುಚಿತ್ರ ಸ್ಪರ್ಧೆ
Cinema Latest Top Stories

You Might Also Like

JDS
Districts

ನಾಳೆ ವಿಜಯಪುರದಲ್ಲಿ ಕಿತ್ತೂರು ಕರ್ನಾಟಕ ಭಾಗದ ʻಜೆಡಿಎಸ್ ಬೆಳ್ಳಿಹಬ್ಬʼ ಸಮಾವೇಶ

Public TV
By Public TV
26 minutes ago
Kolar Suicide
Crime

ನೇಣು ಬಿಗಿದು ಎಂಜಿನಿಯರಿಂಗ್ ಕಾಲೇಜಿನ ಉಪನ್ಯಾಸಕ ಸೂಸೈಡ್

Public TV
By Public TV
1 hour ago
Narendra Modi 5
Latest

ಇನ್‌ಸ್ಟಾಗ್ರಾಮ್‌ನಲ್ಲಿ 10,00,00,000 ಫಾಲೋವರ್ಸ್‌ ದಾಟಿದ ಮೊದಲ ವಿಶ್ವನಾಯಕ ಮೋದಿ

Public TV
By Public TV
2 hours ago
Team India
Cricket

Ind Vs Zim | ಟೀಂ ಇಂಡಿಯಾಕ್ಕೆ ಮಾಡು ಇಲ್ಲವೇ ಮಡಿ ಪಂದ್ಯ – ಸಂಜು, ಅಕ್ಷರ್‌ ಮತ್ತೆ ಕಣಕ್ಕಿಳಿಯುವ ಸಾಧ್ಯತೆ

Public TV
By Public TV
2 hours ago
Belagavi Crime
Belgaum

RSS ಹಾಲಿ-ಮಾಜಿ ತಾಲೂಕು ಪ್ರಮುಖರ ಮಧ್ಯೆ ನಾನಾ.. ನೀನಾ ಯುದ್ಧ – ತಲವಾರ್‌ನಿಂದ ಹಲ್ಲೆ, 7 ಜನ ಅರೆಸ್ಟ್

Public TV
By Public TV
2 hours ago
Mallikarjuna Mutya 3
Districts

ಆ ಬಾಲಕಿ ನನ್ನ ಮಗಳಿದ್ದಂತೆ, ತಂದೆ ಮಗಳನ್ನ ಪ್ರೀತಿ ಮಾಡೋದೇ ತಪ್ಪಾ? – ಮಲ್ಲಿಕಾರ್ಜುನ ಮುತ್ಯಾ ಫಸ್ಟ್‌ ರಿಯಾಕ್ಷನ್‌

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?