Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: Lok Sabha 2024: ‘ಲೋಕ’ ಸಮರಕ್ಕೆ ಬಳ್ಳಾರಿ ಅಖಾಡ ಸಜ್ಜು; ಕಾಂಗ್ರೆಸ್‌ಗೆ ಪ್ರತಿಷ್ಠೆ, ಬಿಜೆಪಿಗೆ ಅಸ್ತಿತ್ವದ ಪ್ರಶ್ನೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bellary | Lok Sabha 2024: ‘ಲೋಕ’ ಸಮರಕ್ಕೆ ಬಳ್ಳಾರಿ ಅಖಾಡ ಸಜ್ಜು; ಕಾಂಗ್ರೆಸ್‌ಗೆ ಪ್ರತಿಷ್ಠೆ, ಬಿಜೆಪಿಗೆ ಅಸ್ತಿತ್ವದ ಪ್ರಶ್ನೆ

Bellary

Lok Sabha 2024: ‘ಲೋಕ’ ಸಮರಕ್ಕೆ ಬಳ್ಳಾರಿ ಅಖಾಡ ಸಜ್ಜು; ಕಾಂಗ್ರೆಸ್‌ಗೆ ಪ್ರತಿಷ್ಠೆ, ಬಿಜೆಪಿಗೆ ಅಸ್ತಿತ್ವದ ಪ್ರಶ್ನೆ

Public TV
Last updated: March 8, 2024 4:45 pm
Public TV
Share
3 Min Read
Bellary
SHARE

– ಬಿಜೆಪಿ ಟಿಕೆಟ್‌ ಸಿಗುವ ಆತ್ಮವಿಶ್ವಾಸದಲ್ಲಿ ಬಿ.ಶ್ರೀರಾಮುಲು
– ‘ಕೈ’ ಪಾಳಯದಲ್ಲಿ ಟಿಕೆಟ್‌ಗಾಗಿ ಫೈಟ್‌

ಒಂದು ಕಾಲದಲ್ಲಿ ಬಳ್ಳಾರಿ (Bellary Lok Sabha) ಎಂದರೆ ಕಾಂಗ್ರೆಸ್ ಭದ್ರಕೋಟೆ. ಕಾಲಾಂತರದಲ್ಲಿ ನಿಧಾನಗತಿಯಾಗಿ ಕಾಂಗ್ರೆಸ್‌ನಿಂದ ಬಿಜೆಪಿ ತೆಕ್ಕೆಗೆ ಬಂತು. ಸದ್ಯ ಬಳ್ಳಾರಿ ಲೋಕಸಭಾ ಕ್ಷೇತ್ರವನ್ನು (Lok Sabha Elections 2024) ಬಿಜೆಪಿ ಪ್ರತಿನಿಧಿಸುತ್ತಿದೆ. ಈ ಬಾರಿಯ ಚುನಾವಣೆಯಲ್ಲಿ ಬಳ್ಳಾರಿಯನ್ನು ಕಾಂಗ್ರೆಸ್ ಪ್ರತಿಷ್ಠೆಯಾಗಿ ಪರಿಗಣಿಸಿದೆ. ಆದರೆ ಬಿಜೆಪಿಗೆ ಅಸ್ತಿತ್ವದ ಪ್ರಶ್ನೆಯಾಗಿದೆ.

Bellary Votes

ಕ್ಷೇತ್ರ ಪರಿಚಯ
ಕರ್ನಾಟಕದ ಪ್ರಮುಖ ಜಿಲ್ಲೆಗಳಲ್ಲಿ ಬಳ್ಳಾರಿಯೂ ಒಂದು. ಕರ್ನಾಟಕದ ಈಶಾನ್ಯ ಭಾಗದಲ್ಲಿ ಈ ಜಿಲ್ಲೆಯಿದೆ. ಕಲ್ಯಾಣ ಕರ್ನಾಟಕಕ್ಕೆ ಬಳ್ಳಾರಿ ಸೇರಿದೆ. ಕಳೆದ 2019ರ ಲೋಕಸಭಾ ಚುನಾವಣೆ ಸಂದರ್ಭದಲ್ಲಿ ಅಖಂಡ ಜಿಲ್ಲೆಯಾಗಿದ್ದ ಬಳ್ಳಾರಿ, ಇದೀಗ (2021) ಬಳ್ಳಾರಿ ಹಾಗೂ ವಿಜಯನಗರ ಜಿಲ್ಲೆಗಳಾಗಿ ಪ್ರತ್ಯೇಕಗೊಂಡಿದೆ. ಉಭಯ ಜಿಲ್ಲೆಗಳ ವ್ಯಾಪ್ತಿಯನ್ನು ಹೊಂದಿರುವ ಬಳ್ಳಾರಿ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸಲು ಎರಡು ಜಿಲ್ಲೆಗಳ ಕಾಂಗ್ರೆಸ್ ಆಕಾಂಕ್ಷಿಗಳ ನಡುವೆ ತೀವ್ರ ಜಿದ್ದಾಜಿದ್ದಿ ಏರ್ಪಟ್ಟಿದೆ. ಇದನ್ನೂ ಓದಿ: ಪಾಕ್ ಪರ ಘೋಷಣೆ ಕೂಗಿದ್ರಲ್ಲಿ ನಾಸೀರ್ ಹುಸೇನ್ ಪಾತ್ರವಿದ್ದರೆ ಪ್ರಮಾಣವಚನ ಸ್ವೀಕಾರಕ್ಕೆ ಬಿಡಬಾರದು: ಸಚಿವ ಕೆ.ಎನ್.ರಾಜಣ್ಣ

bellary map

ಎಂಟು ವಿಧಾನಸಭೆ ಕ್ಷೇತ್ರಗಳು
ಬಳ್ಳಾರಿ ಕ್ಷೇತ್ರವು ಎಸ್ಟಿ ಮೀಸಲು ಕ್ಷೇತ್ರವಾಗಿದೆ (ಪರಿಶಿಷ್ಟ ಪಂಗಡ). ಬಳ್ಳಾರಿ, ಬಳ್ಳಾರಿ ಗ್ರಾಮಾಂತರ, ಸಂಡೂರು, ಕಂಪ್ಲಿ, ಹೊಸಪೇಟೆ, ಕೂಡ್ಲಿಗಿ, ಹಡಗಲಿ, ಹಗರಿಬೊಮ್ಮನ ಹಳ್ಳಿ 8 ವಿಧಾನಸಭಾ ಕ್ಷೇತ್ರಗಳನ್ನು ಒಳಗೊಂಡಿದೆ.

ಸೋನಿಯಾಗಾಂಧಿ ವರ್ಸಸ್ ಸುಷ್ಮಾ ಸ್ವರಾಜ್
ಕಾಂಗ್ರೆಸ್ ಭದ್ರಕೋಟೆಯಾಗಿದ್ದ ಬಳ್ಳಾರಿಯಲ್ಲಿ 1999ರ ಚುನಾವಣೆ ವೇಳೆ ಬಿಜೆಪಿಯಿಂದ ಸುಷ್ಮಾ ಸ್ವರಾಜ್ (Sushma Swaraj) ಅವರು ಸೋನಿಯಾ ಗಾಂಧಿ (Sonia Gandhi) ವಿರುದ್ಧ ಸ್ಪರ್ಧೆ ಮಾಡುವ ಮೂಲಕ ಬಿಜೆಪಿಗೆ ಬುನಾದಿ ಹಾಕಿದ್ರು. ಅಂದು ಚುನಾವಣೆಯಲ್ಲಿ ಬಿಜೆಪಿ ಸೋತರೂ ಬಿಜೆಪಿ ಗಟ್ಟಿಯಾಗಲು ನಾಂದಿ ಹಾಡಿದ್ರು.

sonia gandhi sushma swaraj

ಬಿಜೆಪಿ ತೆಕ್ಕೆಗೆ ಬಳ್ಳಾರಿ
ಬಳಿಕ 2004ರಲ್ಲಿ ನಡೆದ ಚುನಾವಣೆಯಲ್ಲಿ ಕರುಣಾಕರ ರೆಡ್ಡಿ ಭರ್ಜರಿ ಗೆಲುವು ಸಾಧಿಸಿದ್ರು. ಅಲ್ಲಿವರೆಗೂ ಕಾಂಗ್ರೆಸ್ ಭದ್ರಕೋಟೆಯಾಗಿದ್ದ ಬಳ್ಳಾರಿ ಬಿಜೆಪಿ (BJP) ತೆಕ್ಕೆಗೆ ಬಂತು. ನಂತರ 2009ರಲ್ಲಿ ಜೆ. ಶಾಂತಾ, 2014ರಲ್ಲಿ ಶ್ರೀರಾಮುಲು ಮತ್ತು 2019 ವೈ.ದೇವೇಂದ್ರಪ್ಪ ಗೆಲ್ಲುವ ಮೂಲಕ ಬಿಜೆಪಿ ಲೋಕಸಭೆ ಚುನಾವಣೆಯಲ್ಲಿ ಗಟ್ಟಿಯಾಗಿದೆ. ಆದ್ರೆ 2018ರಲ್ಲಿ ಶ್ರೀರಾಮುಲು (Sriramulu) ರಾಜೀನಾಮೆಯಿಂದ ನಡೆದ ಉಪಚುನಾವಣೆಯಲ್ಲಿ ಕಾಂಗ್ರೆಸ್‌ನ ಉಗ್ರಪ್ಪ ಗೆದ್ದಿದ್ದರು. ಆದ್ರೆ 2019 ರಲ್ಲಿ ಮತ್ತೊಮ್ಮೆ ಸ್ಪರ್ಧೆ ಮಾಡಿ ಸೋತ್ರು. ಇದನ್ನೂ ಓದಿ: ಕರ್ನಾಟಕ ಸೇರಿ 6 ರಾಜ್ಯಗಳ ಕೈ ಅಭ್ಯರ್ಥಿಗಳ ಪಟ್ಟಿ ಫೈನಲ್‌ – ಈ ಬಾರಿಯೂ ವಯನಾಡಿನಿಂದ ರಾಹುಲ್‌ ಸ್ಪರ್ಧೆ?

ಬಿಜೆಪಿಯ ಹಾಲಿ ಲೋಕಸಭಾ ಸದಸ್ಯರಾದ ವೈ.ದೇವೇಂದ್ರಪ್ಪಗೆ ವಯೋಮಾನದ ಕಾರಣ ಟಿಕೆಟ್ ನೀಡುವುದು ಅನುಮಾನ. ಹೀಗಾಗಿ ಈ ಬಾರಿ ಕಳೆದ ವಿಧಾನಸಭೆಯಲ್ಲಿ ಸೋತಿರುವ ಮಾಜಿ ಸಚಿವ ಶ್ರೀರಾಮುಲು ಅವರ ಹೆಗಲಿಗೆ ಜವಾಬ್ದಾರಿ ಬರಲಿದೆ. ಕಾರಣ, ಒಂದು ಕಡೆ ಬಳ್ಳಾರಿ ಜಿಲ್ಲೆಯ ಐದು ಕ್ಷೇತ್ರದಲ್ಲಿ ಕಾಂಗ್ರೆಸ್ ಗೆದ್ದು ಬೀಗಿದೆ. ಮೇಲಾಗಿ ಇದೊಂದು ಮೀಸಲು ಕ್ಷೇತ್ರ ಆದ ಕಾರಣ, ಮೀಸಲು ಕ್ಷೇತ್ರದಲ್ಲಿ ಶ್ರೀರಾಮುಲು ಅವರನ್ನು ಬಿಟ್ಟು ಈಗ ಬೇರೆ ಬಲಿಷ್ಠ ನಾಯಕರ ಕೊರತೆ ಇದೆ. ಹೀಗಾಗಿ ಬಹುತೇಕ ಶ್ರೀರಾಮುಲು ಅವರ ಸ್ಪರ್ಧೆ ಬಳ್ಳಾರಿಯಿಂದ ಆಗುವ ಸಾಧ್ಯತೆ ಹೆಚ್ಚಿದೆ.

Sriramulu 1 1

ಕಳೆದ ಚುನಾವಣೆಯಲ್ಲಿ ಏನಾಗಿತ್ತು?
2019 ರ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ವೈ.ದೇವೇಂದ್ರಪ್ಪ (Devendrappa) ಗೆಲುವು ದಾಖಲಿಸಿದ್ದರು. ಕಾಂಗ್ರೆಸ್‌ನ (Congress) ವಿ.ಎಸ್.ಉಗ್ರಪ್ಪ (V.S.Ugrappa) ವಿರುದ್ಧ 25,707 ಮತಗಳ ಅಂತರದಿಂದ ಗೆದ್ದಿದ್ದರು. ಇದನ್ನೂ ಓದಿ: ಗೃಹ ಬಳಕೆಯ ಎಲ್‌ಪಿಜಿ ಸಿಲಿಂಡರ್‌ ದರ 100 ರೂ. ಇಳಿಕೆ – ಮಹಿಳಾ ದಿನಾಚರಣೆಗೆ ಮೋದಿ ಗಿಫ್ಟ್‌

ವಿಜಯನಗರ ಜಿಲ್ಲೆಯಿಂದ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಗಳು
ಗುಜ್ಜಲ್ ನಾಗರಾಜ,
ನಾಗಮಣಿ ಜಿಂಕಾಲ್

UGRAPPA

ಬಳ್ಳಾರಿ ಜಿಲ್ಲೆಯಿಂದ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಗಳು
ಬಿ.ನಾಗೇಂದ್ರ ಅವರ ಸಹೋದರ ಬಿ. ವೆಂಕಟೇಶ್ ಪ್ರಸಾದ್
ಮಾಜಿ ಸಂಸದ ವಿ.ಎಸ್.ಉಗ್ರಪ್ಪ

ಅವಳಿ ಜಿಲ್ಲೆಯ ಶಾಸಕರು
ಬಳ್ಳಾರಿ- ಕಾಂಗ್ರೆಸ್ – ಭರತ್ ರೆಡ್ಡಿ
ಬಳ್ಳಾರಿ ಗ್ರಾಮಾಂತರ – ಕಾಂಗ್ರೆಸ್ ಬಿ ನಾಗೇಂದ್ರ
ಸಂಡೂರು – ಕಾಂಗ್ರೆಸ್ – ಈ ತುಕಾರಾಂ
ಕಂಪ್ಲಿ – ಕಾಂಗ್ರೆಸ್ – ಗಣೇಶ್
ಹೊಸಪೇಟೆ – ಕಾಂಗ್ರೆಸ್ – ಹೆಚ್ ಆರ್ ಗವಿಯಪ್ಪಾ
ಕೂಡ್ಲಿಗಿ – ಕಾಂಗ್ರೆಸ್ – ಎನ್ ಟಿ ಶ್ರೀನಿವಾಸ
ಹಡಗಲಿ – ಬಿಜೆಪಿ ಕೃಷ್ಣ ನಾಯಕ್
ಹಗರಿಬೊಮ್ಮನ ಹಳ್ಳಿ – ಜೆಡಿಎಸ್ ನೇಮಿರಾಜ್ ನಾಯಕ್

ಮತದಾರರ ವಿವರ
ಪುರುಷ ಮತದಾರರು : 8,71,991
ಮಹಿಳಾ ಮತದಾರರು : 8,80,488
ಇತರೆ- 232
ಒಟ್ಟು ಮತದಾರರು : 17,52,632

ಜಾತಿವಾರು ಲೆಕ್ಕಾಚಾರ (ಅಂದಾಜು)
ಲಿಂಗಾಯತರು-3,50,000
ಪರಿಶಿಷ್ಟ ಜಾತಿ- 3,15,000
ಪರಿಶಿಷ್ಟ ಪಂಗಡ – 3,25,000
ಕುರುಬ-2,20,000
ಮುಸ್ಲಿಂ-2,00,000
ಬಲಿಜ- 40,000
ನೇಕಾರ-28,000
ಯಾದವ- 39,000
ಗಂಗಾಮತಸ್ಥ- 40,000
ಉಪ್ಪಾರ- 28,000
ಮಡಿವಾಳ-25,000
ಬ್ರಾಹ್ಮಣ-28,000
ರೆಡ್ಡಿ-20,000
ಕಮ್ಮಾರ-25,000
ವೈಶ್ಯರು-20,000
ಇತರೆ-30,000

TAGGED:B. SriramulubellaryBellary Lok SabhabjpcongressjdsLok Sabha elections 2024V.S.Ugrappa
Share This Article
Facebook Whatsapp Whatsapp Telegram

Cinema news

kavya gowda
ನಟಿ ಕಾವ್ಯ ಗೌಡ, ಪತಿ ಮೇಲೆ ಹಲ್ಲೆ ಆರೋಪ; ದೂರು ದಾಖಲು
Cinema Latest Main Post Sandalwood
Raghavendra Chitravani 1
ರಾಘವೇಂದ್ರ ಚಿತ್ರವಾಣಿಗೆ 50ರ ಸಂಭ್ರಮ – ಸಿನಿ ಗಣ್ಯರಿಂದ ಲೋಗೋ ಲಾಂಚ್
Cinema Latest Sandalwood Top Stories
Gilli Nata 6
ಚನ್ನಪಟ್ಟಣದಲ್ಲಿ ಗಿಲ್ಲಿ ಕ್ರೇಜ್ – ವೇದಿಕೆ ಏರಿದ ಅಭಿಮಾನಿಗಳ ನಿಯಂತ್ರಣಕ್ಕೆ ಪೊಲೀಸರ ಹರಸಾಹಸ
Cinema Districts Karnataka Latest Ramanagara States Top Stories
Anantha Padmanabha
ಹಿಟ್‌ ಡೈಲಾಗ್‌ ರೈಟರ್‌ ಪ್ರಶಾಂತ್‌ ರಾಜಪ್ಪ ನಿರ್ದೇಶನದ ಚೊಚ್ಚಲ ಚಿತ್ರದ ಟೈಟಲ್ ರಿವೀಲ್
Cinema Latest Sandalwood

You Might Also Like

Dharmendra Pradhan
Latest

ಯಾವುದೇ ತಾರತಮ್ಯ ಮಾಡಲ್ಲ, ಕಾನೂನು ದುರುಪಯೋಗಪಡಿಸಲು ಸಾಧ್ಯವಿಲ್ಲ – UGC ಹೊಸ ನಿಯಮಕ್ಕೆ ಧರ್ಮೇಂದ್ರ ಪ್ರಧಾನ್ ಸ್ಪಷ್ಟನೆ

Public TV
By Public TV
15 minutes ago
Pariksha Pe charcha
Latest

ಪರೀಕ್ಷಾ ಪೆ ಚರ್ಚಾ ಕಾರ್ಯಕ್ರಮಕ್ಕೆ ದಾಖಲೆಯ 6.76 ಕೋಟಿ ಅಭ್ಯರ್ಥಿಗಳು ನೋಂದಣಿ

Public TV
By Public TV
32 minutes ago
Shakeel Ahmad Rahul Gandhi
Latest

ರಾಹುಲ್ ಹೇಡಿ, ಅಂಜುಬುರುಕ ಎಂದ ಮುಸ್ಲಿಂ ಕೈ ನಾಯಕನಿಗೆ ಈಗ ಬೆದರಿಕೆ ಕರೆ

Public TV
By Public TV
50 minutes ago
hd kumaraswamy 1 1
Automobile

ನಾಗಾಲೋಟದಲ್ಲಿ ಬೆಳವಣಿಗೆ ಸಾಧಿಸುತ್ತಿದೆ ದೇಶಿಯ ಆಟೋಮೊಬೈಲ್‌ ಕ್ಷೇತ್ರ : ಹೆಚ್‌ಡಿಕೆ

Public TV
By Public TV
1 hour ago
Pitbull dog
Latest

ಟ್ರಕ್ಕಿಂಗ್‌ನಲ್ಲಿ ಹಿಮಪಾತದಿಂದ ಬಾಲಕ ಸಾವು – ಊಟ, ನೀರಿಲ್ಲದೇ 4 ದಿನ ಶವದ ಪಕ್ಕದಲ್ಲೇ ಇದ್ದ ನಾಯಿ

Public TV
By Public TV
2 hours ago
Halwa ceremony
Latest

ಬಜೆಟ್‌ ಮಂಡನೆಗೂ ಮುನ್ನ ನಡೆಯಿತು ಹಲ್ವಾ ಕಾರ್ಯಕ್ರಮ – ಹಲ್ವಾ ಹಂಚೋದು ಯಾಕೆ?

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?