ರಾಯಚೂರು/ಬೀದರ್: ರಾಜ್ಯದ ಉಳಿದ 14 ಲೋಕಸಭಾ ಕ್ಷೇತ್ರಗಳಿಗೆ ಇಂದು ಮತದಾನ ಆರಂಭವಾಗಿದ್ದು, ಹಲವೆಡೆ ಮತಯಂತ್ರಗಳು ಕೈಕೊಟ್ಟಿವೆ. ಇದರಿಂದ ಅಧಿಕಾರಿಗಳ ವಿರುದ್ಧ ಸಾರ್ವಜನಿಕರು ಗರಂ ಆಗಿದ್ದಾರೆ.
ಬೆಳಗ್ಗೆ 7 ಗಂಟೆಗೆ ಮತದಾನ ಆರಂಭವಾಗಬೇಕಿತ್ತು. ಆದರೆ ಬೀದರ್ ನಗರದ ನ್ಯಾಷನಲ್ ಕಾಲೇಜಿನರುವ ಮತಗಟ್ಟೆ ಸಂಖೆ 151 ರಲ್ಲಿ ಮತಯಂತ್ರದಲ್ಲಿ ತಾಂತ್ರಿಕ ದೋಷ ಕಂಡು ಬಂದು ಹಿನ್ನೆಲೆ ಮತದಾನ ಪ್ರಾರಂಭವಾದರೂ ಇನ್ನೂ ಮತದಾನ ನಡೆಯದ ಕಾರಣ ಮತದಾರರು ಚುನಾವಣಾಧಿಕಾರಿಗಳು ಹಾಗೂ ಸಿಬ್ಬಂದಿಗೆ ಕ್ಲಾಸ್ ತೆಗೆದುಕೊಂಡಿದ್ದಾರೆ.
- Advertisement 2
ಮತಯಂತ್ರದಲ್ಲಿ ತಾಂತ್ರಿಕ ದೋಷ ಕಂಡು ಬಂದಿದ್ದು, ದೋಷ ಸರಿಪಡಿಸಲು ಅಧಿಕಾರಿಗಳು ಹರಸಾಹಸ ಪಡುತ್ತಿದ್ದಾರೆ. ನೀವು ಏನು ಕೆಲಸ ಮಾಡುತ್ತಿದ್ದೀರಿ.. ಮೊದಲೇ ನೋಡೋಕೆ ಆಗಲ್ವಾ ಎಂದು ಮತದಾರರು ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.
- Advertisement 3
ಮತ್ತೊಂದೆಡೆ ರಾಯಚೂರಿನ ಸಿಂಧನೂರು ತಾಲೂಕಿನ ಕಲ್ಮಂಗಿ ಮತಗಟ್ಟೆಯಲ್ಲೂ ಮತಯಂತ್ರ ಕೈಕೊಟ್ಟಿದೆ. ಬೆಳಗ್ಗೆ 7 ಗಂಟೆಗೆ ಆರಂಭವಾಗಬೇಕಿದ್ದ ಮತದಾನ ಅರ್ಧ ಗಂಟೆ ವಿಳಂಬವಾಗಿದೆ. ಮತದಾನ ಮಾಡಲು ಮತಗಟ್ಟೆ ಕೇಂದ್ರ ಮುಂದೆ ಜನ ಕಾದು ಕುಳಿದ ಪ್ರಸಂಗ ನಡೆಯಿತು. ಸಿಬ್ಬಂದಿ ಮತ ಯಂತ್ರ ಸರಿಪಡಿಸುತ್ತಿದ್ದಾರೆ.