ವಿಜಯಪುರ: ಬ್ಯಾಡ್ಮಿಂಟನ್ ಆಡುವ ವೇಳೆ ಹೃದಯಾಘಾತದಿಂದ (Heart Attack) ಲೋಕಾಯುಕ್ತ (Lokayukta) ಡಿವೈಎಸ್ಪಿ ಹೃದಯಘಾತದಿಂದ ಸಾವನ್ನಪ್ಪಿದ ಘಟನೆ ವಿಜಯಪುರದಲ್ಲಿ (Vijayapura) ನಡೆದಿದೆ. ಜಿಲ್ಲಾ ಲೋಕಾಯುಕ್ತದಲ್ಲಿ ಸೇವೆ ಸಲ್ಲಿಸುತ್ತಿದ್ದ ಅರುಣ್ ನಾಯಕ್ ಮೃತಪಟ್ಟ ಅಧಿಕಾರಿಯಾಗಿದ್ದಾರೆ.
ಬುಧವಾರ ಸಂಜೆ ವಿಜಯಪುರ ಜಿಲ್ಲಾ ಕ್ರೀಡಾಂಗಣದಲ್ಲಿ ಬ್ಯಾಡ್ಮಿಂಟನ್ ಆಡುವ ವೇಳೆ ಅರುಣ್ ನಾಯಕ್ ಅಸ್ವಸ್ಥರಾಗಿದ್ದರು. ಕೂಡಲೇ ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೇ ಅವರು ತಡರಾತ್ರಿ ಸಾವಿಗೀಡಾಗಿದ್ದಾರೆ. ಅವರಿಗೆ ಪತ್ನಿ ಹಾಗೂ ಓರ್ವ ಪುತ್ರ ಇದ್ದು, ಪುತ್ರ ಬೆಂಗಳೂರಿನಲ್ಲಿ ವೈದ್ಯರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಇದನ್ನೂ ಓದಿ: ಕರಾವಳಿ, ಉತ್ತರ ಒಳನಾಡಿನಲ್ಲಿ 5 ದಿನ ಭಾರೀ ಮಳೆ ಸಾಧ್ಯತೆ
ಮಗನೊಂದಿಗೆ ಬೆಂಗಳೂರಿನಲ್ಲೇ ಅರುಣ್ ನಾಯಕ್ ಪತ್ನಿ ವಾಸವಿದ್ದರು. ವಿಚಾರ ತಿಳಿಯುತ್ತಿದ್ದಂತೆ ಪತ್ನಿ ಹಾಗೂ ಪುತ್ರ ವಿಜಯಪುರಕ್ಕೆ ಆಗಮಿಸಿದ್ದಾರೆ.ಲೋಕಾಯುಕ್ತ ಅಧಿಕಾರಿಗಳು ಸೇರಿದಂತೆ ಇತರೆ ಅಧಿಕಾರಿಗಳು ಆಸ್ಪತ್ರೆಗೆ ತೆರಳಿ ಮೃತರಿಗೆ ಅಂತಿಮ ನಮನ ಸಲ್ಲಿಸಿದ್ದಾರೆ. ಇದನ್ನೂ ಓದಿ: ಶಂಕಿತ ಉಗ್ರರಿಗೆ ಬೆಂಗಳೂರು ಮಾತ್ರವಲ್ಲ ಹಿಂದೂ ನಾಯಕರೂ ಟಾರ್ಗೆಟ್!
Web Stories